BJP ಬಿಟ್ಟು ಬರಲು ಎಂಟೆದೆ ಬೇಕು:ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಗೋಪಾಲಕೃಷ್ಣ
Team Udayavani, Apr 9, 2023, 6:45 AM IST
ನಾಯಕನಹಟ್ಟಿ: ಬಿಜೆಪಿ ಬಿಡುವುದು ಅತ್ಯಂತ ಕಷ್ಟದ ಕೆಲಸ. ಆ ಪಕ್ಷದಿಂದ ಹೊರಬರಲು ಎಂಟೆದೆ ಬೇಕು ಎಂದು ಮೊಳಕಾಲ್ಮೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ವೈ. ಗೋಪಾಲಕೃಷ್ಣ ಹೇಳಿದರು.
ಶನಿವಾರ ನೇರಲಗುಂಟೆ ಗ್ರಾಮದಲ್ಲಿ ಏರ್ಪಡಿಸಿದ್ದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಸ್ವಕ್ಷೇತ್ರ ಮೊಳಕಾಲ್ಮೂರು ಅಭಿವೃದ್ಧಿಯ ಉದ್ದೇಶಕ್ಕಾಗಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದೇನೆ. ಬಿಜೆಪಿಯಿಂದ ಹೊರಬರುವುದು ಅಷ್ಟು ಸುಲಭವಾಗಿರಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲು ಸೇರಿ ಹಲವಾರು ಮುಖಂಡರು ಪಕ್ಷ ಬಿಡದಂತೆ ಒತ್ತಡ ಹಾಕಿದ್ದರು.
ರಾಷ್ಟ್ರೀಯ ಮುಖಂಡರು ಕೂಡ ಪಕ್ಷ ತ್ಯಜಿಸದಂತೆ ದೂರವಾಣಿ ಕರೆ ಮಾಡಿ ತಿಳಿಸಿದ್ದರು. ಶಿರಸಿಯಲ್ಲಿದ್ದ ಸ್ಪೀಕರ್ ಮನೆಗೆ ತೆರಳಿ ರಾಜೀನಾಮೆ ನೀಡುವವರೆಗೂ ನನ್ನ ಮೇಲೆ ಅತ್ಯಂತ ಹೆಚ್ಚಿನ ಒತ್ತಡವಿತ್ತು. ಆದರೆ ಇದನ್ನು ಮೀರಿ ದೃಢ ನಿರ್ಧಾರ ಕೈಗೊಂಡೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪ್ರೀತಿ-ವಿಶ್ವಾಸಕ್ಕೆ ಕಟ್ಟು ಬಿದ್ದು ಮಾತೃಪಕ್ಷಕ್ಕೆ ಬಂದಿದ್ದೇನೆ. ನಾನು ಬಿಜೆಪಿಗೆ ಸೇರ್ಪಡೆಯಾದಾಗ ಇಲ್ಲಿನ ಯಾವುದೇ ಮುಖಂಡರು ಅಥವಾ ಕಾರ್ಯಕರ್ತರನ್ನು ಕರೆದುಕೊಂಡು ಹೋಗಿಲ್ಲ. ಒಂಟಿಯಾಗಿ ಹೋಗಿ ಪುನಃ ಪಕ್ಷಕ್ಕೆ ಮರಳಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ
Chitradurga; ಆರೋಗ್ಯದಲ್ಲಿ ಏರುಪೇರು: ಸಚಿವ ಜಮೀರ್ ಅಹಮದ್ ಖಾನ್ ಆಸ್ಪತ್ರೆಗೆ ದಾಖಲು
Chitradurga: ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ: ಯಡಿಯೂರಪ್ಪ
Tragedy: ಗೋಕರ್ಣಕ್ಕೆ ಹೊರಟಿದ್ದ ಬಸ್ ಪಲ್ಟಿ: ಮೂವರು ಸ್ಥಳದಲ್ಲೇ ಮೃತ್ಯು, 38 ಮಂದಿಗೆ ಗಾಯ
Bharamasagara; ಜೀವಾಮೃತವನ್ನು ಗಿಡಗಳಿಗೆ ಪೂರೈಸಲು ರೈತರಿಂದ ವಿನೂತನ ಪ್ರಯತ್ನ