Election: ಗೂಂಡಾ ಕಾಯ್ದೆಯಡಿ ಇಬ್ಬರ ಸೆರೆ
Team Udayavani, Apr 12, 2023, 5:18 AM IST
ಉಡುಪಿ: ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಮಾಜ ಘಾತಕ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದ ಬೈಂದೂರಿನ ರವಿಚಂದ್ರ ಹಾಗೂ ಆತ್ರಾಡಿಯ ಸೈಫುದ್ದೀನ್ನನ್ನು ಬಂಧಿಸಲಾಗಿದೆ. ಇಬ್ಬರನ್ನೂ ಕ್ರಮವಾಗಿ ಕಲಬುರಗಿ, ಬೆಳಗಾವಿಯ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.
ರವಿಚಂದ್ರ ಬೈಂದೂರು ಠಾಣೆ ಹಾಗೂ ಹಿರಿಯಡ್ಕ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ. ಈತ 1996ರಿಂದ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದು, ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಹಿರಿಯಡ್ಕ ಠಾಣೆಗಳಲ್ಲಿ ಅಪರಾಧ ಕೃತ್ಯ ಎಸಗಿದ್ದಲ್ಲದೆ ದ.ಕ., ಕಾರವಾರ ಹಾಗೂ ಶಿವಮೊಗ್ಗ ಜಿಲ್ಲೆಯ ಠಾಣೆಗಳಲ್ಲಿಯೂ ಸಹ ಆತನ ವಿರುದ್ಧ ಹಲ್ಲೆ, ದೊಂಬಿ, ಸುಲಿಗೆ, ಕೊಲೆಗೆ ಪ್ರಯತ್ನ, ಅಪಹರಣ, ಕೋಮು ಗಲಭೆ ಸಹಿತ 21 ಪ್ರಕರಣಗಳು ದಾಖಲಾಗಿವೆ. ಆತ 65 ಮಂದಿ ಸಹಚರರ ಬಣವನ್ನೂ ಹೊಂದಿದ್ದಾನೆ.
ಆತ್ರಾಡಿಯ ಸೈಫುದ್ದೀನ್ ಹಿರಿಯಡ್ಕ ಹಾಗೂ ಉಡುಪಿ ನಗರ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಾನೆ. 1995ರಿಂದ ಅಪರಾಧ ಕೃತ್ಯಗಳನ್ನು ಎಸಗುತ್ತಿದ್ದು, ಉಡುಪಿ ನಗರ, ಹಿರಿಯಡ್ಕ, ಮಣಿಪಾಲ ಮತ್ತು ಕುಂದಾಪುರ ಠಾಣೆಗಳಲ್ಲಿ ಕೊಲೆ, ಕೊಲೆಯತ್ನ, ದೊಂಬಿ, ಹಲ್ಲೆ, ವಂಚನೆ ಸಹಿತ 19 ಪ್ರಕರಣಗಳು ದಾಖಲಾಗಿವೆ. ಈತ ಕೂಡ 34 ಸಹಚರರ ಬಣವನ್ನು ಹೊಂದಿದ್ದಾನೆ.
ಜಿಲ್ಲಾಧಿಕಾರಿ ವರದಿ ಮೇರೆಗೆ ಕ್ರಮ
ಇವರಿಬ್ಬರೂ ತಮ್ಮ ಕೃತ್ಯಗಳಿಂದ ಸಮಾಜದ ಸ್ವಾಸ್ಥ್ಯ ಕದಡುವ ವ್ಯಕ್ತಿಗಳಾಗಿದ್ದು, ವಿಧಾನಸಭಾ ಚುನಾವಣೆ ಸಂದರ್ಭ ಕಾನೂನು ಸುವ್ಯವಸ್ಥೆಗೆ ಭಂಗ ಉಂಟು ಮಾಡುವ ಸಾಧ್ಯತೆ ಇರುವುದರಿಂದ ಗೂಂಡಾ ಕಾಯ್ದೆಯಡಿ ಕ್ರಮ ಜರಗಿಸುವ ಜಿಲ್ಲಾಧಿಕಾರಿ ಮತ್ತು ಜಿಲ್ಲೆ ದಂಡಾಧಿಕಾರಿಯವರಿಗೆ ಸಲ್ಲಿಸಿದ ವರದಿಯ ಮೇರೆಗೆ ಕ್ರಮ ಜರಗಿಸಿ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ