
ವಿಧಾನ-ಕದನ 2023: ಉಡುಪಿ ಬಿಜೆಪಿಯಲ್ಲಿ ಹೊಸ ಮುಖಗಳ ಪ್ರಯೋಗಕ್ಕೆ ಕಾಲ ಕೂಡಿ ಬಂತೇ?
Team Udayavani, Mar 27, 2023, 7:47 AM IST

ಉಡುಪಿ ಜಿಲ್ಲೆಯಲ್ಲಿ ಈ ಬಾರಿ ಬಿಜೆಪಿಯು ಟಿಕೆಟ್ ಹಂಚಿಕೆಯಲ್ಲಿ ಗೊಂದಲಕ್ಕಿಂತ ಕಾದು ನೋಡುವ ತಂತ್ರ ಅನುಸರಿಸುತ್ತಿದೆ. ತನ್ನದೇ ಸಮೀಕ್ಷೆಯಲ್ಲಿ ವ್ಯಕ್ತವಾಗಿರುವ ಬದಲಾವಣೆ ಹಾಗೂ ಹೊಸ ಮುಖಗಳ ಪರಿಚಯದಂಥ ಅಂಶಗಳಿಗೆ ಮನ್ನಣೆ ನೀಡಲು ಮನಸ್ಸು ಹದಗೊಳಿಸಿಕೊಂಡಿದೆ. ಪ್ರತಿಸ್ಪರ್ಧಿಗಳ ತಂತ್ರಗಳನ್ನು ಆಧರಿಸಿ ನಿರ್ಧರಿಸಲಿದೆ.
ಮೂಲಗಳ ಪ್ರಕಾರ ಹೌದು. ಉಡುಪಿ ಜಿಲ್ಲೆಯ ಎರಡು ಅಥವಾ ಮೂರು ಕ್ಷೇತ್ರದಲ್ಲಿ ಈ ಬಾರಿ ಹೊಸ ಪ್ರಯೋಗ ನಡೆಯುವ ಸಾಧ್ಯತೆ ಕಂಡು ಬರುತ್ತಿದೆ. ಈ ಬಾರಿ ಪ್ರತೀ ಕ್ಷೇತ್ರದಲ್ಲೂ ಟಿಕೆಟ್ ನೀಡುವಾಗ ಹಲವು ಹಂತಗಳ ಸಮೀಕ್ಷೆಗಳನ್ನೂ ನಡೆಸಿ ಅದರಲ್ಲಿನ ಅಂಶಗಳನ್ನೂ ಮುಖ್ಯವಾಗಿ ಪರಿಗಣಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗಿಂತ ಹೊಸ ಮುಖಕ್ಕೆ ಆದ್ಯತೆ ನೀಡಿದರೆ, ಕ್ಷೇತ್ರ ಉಳಿಸಿಕೊಳ್ಳುವ ಸಾಧ್ಯತೆ ಹೆಚ್ಚು ಎಂಬ ಅಂಶ ಉಲ್ಲೇಖವಾಗಿದೆ. ಇದಕ್ಕೆ 3-4 ಅವಧಿ ಕಂಡಲ್ಲಿ ಹೊಸ ಮುಖದ ಆಗ್ರಹ, ಇನ್ನು ಕೆಲವೆಡೆ ಬದಲಾವಣೆಯ ಕೂಗು ಸಹ ಸೇರಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ವರಿಷ್ಠರು ಹೊಸ ಮುಖಗಳನ್ನು ಪರಿಚಯಿಸಿ ಹಾಲಿ ವಿರೋಧಿ ಅಲೆಯ ದುಷ್ಪರಿಣಾಮ ತಡೆಯಲು ಸಜ್ಜಾಗುತ್ತಿದ್ದಾರೆ. ಅದಕ್ಕೆ ತಕ್ಕಂತೆ ಜಾತಿ ಲೆಕ್ಕಾಚಾರವನ್ನೂ ಗಮನದಲ್ಲಿಟ್ಟುಕೊಂಡು ತಂತ್ರ ಹೂಡುತ್ತಿದ್ದಾರೆ ಎನ್ನಲಾಗಿದೆ.
ಬಿಜೆಪಿ ಟಿಕೆಟ್ ಹಂಚಿಕೆ ಮಾಡುವಾಗ ಕಾಪುವಿನಲ್ಲಿ ಮೊಗವೀರ, ಉಡುಪಿಯಲ್ಲಿ ಬ್ರಾಹ್ಮಣ, ಕಾರ್ಕಳದಲ್ಲಿ ಬಿಲ್ಲವ, ಕುಂದಾಪುರ ಮತ್ತು ಬೈಂದೂರಿನಲ್ಲಿ ಬಂಟ ಸಮುದಾಯಕ್ಕೆ ಇದುವರೆಗೆ ಆದ್ಯತೆ ನೀಡಿದೆ. ಈ ಬಾರಿಯೂ ಒಟ್ಟೂ ಜಾತಿ ಲೆಕ್ಕಾಚಾರದಲ್ಲಿ ಏರುಪೇರಾಗದು. ಆದರೆ ಕ್ಷೇತ್ರ ಹಂಚಿಕೆಯಲ್ಲಿ ಅದಲು ಬದ ಲಾಗುವ ಸಾಧ್ಯತೆ ಕೇಳಿಬರುತ್ತಿದೆ.
ಇವೆಲ್ಲವೂ ಸರಿಯಾದರೆ ಬಿಜೆಪಿ ಹೊಸ ಮುಖಗಳ ಪ್ರಯೋಗದ ಜತೆಗೆ ಜಾತಿ ಲೆಕ್ಕ ವಾರು ಅದಲು ಬದಲಿನಲ್ಲೂ ಹೊಸ ಪ್ರಯೋಗ ನಡೆಸಿದಂತಾಗಲಿದೆ. ಇದಕ್ಕೆ ಪೂರಕವಾಗಿ ಕಾಂಗ್ರೆಸ್ ಕೂಡ ಜಿಲ್ಲೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಹತ್ತಾರು ತಂತ್ರಗಳನ್ನು ರೂಪಿಸುತ್ತಿದೆ.
ಈಗಾಗಲೇ ಬೈಂದೂರಿನಲ್ಲಿ ಗೋಪಾಲ ಪೂಜಾರಿ ಹಾಗೂ ಕಾಪುವಿನಲ್ಲಿ ವಿನಯ ಕುಮಾರ್ ಸೊರಕೆ ಹೆಸರು ಖಚಿತವಾಗಿದೆ. ಕಾಂಗ್ರೆಸ್ ಈಗಾಗಲೇ ಕಾಪು, ಬೈಂದೂರು ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ಆರಂಭಿಸಿದೆ. ಕಾರ್ಕಳ ಮತ್ತು ಉಡುಪಿಯಲ್ಲಿ ಅಭ್ಯರ್ಥಿ ಅಂತಿಮವಾಗಬೇಕಿದ್ದು, ಪ್ರಸ್ತುತ ಪಕ್ಷದ ನೆಲೆಯಲ್ಲಿ ಪ್ರಚಾರ ಚಾಲ್ತಿಯಲ್ಲಿದೆ. ಆದರೆ ಬಿಜೆಪಿಯ ತಂತ್ರವನ್ನು ಆಧರಿಸಿ ಈ ಎರಡು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸುವ ಆಲೋಚನೆಯಲ್ಲಿದೆ. ಈ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿತಂತ್ರ ರೂಪಿಸುವ ಸಾಧ್ಯತೆಯಿದೆ. ಬಿಜೆಪಿ ಕೂಡ ಕಾಂಗ್ರೆಸ್ ಟಿಕೆಟ್ ಹಂಚಿಕೆಯ ಲೆಕ್ಕಾಚಾರವನ್ನು ಗಮನಿಸುತ್ತಿದೆ. ಇದರ ಆಧಾರದಲ್ಲೇ ಹೊಸ ಪ್ರಯೋಗದ ಭವಿಷ್ಯವೂ ನಿರ್ಧಾರವಾಗಲಿದೆ.
~ ರಾಜು ಖಾರ್ವಿ
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್ ಕಾರಣವೇ?
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ