Election Result 2022: ನಾಲ್ಕು ರಾಜ್ಯಗಳು ಬಿಜೆಪಿಗೆ; ಪಂಜಾಬ್ ನಲ್ಲಿ ಆಪ್ ಜಯಭೇರಿ

ಪಂಚ ರಾಜ್ಯಗಳ ಸಂಖ್ಯಾ ಬಲ ಇಂತಿದೆ

Team Udayavani, Mar 10, 2022, 7:40 PM IST

BJP FLAG

ನವದೆಹಲಿ : ದೇಶದ ರಾಜಕೀಯದ ದಿಕ್ಸೂಚಿ ಎಂದು ಪರಿಗಣಿಸಲಾದ ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಗುರುವಾರ ಪ್ರಕಟವಾಗಿದ್ದು,ಉತ್ತರಪ್ರದೇಶ, ಉತ್ತರಾಖಂಡ, ಗೋವಾ ಮತ್ತು ಮಣಿಪುರಗಳಲ್ಲಿ ಬಿಜೆಪಿ ಅಧಿಕಾರ ಉಳಿಸಿಕೊಂಡರೆ, ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವವಾಗಿ ಗೆದ್ದು ಅಧಿಕಾರಕ್ಕೆ ಬಂದು ಹೊಸ ಭರವಸೆ ಮೂಡಿಸಿದೆ.

ಉತ್ತರಪ್ರದೇಶದಲ್ಲಿ ಯೋಗಿಗೆ ಮತ್ತೆ ಸಿಎಂ ಆಗುವ ಯೋಗ

403 ಸದಸ್ಯ ಬಲದ ಉತ್ತರಪ್ರದೇಶದಲ್ಲಿ ಸಿಎಂ ಯೋಗಿ ಆದಿತ್ಯನಾಥ್ ಅವರ ನಾಯಕತ್ವದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದಿದ್ದು, ಮಿತ್ರ ಪಕ್ಷಗಳು ಹಲವು ಸ್ಥಾನಗಳಲ್ಲಿ ಗೆದ್ದಿವೆ. ಬಿಜೆಪಿ 252 ಸ್ಥಾನ ಗೆದ್ದಿದ್ದು, ಎನ್ ಡಿಎ ಮೈತ್ರಿ ಕೂಟದ ಅಪ್ನಾ ದಳ(ಸೋನೆಲಾಲ್ ) 11, ನಿರ್ಬಲ್ ಇಂಡಿಯನ್ ಶೋಷಿತ್ ಹಮಾರಾ ಆಮ್ ದಳ(ನಿಶದ್) 7 ಸ್ಥಾನ ಗೆದ್ದು ಗಮನ ಸೆಳೆದಿದೆ. ಪ್ರಮುಖ ವಿಪಕ್ಷ ಅಖಿಲೇಶ್ ಯಾದವ್ ಅವರ ನಾಯಕತ್ವದ ಸಮಾಜವಾದಿ ಪಕ್ಷ 114 ಸ್ಥಾನ ಗೆದ್ದಿದೆ. , ಬಿಎಸ್ ಪಿ ಕೇವಲ ಒಂದು ಸ್ಥಾನ ಗೆದ್ದಿದ್ದು ಎಂದೂ ಕಂಡರಿಯದ ಮುಖಭಂಗ ಅನುಭವಿಸಿದೆ. ಕಾಂಗ್ರೆಸ್ ಭಾರಿ ಪ್ರಚಾರ ಕೈಗೊಂಡರೂ ಕೇವಲ 2 ಸ್ಥಾನಕ್ಕೆ ತೃಪ್ತಿ ಪಡಬೇಕಾಗಿದೆ. ಜನಸತ್ತಾ ದಳ ಡೆಮಾಕ್ರಟಿಕ್ 2 ಸ್ಥಾನ ಗೆದ್ದಿದೆ. ಎಸ್ ಪಿ ಮಿತ್ರಪಕ್ಷ ಆರ್ ಎಲ್ ಡಿ 8 ಸ್ಥಾನಗಳನ್ನು ಗೆದ್ದಿದೆ. ಸುಹೇಲ್ದೇವ್ ಭಾರತೀಯ ಸಮಾಜ 6 ಸ್ಥಾನಗಳನ್ನು ಗೆದ್ದಿದೆ.

ಪಂಜಾಬ್ ಆಮ್ ಆದ್ಮಿಗೆ ಭಗವಂತನ ಕೃಪೆ

ಸಿಖ್ಭರ ನಾಡು ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ದೈತ್ಯ ಶಕ್ತಿಯಾಗಿ ಹೊರ ಹೊಮ್ಮಿದೆ. 117 ಸ್ಥಾನಗಳ ಪೈಕಿ ಭಗವಂತ್ ಮಾನ್ ಅವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದ್ದ ಆಮ್ ಆದ್ಮಿ ಪಾರ್ಟಿ 92 ಸ್ಥಾನಗಳನ್ನು ಗೆದ್ದು ಅಭೂತಪೂರ್ವ ಐತಿಹಾಸಿಕ ಗೆಲುವು ತನ್ನದಾಗಿಸಿಕೊಂಡಿದೆ. ಆಡಳಿತ ಪಕ್ಷವಾಗಿದ್ದ ಕಾಂಗ್ರೆಸ್ 18 ಸ್ಥಾನಗಳನ್ನು ಗೆದ್ದಿದ್ದು, ಭಾರಿ ಮುಖಭಂಗ ಅನುಭವಿಸಿದೆ. ಸಿಎಂ ಚರಣ್ ಜಿತ್ ಸಿಂಗ್ ಚೆನ್ನಿ, ನವಜೋತ್ ಸಿಂಗ್ ಸಿಧು ಸೇರಿ ಘಟಾನುಘಟಿ ನಾಯಕರುಗಳೆಲ್ಲ ಸೋಲು ಅನುಭವಿಸಿದ್ದಾರೆ. ಬಿಜೆಪಿ ಕೇವಲ 2 ಸ್ಥಾನಗಳಿಗೆ ತೃಪ್ತಿ ಪಟ್ಟುಕೊಂಡಿದೆ. ಶಿರೋಮಣಿ ಅಕಾಲಿ ದಳ 3, ಬಿಎಸ್ ಪಿ 1, ಪಕ್ಷೇತರ 1 ಸ್ಥಾನ ಪಡೆದುಕೊಂಡಿದ್ದಾರೆ.

ಉತ್ತರಾಖಂಡದದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ, ಸಿಎಂ ಗೆ ಆಘಾತ 

70 ಸ್ಥಾನಗಳ ಪೈಕಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ ಭರ್ಜರಿ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ. ಅಚ್ಚರಿಯೆಂದರೆ ಮತದಾರರು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಸೋಲು ಉಣಿಸಿದ್ದಾರೆ. ಸದ್ಯ ಯಾರು ಮುಂದಿನ ಸಿಎಂ ಆಗಲಿದ್ದಾರೆ ಎನ್ನುವ ಕುತೂಹಲ ಮೂಡಿದೆ. ಕಾಂಗ್ರೆಸ್ 19 ಸ್ಥಾನಗಳನ್ನು ಗೆದ್ದು ಪ್ರಮುಖ ವಿಪಕ್ಷವಾಗಿದೆ. ಬಿಎಸ್ ಪಿ 2, ಪಕ್ಷೇತರರು 2 ಸ್ಥಾನಗಳನ್ನು ಗೆದ್ದಿದ್ದಾರೆ.

ಗೋವಾದಲ್ಲಿ ಬಿಜೆಪಿಗೆ ಮತ್ತೆ ಅಧಿಕಾರ

40 ಸದಸ್ಯ ಬಲದ ಗೋವಾ ದಲ್ಲಿ ಬಿಜೆಪಿ 20 ಸ್ಥಾನಗಳನ್ನು ಗೆದ್ದು ಅತಿದೊಡ್ಡ ಪಕ್ಷವಾಗಿದ್ದು, ಸರಕಾರ ರಚಿಸಲಿದೆ. ಬಿಜೆಪಿಗೆ ಮೂವರು ಇತರರು ಈಗಾಗಲೇ ಬೆಂಬಲ ವ್ಯಕ್ತಪಡಿಸಿದ್ದು, ಪ್ರಮೋದ್ ಸಾವಂತ್ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ. ಕಾಂಗ್ರೆಸ್ 11 , ಆಮ್ ಆದ್ಮಿ ಪಕ್ಷ 2 , ಪಕ್ಷೇತರರು 3 , ಎಂಜಿಪಿ 2 ಮತ್ತು ಆರ್ ಜಿಪಿ 1 ಸ್ಥಾನ ಗೆದ್ದಿದೆ.

ಮಣಿಪುರದಲ್ಲಿ ಬಿಜೆಪಿಗೆ ಸಲಾಂ

60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನಗಳನ್ನು ಪಡೆದು ಸ್ಪಷ್ಟ ಬಹುಮತ ಪಡೆದಿದೆ. ಸಂಯುಕ್ತ ಜನತಾ ದಳ 6 ಸ್ಥಾನ, ಕಾಂಗ್ರೆಸ್ 4, ಕುಕಿ ಪೀಪಲ್ಸ್ ಮೈತ್ರಿಕೂಟ 2 , ನಾಗಾ ಪೀಪಲ್ಸ್ ಫ್ರಂಟ್ 5 , ಎಂಪಿಪಿ 8 ಮತ್ತು ಪಕ್ಷೇತರರು 3 ಸ್ಥಾನಗಳನ್ನು ಗೆದ್ದಿದ್ದಾರೆ. ಬಿರೇನ್ ಸಿಂಗ್ ಅವರು ಮತ್ತೆ ಸಿಎಂ ಆಗಲಿದ್ದಾರೆ.

ಟಾಪ್ ನ್ಯೂಸ್

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.