ವಿದ್ಯುತ್‌ ದರ ಏರಿಕೆ: ಗಾಯದ ಮೇಲೆ ಬರೆ ಬೇಡ


Team Udayavani, Mar 1, 2021, 6:30 AM IST

ವಿದ್ಯುತ್‌ ದರ ಏರಿಕೆ: ಗಾಯದ ಮೇಲೆ ಬರೆ ಬೇಡ

ಪೆಟ್ರೋಲ್‌, ಡೀಸೆಲ್‌ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ನಡುವೆ, ಅಗತ್ಯ ವಸ್ತುಗಳ ಬೆಲೆ ಏರಿಕೆಯೂ ಶ್ರೀಸಾಮಾನ್ಯರ ಕೈ ಸುಡುತ್ತಿದೆ. ದಿನದಿಂದ ದಿನಕ್ಕೆ ತೈಲ ಬೆಲೆ ಏರಿಕೆಯಾಗುತ್ತಲೇ ಇದ್ದು, ಇದು ಮಧ್ಯಮ ವರ್ಗದ ಪಾಲಿಗಂತೂ ನುಂಗಲಾರದ ತುತ್ತಾಗಿದೆ. ಇದರ ನಡುವೆಯೇ ರಾಜ್ಯದ ಐದು ಎಸ್ಕಾಂಗಳು ವಿದ್ಯುತ್‌ ಬೆಲೆ ಪರಿಷ್ಕರಣೆಗೆ ಮುಂದಾಗಿರುವುದು ರಾಜ್ಯದ ಜನರನ್ನು ಕಂಗೆಡಿಸಿದೆ.

ವಿಭಾಗವಾರು ಮಟ್ಟದಲ್ಲಿ ಐದೂ ಎಸ್ಕಾಂಗಳು ಸಾರ್ವಜನಿಕರ ಅಭಿಪ್ರಾಯ ಸಂಗ್ರಹ ಮಾಡಿವೆ. ಕೊರೊನಾ ಕಾರಣದಿಂದಾಗಿ ಎಪ್ರಿಲ್‌ನಲ್ಲಿ ವಿದ್ಯುತ್‌ ಬೆಲೆ ಹೆಚ್ಚಳಕ್ಕೆ ಚಿಂತನೆ ಮಾಡಿದ್ದ ಎಸ್ಕಾಂಗಳು, ನವೆಂಬರ್‌ನಲ್ಲಿ ಹೆಚ್ಚಳ ಮಾಡಿದ್ದವು. ಆಗಲೇ ಜನ ಆಕ್ರೋಶಗೊಂಡಿದ್ದರು. ಕೊರೊನಾದಿಂದಾಗಿ ದಿನನಿತ್ಯದ ಜೀವನ ನಡೆಸುವುದೇ ಕಷ್ಟವಾಗಿರುವಾಗ ವಿದ್ಯುತ್‌ ಬೆಲೆ ಏರಿಕೆ ಮಾಡಿ ಮತ್ತೆ ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುವುದು ಬೇಡ ಎಂಬುದು ಆಗ್ರಹವಾಗಿತ್ತು. ಆದರೂ ಹೆಚ್ಚಳ ಮಾಡಿದ್ದ ಕಾರಣದಿಂದಾಗಿ ಅಸಮಾಧಾನದಿಂದಲೇ ಜನ ಒಪ್ಪಿಕೊಂಡಿದ್ದರು. ಡಿಸೆಂಬರ್ನಲ್ಲೂ ತೈಲ ಬೆಲೆ ಹೊಂದಾಣಿಕೆಗಾಗಿ ಮತ್ತೆ ಪೈಸೆಗಳ ಲೆಕ್ಕಾಚಾರದಲ್ಲಿ ಬೆಲೆ ಹೆಚ್ಚಳವಾಗಿತ್ತು. ವಿಚಿತ್ರವೆಂದರೆ ಇದು ಜನರ ಗಮನಕ್ಕೆ ಬಾರದೇ ಹೋಗಿತ್ತು.

ಮತ್ತೆ ಈಗ ವಿದ್ಯುತ್‌ ಬೆಲೆ ಹೆಚ್ಚಳದ ಬಗ್ಗೆ ಎಸ್ಕಾಂ ಮಟ್ಟದಲ್ಲಿ ಮಾತುಕತೆಗಳಾಗಿವೆ. ಜನರ ಅಭಿಪ್ರಾಯ ಸಂಗ್ರಹದ ವೇಳೆ ಮತ್ತೆ ವಿದ್ಯುತ್‌ ಬೆಲೆ ಏರಿಕೆಗೆ ಸಾಕಷ್ಟು ವಿರೋಧವೂ ವ್ಯಕ್ತವಾಗಿದೆ. ಆದರೂ ಎಪ್ರಿಲ್‌ 1ರಿಂದ ಜಾರಿಯಾಗುವಂತೆ ವಿದ್ಯುತ್‌ ಬೆಲೆ ಹೆಚ್ಚಳ ಮಾಡುವ ಬಗ್ಗೆ ಎಸ್ಕಾಂಗಳು ಪರಿಶೀಲನೆಯಲ್ಲಿವೆ.

ತೈಲೋತ್ಪನ್ನ ವಸ್ತುಗಳ ಜತೆಗೆ ವಿದ್ಯುತ್‌ ದರವನ್ನೂ ಹೆಚ್ಚಿಸಿದರೆ ನಾವು ಬದುಕುವುದು ಹೇಗೆ ಎಂಬುದು ಜನರ ಪ್ರಶ್ನೆಯಾಗಿದೆ. ಒಂದು ಕಡೆ, ಸಾರ್ವಜನಿಕರ ವೆಚ್ಚ ಹೆಚ್ಚಾಗಬೇಕು. ಈ ಮೂಲಕ ಆರ್ಥಿಕತೆ ಬೆಳೆಯಬೇಕು ಎಂಬ ಕಾರಣಕ್ಕಾಗಿ ಬಜೆಟ್ನಲ್ಲಿ ಪಬ್ಲಿಕ್‌ ಸ್ಪೆಂಡಿಂಗ್‌ ಬಗ್ಗೆ ಹೆಚ್ಚು ಆದ್ಯತೆ ನೀಡಲಾಗಿದೆ. ಆದರೆ ಇತ್ತ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ಹೆಚ್ಚಾಗಿದ್ದು, ಜನ ವೆಚ್ಚ ಮಾಡಲಾರದಂಥ ಪರಿಸ್ಥಿತಿಗೆ ಬರುತ್ತಿದ್ದಾರೆ. ಪೆಟ್ರೋಲ್‌, ಡೀಸೆಲ್‌, ಅಡುಗೆ ಅನಿಲ, ವಿದ್ಯುತ್‌ ದರ ಏರಿಕೆ ಮಾಡಿದರೆ, ಇದಕ್ಕೆ ಪೂರಕವಾಗಿರುವ ವಸ್ತುಗಳ ಬೆಲೆಯೂ ಹೆಚ್ಚಾಗಿಯೇ ಆಗುತ್ತದೆ. ಅಂದರೆ ಕೈಗಾರಿಕೆಗಳಲ್ಲಿನ ವೆಚ್ಚ ಹೆಚ್ಚುವುದರಿಂದ ಇಲ್ಲಿ ಉತ್ಪಾದನೆಯಾಗುವ ವಸ್ತುಗಳ ಬೆಲೆಯೂ ಏರಿಕೆಯಾಗುತ್ತದೆ. ಇದರಿಂದ ಜನರ ಮೇಲೆ ಮತ್ತಷ್ಟು ಹೊರೆ ಬೀಳುವುದು ಖಚಿತವಾಗುತ್ತದೆ. ಹೀಗಾಗಿ ಬೆಲೆ ಹೆಚ್ಚಳಕ್ಕೆ ನಿಯಂತ್ರಣವಿಲ್ಲವೇ ಎಂಬುದು ಜನರ ಪ್ರಶ್ನೆಯಾಗಿದೆ.

ಅಷ್ಟೇ ಅಲ್ಲ ಕೊರೊನಾದಿಂದಾಗಿ ಸರಕಾರಕ್ಕೂ ಆರ್ಥಿಕ ಕೊರತೆಯುಂಟಾಗಿದೆ. ಹೀಗಾಗಿ ಬೆಲೆ ಕಡಿತ ಮಾಡಲು ಸಾಧ್ಯವಿಲ್ಲದಂಥ ಪರಿಸ್ಥಿತಿಯಾಗಿದೆ ಎಂಬಂಥ ಮಾತುಗಳೂ ಕೇಳಿಬರುತ್ತಿವೆ. ಆದರೆ ಸರಕಾರದ ಬೊಕ್ಕಸ ತುಂಬಲಿಕ್ಕೆ ಜನರ ಮೇಲೆ ಹೊರೆ ಹಾಕಿದರೆ, ಅವರ ಜೀವನ ಕಷ್ಟವಾಗುವುದಿಲ್ಲವೇ? ಕೊರೊನಾ ವೇಳೆಯಲ್ಲಿ ಸರಕಾರಕ್ಕೆ ಹಣಕಾಸಿನ ಕೊರತೆಯಾದಂತೆ, ಜನ ಸಾಮಾನ್ಯರಿಗೂ ಆಗಿಲ್ಲವೇ ಎಂಬ ಮಾತುಗಳು ಗ್ರಾಹಕರ ಕಡೆಯಿಂದ ಕೇಳಿಬರುತ್ತಿವೆ. ಹೀಗಾಗಿ ಕಷ್ಟ ಎಂಬುದು ಸರಕಾರಕ್ಕೆ ಆದಂತೆ ಜನರಿಗೂ ಆಗಿದೆ. ಸಂಪನ್ಮೂಲ ಕ್ರೋಡೀಕರಣಕ್ಕಾಗಿ ಸರಕಾರಗಳು ಜನರ ಮೇಲೆ ಹೊರೆ ಏರಬಾರದು ಎಂಬ ಆಗ್ರಹ ಜನಸಾಮಾನ್ಯರದ್ದು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.