ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಎಥೆನಾಲ್‌ ಘಟಕ ಸ್ಥಾಪಿಸುವಂತಿಲ್ಲ


Team Udayavani, Jan 18, 2023, 6:20 AM IST

ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ಎಥೆನಾಲ್‌ ಘಟಕ ಸ್ಥಾಪಿಸುವಂತಿಲ್ಲ

ಬೆಂಗಳೂರು: ಸಕ್ಕರೆ ಕಾರ್ಖಾನೆಯ ಸುತ್ತ 15 ಕಿ.ಮೀ. ವ್ಯಾಪ್ತಿಯಲ್ಲಿ ಎಥೆನಾಲ್‌ ಉತ್ಪಾದನ ಘಟಕ ಸ್ಥಾಪಿಸುವಂತಿಲ್ಲ ಎಂದು ಹೈಕೋರ್ಟ್‌ ಆದೇಶಿಸಿದೆ.

ಎಥೆನಾಲ್‌ ಕಾರ್ಖಾನೆ ನಿರ್ಮಾಣ ಕಾರ್ಯ ಸ್ಥಗಿತಗೊಳಿಸಲು ಕಬ್ಬು ಅಭಿವೃದ್ಧಿ ಆಯುಕ್ತರು ಮತ್ತು ಸಕ್ಕರೆ ನಿರ್ದೇಶಕರು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಆಸ್ಕಿನ್ಸ್‌ ಬಯೋಪ್ಯುಯೆಲ್ಸ… ಪ್ರ„ವೇಟ್‌ ಲಿಮಿಟೆಡ್‌ ಮತ್ತು ಶ್ರೀ ಬ್ರಹ್ಮಾನಂದ ಸಾಗರ್‌ ಸಕ್ಕರೆ ಕೈಗಾರಿಕೆ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾ| ಎನ್‌.ಎಸ್‌. ಸಂಜಯ್‌ ಗೌಡ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ನ್ಯಾಯಪೀಠವು 1966 ಮತ್ತು 2021ರ ಕಬ್ಬು (ನಿಯಂತ್ರಣ) ಆದೇಶದ ನಿಬಂಧನೆಗಳನ್ನು ಆಧರಿಸಿ, 2021ರಿಂದೀಚೆಗೆ ಸಕ್ಕರೆ ಮತ್ತು ಎಥೆನಾಲ್‌ ಎರಡನ್ನೂ ತಯಾರಿಸುವ ಅಗತ್ಯವಿಲ್ಲ ಮತ್ತು ಸಕ್ಕರೆ ಅಥವಾ ಎಥೆನಾಲ್‌ ಎರಡರಲ್ಲಿ ಒಂದು ತಯಾರಿಸಿದರೆ ಕಾನೂನಿನ ಅಡಿಯಲ್ಲಿ ಸಕ್ಕರೆ ಕಾರ್ಖಾನೆಯನ್ನು ಕಾರ್ಖಾನೆ ಅಥವಾ ಸಕ್ಕರೆ ಕಾರ್ಖಾನೆ ಎಂದು ವ್ಯಾಖ್ಯಾನಿಸಬಹುದಾಗಿದೆ ಎಂದು ಹೇಳಿದೆ.

ಅಲ್ಲದೆ, 2021 ರಿಂದ ಕಬ್ಬು (ನಿಯಂತ್ರಣ) ತಿದ್ದುಪಡಿ ಆದೇಶ ಜಾರಿಗೆ ಬಂದಿದೆ. ಅದರಲ್ಲಿ ಕಾರ್ಖಾನೆ ವ್ಯಾಖ್ಯಾನದಲ್ಲಿ ಬಳಸಲಾದ ಭಾಷೆ ಮತ್ತು ವಿರಾಮ ಚಿಹ್ನೆಯನ್ನು ವಿಶ್ಲೇಷಿಸಿದಾಗ, ನ್ಯಾಯಾಲಯವು ಕೇವಲ ಎಥೆನಾಲ್‌ ಅನ್ನು ಕಾರ್ಖಾನೆಯ ಆವರಣ/ಕಾರ್ಖಾನೆಯಲ್ಲಿ ತಯಾರಿಸಿದ್ದರೂ ಸಹ, ಸಕ್ಕರೆ ಕಾರ್ಖಾನೆ ವ್ಯಾಖ್ಯಾನದಲ್ಲಿ ರಚಿಸಲಾದ ಕಾನೂನು ಮೂಲಕ ಸಕ್ಕರೆ ಕಾರ್ಖಾನೆ ಎಂದು ಪರಿಗಣಿಸಲು ಸಕ್ಕರೆ ಉತ್ಪಾದಿಸುವ ಅಗತ್ಯವಿಲ್ಲ. ಕೇವಲ ಎಥೆನಾಲ್‌ ಉತ್ಪಾದಿಸುವ ಕಾರ್ಖಾನೆ ಸ್ಥಾಪಿಸಲು ಸಹ 15 ಕಿ.ಮೀ. ವ್ಯಾಪ್ತಿಯ ನಿರ್ಬಂಧ ಅನ್ವಯಿಸುತ್ತದೆ ಎಂದು ನ್ಯಾಯಪೀಠ ಆದೇಶಿಸಿದೆ.

ಎಥೆನಾಲ್‌ ತಯಾರಿಕೆಯು ಕಬ್ಬಿನ ರಸ, ಸಕ್ಕರೆ ಪಾಕ, ಮೊಲಾಸಿಸ್‌ ಆಧರಿಸಿದ ಕಾರಣದಿಂದ ಈ ವ್ಯಾಖ್ಯಾನವು ಅಗತ್ಯವಾಯಿತು ಎಂಬುದು ಸ್ಪಷ್ಟವಾಗಿದೆ. ಇದು ಕಬ್ಬಿನ ಉಪ ಉತ್ಪನ್ನವಾದ್ದರಿಂದ 15 ಕಿ.ಮೀ. ವ್ಯಾಪ್ತಿಯ ನಿರ್ಬಂಧದೊಳಗೆ ಎಥೆನಾಲ್‌ ತಯಾರಿಕೆಗೆ ಅನುಮತಿ ನೀಡಿದರೆ ಸಕ್ಕರೆ ಕಾರ್ಖಾನೆಗೂ ತೊಂದರೆ ಆಗಲಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಬಾಲಬ್ರೂಯಿ ಗೆಸ್ಟ್‌ ಹೌಸ್‌ ಕ್ಲಬ್‌ ಆಗಿ ಪರಿವರ್ತಿಸಲು ಅನುಮತಿ
ಬೆಂಗಳೂರು: ಶತಮಾನಕ್ಕೂ ಹೆಚ್ಚು ಹಳೆಯ ಮರಗಳನ್ನು ಹೊಂದಿರುವ ಪಾರಂಪರಿಕ ಕಟ್ಟಡ ಬಾಲಬ್ರೂಯಿ ಅತಿಥಿ ಗೃಹವನ್ನು ಸಾಂವಿಧಾನಿಕ ಕ್ಲಬ್‌ (ಕಾನ್ಸ್‌ಟಿಟ್ಯೂಷನಲ್‌ ಕ್ಲಬ್‌) ಆಗಿ ಪರಿವರ್ತಿಸಲು ಹೈಕೋರ್ಟ್‌ ಒಪ್ಪಿಗೆ ಸೂಚಿಸಿದೆ.

ಸುಮಾರು 150 ವರ್ಷಕ್ಕೂ ಮಿಗಿಲಾದ ಹಳೆಯ ಮರಗಳನ್ನು ಹೊಂದಿರುವ ನಗರದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಬಾಲಬ್ರೂಯಿ ಅತಿಥಿ ಗೃಹವನ್ನು ಸಾಂವಿಧಾನಿಕ ಕ್ಲಬ್‌ ಆಗಿ ಪರಿವರ್ತಿಸುವುದನ್ನು ಆಕ್ಷೇಪಿಸಿ ಪರಿಸರವಾದಿ ಟಿ. ದತ್ತಾತ್ರೇಯ ದೇವರೇ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಲೆ ಹಾಗೂ ನ್ಯಾಯಮೂರ್ತಿ ಅಶೋಕ್‌ ಎಸ್‌. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಕಟ್ಟಡ ಮತ್ತು ಮರಗಳಿಗೆ ಹಾನಿಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಾಕೀತು ಮಾಡಿದೆ.

ವಿಚಾರಣೆ ವೇಳೆ ಸರಕಾರಿ ವಕೀಲರಾದ ಪ್ರತಿಮಾ ಹೊನ್ನಾಪುರ, ಕಟ್ಟಡದ ಕುರಿತು ಯಥಾಸ್ಥಿತಿ ಕಾಯ್ದಕೊಳ್ಳುವಂತೆ 2021ರ ಅ. 7ರಂದು ನ್ಯಾಯಪೀಠ ನೀಡಿರುವ ಆದೇಶ ತೆರವು ಕೋರಿ ಸರ್ಕಾರ ಮಧ್ಯಾಂತರ ಅರ್ಜಿ ಸಲ್ಲಿಸಿದ್ದು, ಅದನ್ನು ವಿಚಾರಣೆ ನಡೆಸಿ ಮಾನ್ಯ ಮಾಡಬೇಕು ಎಂದು ಕೋರಿದರು. ಅಲ್ಲದೆ, ಅತಿಥಿ ಗೃಹದ ಪುನರ್‌ ನಿರ್ಮಾಣ, ಮರುವಿನ್ಯಾಸ ಮತ್ತು ಕಟ್ಟಡ ಕೆಡವಬೇಕೆಂಬ ಪ್ರಸ್ತಾಪ ಸರಕಾರದ ಮುಂದಿಲ್ಲ. ಕಟ್ಟಡದಲ್ಲಿ ಯಾವುದೇ ಮಾರ್ಪಾಡುಗಳನ್ನು ಮಾಡದೆ ಒಳಾಂಗಣದ ಸೌಂದರ್ಯ ಹೆಚ್ಚಳ ಮಾಡುವ ಪ್ರಸ್ತಾಪವಿದೆ.

ಜತೆಗೆ, ಈ ಕಟ್ಟಡವನ್ನು ಕಾನ್‌ಸ್ಟಿಟ್ಯೂಷನ್‌ ಕ್ಲಬ್‌ನ್ನಾಗಿ ಬದ‌ಲಾಯಿಸುವ ಉದ್ದೇಶವಿದೆ. ಕಟ್ಟಡದ ಆವರಣದಲ್ಲಿರುವ ಯಾವುದೇ ಮರಗಳನ್ನು ಕಡಿಯುವುದಿಲ್ಲ, ಕಟ್ಟಡದ ಯಾವುದೇ ಭಾಗಕ್ಕೂ ಹಾನಿ ಮಾಡುವುದಕ್ಕೆ ಮುಂದಾಗುವುದಿಲ್ಲ ಎಂದು ಸರಕಾರ ನ್ಯಾಯಾಲಯಕ್ಕೆ ಭರವಸೆ ನೀಡಲಿದೆ ಎಂದರು.

ಸರಕಾರಿ ವಕೀಲರ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಕಟ್ಟಡ ಮಾರ್ಪಾಡು ಮಾಡದಂತೆ ನಿರ್ವಹಣೆ ಮಾಡಬೇಕು. ಜತೆಗೆ, ಅತಿಥಿ ಗೃಹದ ಆವರಣದಲ್ಲಿ ಯಾವುದೇ ಮರಗಳನ್ನು ಕಡಿಯದೆ ಕ್ರಮ ವಹಿಸಬೇಕು ಎಂದು ಸರಕಾರಕ್ಕೆ ಸೂಚನೆ ನೀಡಿತು. ಬಾಲಬ್ರೂಯಿ ಅತಿಥಿ ಗೃಹವನ್ನು ಸಾಂವಿಧಾನಿಕ ಕ್ಲಬ್‌ ಆಗಿ ಬದಲಾಯಿಸುವುದರ ಸಂಬಂಧ ವಿಧಾನಸಭಾಧ್ಯಕ್ಷರು ಸುದ್ದಿಗೋಷ್ಠಿಯಲ್ಲಿ ಪ್ರಕಟಿಸಿದ್ದರು. ಅದನ್ನು ಪ್ರಶ್ನಿಸಿ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು.

 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.