ಕರಾವಳಿಯಂತೆ ಯಕ್ಷಗಾನಕ್ಕೆ ಪ್ರೋತ್ಸಾಹಿಸಿ

ಹಿಂದೆ ರಾಜ್ಯಾದ್ಯಂತ ಇದ್ದ ಯಕ್ಷಗಾನ ಈಗ ಕರಾವಳಿಗೆ ಸೀಮಿತ: ಡಾ.ನರಹಳ್ಳಿ

Team Udayavani, Jan 25, 2023, 10:05 PM IST

ಕರಾವಳಿಯಂತೆ ಯಕ್ಷಗಾನಕ್ಕೆ ಪ್ರೋತ್ಸಾಹಿಸಿ

ಬೆಂಗಳೂರು: ಯಕ್ಷಗಾನ ಕರಾವಳಿ ಕಲೆಯಲ್ಲ ಅದು ಇಡೀ ಕರ್ನಾಟಕದ ಕಲೆ ಎಂದು ಬಿಂಬಿಸಬೇಕಾಗಿದೆ ಎಂದು ಹಿರಿಯ ವಿಮರ್ಶಕ ಡಾ| ನರಹಳ್ಳಿ ಬಾಲಸುಬ್ರಹ್ಮಣ್ಯ ಹೇಳಿದ್ದಾರೆ.

ಕರ್ನಾಟಕ ಯಕ್ಷಗಾನ ಅಕಾಡೆಮಿ ನಯನ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಮೂಡಲಪಾಯ ಯಕ್ಷಗಾನ: ಇತ್ತೀಚಿನ ಬೆಳವಣಿಗೆಗಳು’ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕ ಭಾಗದಲ್ಲಿ ದಟ್ಟವಾಗಿದ್ದ ಈ ಕಲೆ ಮಂಡ್ಯ, ಹಳೆ ಮೈಸೂರು ಭಾಗದಲ್ಲಿ ಈಗ ಸಂಪೂರ್ಣ ನಶಿಸಿದೆ. ಅದರ ಪುನರುಜ್ಜೀವನ ಕಾರ್ಯ ನಡೆಯಬೇಕಾಗಿದೆ.

ಯಕ್ಷಗಾನ ಎಂದರೆ ಕರಾವಳಿ, ಉತ್ತರ ಕನ್ನಡ ಎಂಬ ಪ್ರಚಲಿತವಾದ ನಂಬಿಕೆ ಸುಳ್ಳು ಎನ್ನುವುದಷ್ಟೇ ನನ್ನ ವಾದ. ಜತೆಗೆ ಯಕ್ಷಗಾನ ಎಂದರೆ ಕರಾವಳಿ ಕಲೆಯಲ್ಲ ಕನ್ನಡದ ಕಲೆ, ನಾಡಿನ ಕಲೆ ಎಂದು ವಿಸ್ತಾರ ಮಾಡಬೇಕು ಎಂಬುದು ನನ್ನ ಹಂಬಲ ಎಂದು ತಿಳಿಸಿದರು.

ಒಂದು ಕಾಲದಲ್ಲಿ ರಾಜ್ಯಾದ್ಯಂತ ಪ್ರಚಾರದಲ್ಲಿದ್ದ ಯಕ್ಷಗಾನ ಕಲೆ ಈಗ ಕರಾವಳಿ ಮತ್ತು ಉತ್ತರ ಕನ್ನಡಕ್ಕೆ ಮಾತ್ರ ಸೀಮಿತವಾಗಿದೆ. ಒಂದು ಹಂತದಲ್ಲಿ ಯಕ್ಷಗಾನ ಎಂದರೆ ಅದು ಕರಾವಳಿ ಕಲೆ ಎಂದು ಸ್ವಂತಿಕೆ ಪಡೆದುಕೊಳ್ಳುವಷ್ಟರ ಮಟ್ಟಿಗೆ ಎಂಬಂತಾಗಿದೆ. ಆದರಲ್ಲಿ ತಪ್ಪೇನೂ ಇಲ್ಲ. ಅದಕ್ಕೆ ಆ ಭಾಗದಲ್ಲಿ ತುಂಬಾ ಪ್ರೋತ್ಸಾಹ ನೀಡಿ ಬೆಳೆಸಿದ್ದಾರೆ.

ನಾವು ಯಾವ ಕೆಲಸವನ್ನು ಮಾಡಲಿಕ್ಕೆ ಆಗಲಿಲ್ಲವೋ ಆ ಕೆಲಸವನ್ನು ಕರಾವಳಿ ಮತ್ತು ಉತ್ತರ ಕನ್ನಡ ಭಾಗದ ಜನರು ಮಾಡಿಕೊಂಡು ಬಂದಿದ್ದಾರೆ ಎಂದು ಶ್ಲಾಘಿಸಿದರು.

ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷ ಸಿ.ಕೆ. ರಾಮೇಗೌಡ ಮಾತನಾಡಿ, ರಾಜ್ಯೋತ್ಸವ ಮುಂತಾದ ಇನ್ನಿತರ ಪ್ರಶಸ್ತಿಗಳನ್ನು ನೀಡುವಾಗ ಕೇವಲ ಕರಾವಳಿ ಭಾಗದ ಕಲಾವಿದರನ್ನು ನೋಡದೆ ಹಳೆ ಮೈಸೂರು, ಮಂಡ್ಯದ ಕಲಾವಿದರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ನಾಟಕಕಾರ ಮತ್ತು ಪಾಲಿಕೆ ವಿಶೇಷ ಆಯುಕ್ತ ಜಯರಾಮ ರಾಯಪುರ ಮಾತನಾಡಿ, ಮಂಡ್ಯ ಮತ್ತು ಮೈಸೂರು ಭಾಗಗಳಲ್ಲಿ ಕರ್ನಾಟಕ ಮೂಡಲಪಾಯ ಯಕ್ಷಗಾನ ಪರಿಷತ್ತು ಯಕ್ಷಗಾನವನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸ ಮಾಡುತ್ತಿದೆ ಎಂದರು.

ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ| ಜಯಪ್ರಕಾಶ ಗೌಡ, ರಂಗ ನಿರ್ದೇಶಕ ಶಶಿಧರ್‌ ಬಾರಿಘಟ್‌, ರವಿಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.