ವಿಧಾನ ಪರಿಷತ್ ಚುನಾವಣೆ: ಮತಗಟ್ಟೆಯೊಳಗೆ ಮೊಬೈಲ್ ನಿಷೇಧಿಸುವಂತೆ ಐವಾನ ಡಿಸೋಜಾ ಒತ್ತಾಯ
Team Udayavani, Dec 7, 2021, 3:36 PM IST
ಚಿಕ್ಕೋಡಿ: ವಿಧಾನ ಪರಿಷತ್ ಚುನಾವಣೆ ನ್ಯಾಯ ಸಮ್ಮತ್ತ ನಡೆಯುವ ದೃಷ್ಟಿಯಿಂದ ಚುನಾವಣೆ ಆಯೋಗ ರಾಜ್ಯದ ಪ್ರತಿ ಮತಗಟ್ಟೆ ಒಳಗೆ ಮತದಾರರಿಗೆ ಮೊಬೈಲ್ ನಿಷೇಧ ಮಾಡಬೇಕು ಎಂದು ಕಾಂಗ್ರೆಸ್ ಚುನಾವಣೆ ವಿಕ್ಷಕ ಐವಾನ ಡಿಸೋಜಾ ಮನವಿ ಮಾಡಿದರು.
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಬಳಿ ಮೊಬೈಲ್ ಇರುವುದರಿಂದ ಮತಗಟ್ಟೆಯೊಳಗೆ ಮತದಾನ ಮಾಡಿರುವ ಪೋಟೋ ಅಥವಾ ವಿಡಿಯೋ ಮಾಡಿಕೊಂಡು ಸಂಬಂಧಿಸಿದ ಅಭ್ಯರ್ಥಿ ಬಳಿ ಹಣ ಕೇಳುವ ಸಂಭವ ಇದ್ದು, ಆಯೋಗ ಮೊಬೈಲ್ ನಿಷೇಧ ಮಾಡಬೇಕೆಂದು ಒತ್ತಾಯಿಸಿದರು.
ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ವಿಕ್ಷಕರಾಗಿ ನೇಮಕವಾದ ಬಳಿಕ ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಕಳೆದ ಎಂಟು ದಿನಗಳಿಂದ ಈ ಭಾಗದ ಎಂಟು ವಿಧಾನಸಭೆ ಕ್ಷೇತ್ರಗಳಿಗೆ ಭೇಟಿ ನೀಡಲಾಗಿದೆ. ಬ್ಲಾಕ್ ಹಂತದಲ್ಲಿ ಮತದಾರರನ್ನು ಭೇಟಿ ಮಾಡಿ ಜನರ ಅಭಿಪ್ರಾಯ ಪಡೆಯಲಾಗಿದೆ ಎಂದರು.
ಜಿಲ್ಲೆಯ ಎಲ್ಲ ನಾಯಕರ ಒಮ್ಮತ್ತದ ಆಭ್ಯರ್ಥಿಯಾದ ಚೆನ್ನರಾಜ ಹಟ್ಟಿಹೊಳಿ ಅವರು ಪ್ರಥಮ ಪ್ರಾಶಸ್ತ್ಯ ಮತಗಳಿಂದ ಆಯ್ಕೆಯಾಗಲಿದ್ದು, ಇಡೀ ರಾಜ್ಯದಲ್ಲಿ ಕಾಂಗ್ರೆಸ್ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಅಧಿಕಾರ ಹಿಡಿದಾಗಿನಿಂದ ಜನರಿಗೆ ಸುಳ್ಳು ಭರವಸೆ ನೀಡುತ್ತಾ ಬಂದಿದೆ. ಬಿಜೆಪಿ ಪಕ್ಷದ ವಿರುದ್ಧ ಜನ ಬೇಸತ್ತು ಹೋಗಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಬರುವ ಫಲಿತಾಂಶ ಮುಂದಿನ ಚುನಾವಣೆಗೆ ದಿಕ್ಸೂಚಿಯಾಗಲಿದೆ ಎಂದರು.
ಇದನ್ನೂ ಓದಿ:ಪರಿಷತ್ ನಲ್ಲಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ ಬರುವ ವಿಶ್ವಾಸವಿದೆ: ಮಾಜಿ ಸಿಎಂ ಬಿಎಸ್ ವೈ
ಪಂಚಾಯತ್ ರಾಜ್ ವ್ಯವಸ್ಥೆಗೆ ಕಾಂಗ್ರೆಸ್ ಕೊಡುಗೆ ಅಪಾರವಾಗಿದೆ. ಸ್ಥಳೀಯ ಸಂಸ್ಥೆಯಲ್ಲಿ ಮಹಿಳೆಯರಿಗೆ ಶೇ 50 ರಷ್ಟು ಮೀಸಲಾತಿ. ನರೇಗಾ ಯೋಜನೆ ಮತ್ತು ಪಂಚಾಯತ್ ಸಬಲೀಕಣರಕ್ಕೆ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರವಾಗಿದೆ. ಇದರಿಂದ ಕಾಂಗ್ರೆಸ್ ಪಕ್ಷದ ಹೆಚ್ಚಿನ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ಶಾಸಕ ಗಣೇಶ ಹುಕ್ಕೇರಿ, ಪ್ರಭಾಕರ ಕೋರೆ, ಅನಿಲ ಸುಣದೋಳಿ, ಮಹೇಶ ಹಟ್ಟಿಹೊಳಿ, ಸಾಭೀರ ಜಮಾದಾರ, ಅನಿಲ ಪಾಟೀಲ, ಎಚ್.ಎಸ್.ನಸಲಾಪೂರೆ, ಪ್ರದೀಪ ಪಾಟೀಲ, ಗುಲಾಬ ಬಾಗವಾನ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ