ಎಲ್ಲೂರು ದೇಗುಲದ ಆಚರಣೆ; ಶೀಘ್ರ ತೀರ್ಮಾನ: ಕೋಟ ಶ್ರೀನಿವಾಸ ಪೂಜಾರಿ
ಪ್ರಸಾದದ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ತಗಾದೆ
Team Udayavani, Feb 17, 2023, 6:25 AM IST
ಬೆಂಗಳೂರು:ಉಡುಪಿ ಜಿಲ್ಲೆ ಕಾಪು ತಾಲೂಕಿನ ಎಲ್ಲೂರಿನ ಮಹತೋಭಾರ ವಿಶ್ವೇಶ್ವರ ದೇಗುಲದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದದ ವಿಚಾರದಲ್ಲಿ ಎರಡು ಸಮುದಾಯಗಳ ನಡುವೆ ತಗಾದೆ ಇತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿನ ತೀರ್ಮಾನದಂತೆ ಆಚರಣೆ ಸ್ಥಗಿತಗೊಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯಿಂದ ಈ ಆಚರಣೆ ಬಗ್ಗೆ ಶೀಘ್ರ ಸೂಕ್ತ ತೀರ್ಮಾನ ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಸಭಾ ನಾಯಕ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದರು.
ಗುರುವಾರ ನಿಯಮ 72ರ ಅಡಿ ವಿಷಯ ಪ್ರಸ್ತಾವಿಸಿದ ಕಾಂಗ್ರೆಸ್ನ ಯು.ಬಿ. ವೆಂಕಟೇಶ್, ವಿಶ್ವೇಶ್ವರ ದೇವಸ್ಥಾನದಲ್ಲಿ ಪುರಾತನ ಕಾಲದಿಂದಲೂ ಸಂಪ್ರದಾಯಗಳು ನಡೆದುಕೊಂಡು ಬಂದಿವೆ. ಆದರೆ, ಕಳೆದೆರಡು ವರ್ಷಗಳಿಂದ ಪ್ರಸ್ತುತ ವ್ಯವಸ್ಥಾಪನ ಸಮಿತಿಯು ಆಚರಣೆಗಳನ್ನು ಕೈಬಿಟ್ಟಿದೆ ಎಂದು ಗಮನ ಸೆಳೆದರು.
ಹಸ್ತಕ್ಷೇಪ ಮಾಡಿಲ್ಲ
ಇದಕ್ಕೆ ಪ್ರತಿಕ್ರಿಯಿಸಿದ ಸಭಾ ನಾಯಕರು, ಉದ್ದೇಶಿತ ದೇವಸ್ಥಾನದಲ್ಲಿ ತಟ್ಟೆ ಪ್ರಸಾದ ಮತ್ತು ಅಜಕಾಯಿ ಪ್ರಸಾದ ವಿಚಾರದಲ್ಲಿ ಎರಡು ಸಮುದಾಯಗಳಲ್ಲಿ ತಗಾದೆ ಇತ್ತು. ಅದನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆಗ ಸೂಕ್ತ ತೀರ್ಮಾನ ಆಗುವವರೆಗೂ ಸ್ಥಗಿತಗೊಳಿಸಲು ಜಿಲ್ಲಾಧಿಕಾರಿ ನ್ಯಾಯಾಲಯದಲ್ಲಿ ತೀರ್ಮಾನಿಸಲಾಯಿತು. ವ್ಯವಸ್ಥಾಪನ ಸಮಿತಿಯು ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅದೇನೇ ಇರಲಿ, ಈ ವಿಚಾರದಲ್ಲಿ ಆದಷ್ಟು ಬೇಗ ಸೂಕ್ತ ತೀರ್ಮಾನ ಕೈಗೊಂಡು ಆಚರಣೆಗಳನ್ನು ಮುನ್ನಡೆಸುವಂತೆ ಧಾರ್ಮಿಕ ದತ್ತಿ ಇಲಾಖೆಯಿಂದ ಅಲ್ಲಿನ ಜಿಲ್ಲಾಧಿಕಾರಿಗೆ ಸೂಚಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ