ಮೊದಲ ಸಂಪುಟದಲ್ಲೇ ಗ್ಯಾರಂಟಿ ಜಾರಿ: ಖರ್ಗೆ
Enforcement of guarantee in first volume: Kharge
Team Udayavani, May 3, 2023, 8:12 AM IST
ಬೆಂಗಳೂರು: ನಾವು ನೀಡಿದ ಎಲ್ಲ ಭರವಸೆಗಳ ಈಡೇರಿಕೆ ಬದ್ಧತೆ ಮತ್ತು ಆದ್ಯತೆಯಾಗಿದ್ದು, ಮೊದಲ ಸಂಪುಟದಲ್ಲೇ ಐದು ಗ್ಯಾರಂಟಿಗಳನ್ನು ಮಂಜೂರು ಮಾಡುವಂತೆ ಹೇಳುತ್ತೇನೆ. ಇದು ನನ್ನ “ಗ್ಯಾರಂಟಿ” ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ನಗರದ ಖಾಸಗಿ ಹೊಟೇಲ್ನಲ್ಲಿ ಮಂಗಳವಾರ ಪಕ್ಷದ ಪ್ರಣಾಳಿಕೆ ಬಿಡುಗಡೆ ಮಾಡಿ ಅವರು ಮಾತನಾಡಿದರು. ಉಳಿದವರಂತೆ ಓಲೈಕೆ ಮಾತುಗಳನ್ನು ಹೇಳಿ ಹೋಗುವವರಲ್ಲ; ಈ ಹಿಂದೆ ನಾವು ಅಧಿಕಾರಕ್ಕೆ ಬಂದಾಗ 165 ಭರವಸೆಗಳನ್ನು ನೀಡಿದ್ದೆವು. ಅದರಲ್ಲಿ 158 ಈಡೇರಿಸಿದ್ದೇವೆ. ಆದರೆ, ಬಿಜೆಪಿ 600 ಭರವಸೆಗಳನ್ನು ನೀಡಿ, 55 ಮಾತ್ರ ಈಡೇರಿಸಿದೆ. ಈ ಬಾರಿ ಅಧಿಕಾರಕ್ಕೆ ಬರುತ್ತಿದ್ದಂತೆ ಮೊದಲ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳನ್ನು ಅನುಮೋದಿಸಲು ಹೇಳುತ್ತೇನೆ. ಇದಕ್ಕೆ ನಾನೇ ಗ್ಯಾರಂಟಿ ಎಂದು ಹೇಳಿದರು.
ನನಗೆ ಕೆಲವು ಪತ್ರಗಳು ಮತ್ತು ಕರೆಗಳು ಕೂಡ ಬಂದಿದ್ದು, ಅದರಲ್ಲಿ ಪಕ್ಷದ ಗ್ಯಾರಂಟಿಗಳ ಬಗ್ಗೆ ತುಂಬಾ ಮೆಚ್ಚುಗೆ ವ್ಯಕ್ತವಾಗಿದೆ. ಆದರೆ, ಆ ಗ್ಯಾರಂಟಿಗಳ ಬಗ್ಗೆ ಇನ್ನಷ್ಟು ಪ್ರಚಾರದ ಆವಶ್ಯಕತೆ ಇರುವುದಾಗಿ ಹೇಳಿದ್ದಾರೆ. ಆದ್ದರಿಂದ ಪಕ್ಷದ ಮುಖಂಡರು, ಕಾರ್ಯಕರ್ತರು ಈ ನಿಟ್ಟಿನಲ್ಲಿ ಮತ್ತಷ್ಟು ಕಾರ್ಯಪ್ರವೃತ್ತರಾಗಬೇಕು ಎಂದರು.
ಮತ ಗಳಿಕೆ ಸಾಧನವಲ್ಲ
ವಿಪಕ್ಷ ನಾಯಕ ಸಿದ್ದರಾಮಯ್ಯ ಮಾತನಾಡಿ, ಪ್ರಣಾಳಿಕೆ ಎನ್ನುವುದು ಮತ ಗಳಿಕೆ ಸಾಧನವಲ್ಲ; ರಾಜ್ಯದ ವಿಕಾಸಕ್ಕೆ, ಜನರ ಆರ್ಥಿಕ- ಸಾಮಾಜಿಕ ಬದಲಾವಣೆಯ ಸಾಧನವಾಗಿದೆ. ಭರವಸೆ ಕೊಟ್ಟ ಮೇಲೆ ಈಡೇರಿಸುವ ಕೆಲಸ ಆಯಾ ಪಕ್ಷಗಳು ಮಾಡಬೇಕು. ಬಿಜೆಪಿಗೆ ಈ ಬದ್ಧತೆ ಇಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
MUST WATCH
ಹೊಸ ಸೇರ್ಪಡೆ
Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ
Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ
Met Gala 2024: ಇವೆಂಟ್ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್ ಫೇಕ್ ಫೋಟೋ ವೈರಲ್
BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ
Encounter: ಜಮ್ಮು – ಕಾಶ್ಮೀರದಲ್ಲಿ ಎನ್ಕೌಂಟರ್… ಮೂವರು ಭಯೋತ್ಪಾದಕರು ಹತ