Election Update: ಸೋಮಣ್ಣಗೆ ಟಿಕೆಟ್‌: ಶಮನಗೊಳ್ಳದ ಅಸಮಾಧಾನ

ಸೋಮಣ್ಣ ವಿರುದ್ಧ KRIDL ಅಧ್ಯಕ್ಷ ಎಂ. ರುದ್ರೇಶ್‌ ಬಹಿರಂಗ ಕಿಡಿ-ತಾಕತ್ತಿದ್ದರೆ ವರುಣಾ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಸವಾಲು

Team Udayavani, Apr 15, 2023, 7:41 AM IST

V SOMANN

ಚಾಮರಾಜನಗರ: ಸಚಿವ ವಿ. ಸೋಮಣ್ಣ ಅವರು ಬಯಸಿದಂತೆಯೇ ಬಿಜೆಪಿ ವರಿಷ್ಠರು ಚಾಮರಾಜನಗರ ಕ್ಷೇತ್ರದ ಟಿಕೆಟ್‌ ನೀಡಿದ್ದಾರೆ. ಆದರೆ ಕ್ಷೇತ್ರದಲ್ಲಿ ಟಿಕೆಟ್‌ ಬಯಸಿದ್ದ ಪ್ರಮುಖರ ಪೈಕಿ ಇಬ್ಬರು ಮುಖಂಡರ ಅಸಮಾಧಾನ ಇನ್ನೂ ಶಮನಗೊಂಡಿಲ್ಲ.

ಈ ಬಾರಿ ಸ್ವಕ್ಷೇತ್ರ ಗೋವಿಂದರಾಜನಗರಕ್ಕಿಂತ ಚಾಮರಾಜನಗರ ಕ್ಷೇತ್ರವೇ ಸುರಕ್ಷಿತ ಎನಿಸಿದ ಕಾರಣ ಸೋಮಣ್ಣ ಇಲ್ಲಿ ಟಿಕೆಟ್‌ ಬಯಸಿದ್ದರು. ಕ್ಷೇತ್ರದಲ್ಲಿ ಸ್ಥಳೀಯವಾಗಿ ಅರ್ಧ ಡಜನ್‌ಗೂ ಮಿಕ್ಕಿ ಆಕಾಂಕ್ಷಿಗಳಿದ್ದರು. ಕೆಲವು ತಿಂಗಳ ಹಿಂದೆ ಕೆಆರ್‌ಐಡಿಎಲ್‌ ಅಧ್ಯಕ್ಷ, ರಾಮನಗರದ ಎಂ. ರುದ್ರೇಶ್‌ ಕೂಡ ಆಕಾಂಕ್ಷಿಗಳ ಪಟ್ಟಿಗೆ ಸೇರ್ಪಡೆಯಾದರು. ರುದ್ರೇಶರನ್ನು ಯಡಿಯೂರಪ್ಪ ಅವರೇ ಕ್ಷೇತ್ರಕ್ಕೆ ಕಳುಹಿಸಿದ್ದಾರೆಂಬ ಮಾತುಗಳು ಪಕ್ಷದ ವಲಯದಲ್ಲಿ ಕೇಳಿಬಂದವು.

ಟಿಕೆಟ್‌ ಘೋಷಣೆ ಬಳಿಕ ಪ್ರಮುಖ ಟಿಕೆಟ್‌ ಆಕಾಂಕ್ಷಿಗಳಲ್ಲಿ ಇಬ್ಬರನ್ನು ಬಿಟ್ಟರೆ ಮಿಕ್ಕೆಲ್ಲರೂ ಪಕ್ಷದ ನಿರ್ಧಾರಕ್ಕೆ ಬದ್ಧ, ಸೋಮಣ್ಣ ಗೆಲುವಿಗೆ ಶ್ರಮಿಸುತ್ತೇವೆಂದು ಪ್ರಕಟಿಸಿದ್ದಾರೆ. ಆದರೆ ಕೆಆರ್‌ಐಡಿಎಲ್‌ ಅಧ್ಯಕ್ಷ ಎಂ. ರುದ್ರೇಶ್‌ ಬಹಿರಂಗವಾಗಿಯೇ ಸೋಮಣ್ಣ ವಿರುದ್ಧ ಕಿಡಿಕಾರಿದ್ದಾರೆ. ಕಾಂಗ್ರೆಸ್‌ಗೆ ಸೇರುತ್ತೇನೆಂದು ಬ್ಲ್ಯಾಕ್‌ವೆುಲ್‌ ಮಾಡಿದ ಅವರಿಗೆ ಎರಡು ಕಡೆ ಟಿಕೆಟ್‌ ನೀಡಿರುವುದು ಸರಿಯಲ್ಲ. ಅವರಿಗೆ ತಾಕತ್ತಿದ್ದರೆ ವರುಣಾ ಒಂದೇ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆಲ್ಲಲಿ ಎಂದು ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯೆ ಕೇಳಿದಾಗ, ನಾಯಿ ನರಿಗಳ ಮಾತಿಗೆಲ್ಲ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಕೆಂಡ ಕಾರಿದರು.

ಇತ್ತ ಸ್ಥಳೀಯ ಆಕಾಂಕ್ಷಿ, ಜಿ.ಪಂ. ಮಾಜಿ ಅಧ್ಯಕ್ಷೆ ಜಿ. ನಾಗಶ್ರೀ ಪ್ರತಾಪ್‌ ಈ ಬಾರಿ ಬಿಜೆಪಿ ಟಿಕೆಟ್‌ ತಮಗೇ ಎಂದು ಬಲವಾಗಿ ನಂಬಿದ್ದರು. ಕೋರ್‌ ಕಮಿಟಿ ಪಟ್ಟಿಯಲ್ಲಿ ಅವರ ಹೆಸರೂ ಇತ್ತು. ಚಾಮರಾಜನಗರ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ 1999ರಲ್ಲಿ ಕಮಲ ಅರಳಿಸಿದ್ದ ಶಾಸಕ ಸಿ. ಗುರುಸ್ವಾಮಿ ಅವರ ಪುತ್ರಿಯಾದ ನಾಗಶ್ರೀ ಪ್ರತಾಪ್‌ ಅವರಿಗೆ ತಮ್ಮ ತಂದೆಯವರ ಹೆಸರಿನಿಂದಾಗಿ ಸಾಕಷ್ಟು ಬೆಂಬಲಿಗರಿದ್ದಾರೆ. ಮೂರು ದಿನಗಳಿಂದಲೂ ಅವರು ಮೌನಕ್ಕೆ ಶರಣಾಗಿದ್ದಾರೆ. ಗುರುವಾರ ಅವರ ಬೆಂಬಲಿಗರು ಕಲ್ಯಾಣಮಂದಿರವೊಂದರಲ್ಲಿ ಸಭೆ ನಡೆಸಿ, ಪಕ್ಷೇತರವಾಗಿ ಸ್ಪರ್ಧಿಸುವಂತೆ ಒತ್ತಾಯಿಸಿದ್ದಾರೆ.

ಗುರುವಾರ ಸಂಜೆ ನಗರಕ್ಕೆ ಭೇಟಿ ನೀಡಿದ್ದ ಸೋಮಣ್ಣ, ನಾಗಶ್ರೀ ಅವರ ಮನೆಗೂ ಭೇಟಿ ನೀಡಿದ್ದರು. ಎ. 19ರಂದು ಚಾ.ನಗರದಲ್ಲಿ ನಾಮಪತ್ರ ಸಲ್ಲಿಸುತ್ತೇನೆ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಾನು ಏನು ಹೇಳಬೇಕೋ ಹೇಳಿದ್ದೇನೆ. ತೀರ್ಮಾನ ಆಕೆಗೇ ಬಿಟ್ಟಿದ್ದು ಎಂದು ಹೇಳಿದ್ದರು. ಇನ್ನೆರಡು ದಿನಗಳಲ್ಲಿ ನನ್ನ ತೀರ್ಮಾನ ತಿಳಿಸುತ್ತೇನೆ ಎಂದು ನಾಗಶ್ರೀ ಒಂದೇ ಮಾತಿನ ಉತ್ತರ ನೀಡಿದ್ದಾರೆ. ಅವರ ಮುಂದಿನ ನಡೆ ಇನ್ನೂ ತಿಳಿದುಬಂದಿಲ್ಲ.

~ ಕೆ.ಎಸ್‌. ಬನಶಂಕರ ಆರಾಧ್ಯ

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.