Karnataka: ಸೌಲಭ್ಯ ಇಲ್ಲದಿದ್ದರೂ ನವಜಾತ ಶಿಶುಗಳ ಶ್ರವಣ ಪರೀಕ್ಷೆ ಕಡ್ಡಾಯ!

-ಸರಕಾರಿ ವ್ಯವಸ್ಥೆಯಲ್ಲಿ ನವಜಾತ ಶಿಶುಗಳ ಶ್ರವಣ ಸಾಮರ್ಥ್ಯ ಪರೀಕ್ಷೆ ಉಪಕರಣ ಅಲಭ್ಯ

Team Udayavani, Jul 10, 2023, 7:02 AM IST

ear test

ಬೆಂಗಳೂರು: ಆರೋಗ್ಯ ಇಲಾಖೆಯ ವ್ಯಾಪ್ತಿಯ ಆರೋಗ್ಯ ಕೇಂದ್ರಗಳಲ್ಲಿ ಶ್ರವಣ ಸಾಮರ್ಥ್ಯ ಪರೀಕ್ಷೆಗೆ ಅಗತ್ಯವಿರುವ ಮೂಲ ವ್ಯವಸ್ಥೆಗಳು ಇಲ್ಲದಿದ್ದರೂ ನವಜಾತ ಶಿಶುಗಳಿಗೆ ಕಡ್ಡಾಯ ಶ್ರವಣ ತಪಾಸಣೆಗೆ ಆದೇಶ ಹೊರಡಿಸಲಾಗಿದ್ದು, ಇದು ಹಾಸ್ಯಾಸ್ಪದವಾಗಿದೆ.

ರಾಜ್ಯ ಆರೋಗ್ಯ ಇಲಾಖೆ ರಾಷ್ಟ್ರೀಯ ಶ್ರವಣ ದೋಷ ನಿಯಂತ್ರಣ ಮತ್ತು ನಿಯಂತ್ರಣ, ನಿವಾರಣ ಕಾರ್ಯಕ್ರಮದಲ್ಲಿ ಜಿಲ್ಲಾಸ್ಪತ್ರೆ, ತಾಲೂಕು ಸಾರ್ವಜನಿಕ ಆಸ್ಪತ್ರೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಜನಿಸುವ ಶಿಶುಗಳಿಗೆ ಕಡ್ಡಾಯವಾಗಿ ಸರಕಾರದ ಮಾರ್ಗಸೂಚಿ ಕಾರ್ಯ ವಿಧಾನಗಳಂತೆ ಶ್ರವಣ ತಪಾಸಣೆ ನಡೆಸಿ, ಶ್ರವಣ ದೋಷವುಳ್ಳ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿ ಪತ್ತೆ ಹಚ್ಚಿ, ಸೂಕ್ತ ವೈದ್ಯಕೀಯ ನೆರವು ಹಾಗೂ ಶಸ್ತ್ರ ಚಿಕಿತ್ಸೆಗೆ ಒಳಪಡಿಸಲು ಸೂಚಿಸಲಾಗಿದೆ. ಸೌಲಭ್ಯಗಳೇ ಇಲ್ಲದೆ ಪರೀಕ್ಷೆ ಹೇಗೆ ಎಂಬುದು ಈಗಿನ ಜಿಜ್ಞಾಸೆ.

ವ್ಯವಸ್ಥೆಯೇ ಇಲ್ಲ!
ಪ್ರಸ್ತುತ ರಾಜ್ಯದಲ್ಲಿ 23 ಜಿಲ್ಲಾಸ್ಪತ್ರೆಗಳು, 175 ತಾಲೂಕು ಆಸ್ಪತ್ರೆ, 2,206 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಕಾರ್ಯಾಚರಿಸುತ್ತಿವೆ. ಅದರಲ್ಲಿ ಪ್ರಸ್ತುತ ಜಿಲ್ಲಾಸ್ಪತ್ರೆ ಹಾಗೂ 22 ತಾಲೂಕು ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಶ್ರವಣ ಸಾಮರ್ಥ್ಯವನ್ನು ಪರಿಶೀಲಿಸುವ ಒಎಇ ಯಂತ್ರ ಲಭ್ಯವಿದೆ. ಉಳಿದಂತೆ ಸುಮಾರು (ಹೆರಿಗೆ ವ್ಯವಸ್ಥೆಗಳಿರುವ) 150 ತಾಲೂಕು, 10 ಪ್ರಾಥಮಿಕ ಕೇಂದ್ರದಲ್ಲಿ ಶ್ರವಣ ಸಾಮರ್ಥ್ಯವನ್ನು ಪರೀಕ್ಷಿಸುವ ಯಂತ್ರಗಳೇ ಇಲ್ಲ.

ಹೈರಿಸ್ಕ್ ಪ್ರಗ್ನೆನ್ಸಿಯಲ್ಲಿ ಹೆಚ್ಚು ದೋಷ
ರಾಜ್ಯದಲ್ಲಿ ಹೈರಿಸ್ಕ್ ಪ್ರಗ್ನೆನ್ಸಿ ಹಾಗೂ ತೀವ್ರ ತರಹದ ಅನಾರೋಗ್ಯ ಸಮಸ್ಯೆಯಿಂದ ಜನಿಸುತ್ತಿರುವ 1,000 ಮಕ್ಕಳಲ್ಲಿ ಸುಮಾರು 8ರಿಂದ 10 ಮಕ್ಕಳಲ್ಲಿ ಶ್ರವಣ ದೋಷ ಪತ್ತೆಯಾಗುತ್ತಿದೆ. ಸಾಮಾನ್ಯ ಹೆರಿಗೆ ಹಾಗೂ ಆರೋಗ್ಯಯುತವಾಗಿ ಜನಿಸುವ 1000 ಮಕ್ಕಳಲ್ಲಿ 3 ರಿಂದ 4ಮಕ್ಕಳಲ್ಲಿ ಶ್ರವಣ ದೋಷ ಪತ್ತೆಯಾಗುತ್ತಿದೆ.

ಪರೀಕ್ಷೆ ಹೇಗೆ?
ಯಾವುದೇ ಆರೋಗ್ಯ ಸಂಸ್ಥೆಯಲ್ಲಿ ಶಿಶು ಜನಿಸಿದ 48 ಗಂಟೆ ಅಥವಾ ಆಸ್ಪತ್ರೆಯಿಂದ ಬಿಡುಗಡೆಯಾಗುವ ವೇಳೆ ಕಡ್ಡಾಯವಾಗಿ ಶ್ರವಣ ಸಾಮರ್ಥ್ಯ ಪರೀಕ್ಷೆ ಮಾಡಬೇಕಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಕೆಪಿಎಂಇ ಮೂಲಕ ಕಡ್ಡಾಯವಾಗಿಸಿದೆ.

ಪರೀಕ್ಷೆ ನಿರ್ಲಕ್ಷ್ಯ
ಶ್ರವಣ ಸಾಮರ್ಥ್ಯ ಪರೀಕ್ಷಾ ವ್ಯವಸ್ಥೆ ಇರದ ಸರಕಾರಿ ಆಸ್ಪತ್ರೆಯಲ್ಲಿ ನವಜಾತ ಶಿಶುಗಳ ಪರೀಕ್ಷೆ ಹೇಗೆ ಮಾಡಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ಇದುವರೆಗೆ ಕೆಲವು ಪ್ರಾಥಮಿಕ ಹಾಗೂ ಸಮುದಾಯ ಆಸ್ಪತ್ರೆಗಳಲ್ಲಿ ಶ್ರವಣ ಸಾಮರ್ಥ್ಯ ಪರೀಕ್ಷೆಗಾಗಿ ಸಮೀಪದ ಸರಕಾರಿ ಆಸ್ಪತ್ರೆಗೆ ಶಿಫಾರಸು ಮಾಡುತ್ತಿದ್ದರು. ಅನುಕೂಲಸ್ಥ ಹಾಗೂ ಆರೋಗ್ಯವಾಗಿರುವ ತಾಯಂದಿರು ಮಾತ್ರ ಮಗುವನ್ನು ಕೂಡಲೇ ಪರೀಕ್ಷೆಗೆ ನಿಗದಿತ ಆಸ್ಪತ್ರೆಗೆ ತೆರಳಿ ಪರೀಕ್ಷೆಗೆ ಒಳಪಡಿಸುತ್ತಾರೆ. ಉಳಿದಂತೆ ಹೆಚ್ಚಿನ ಪೋಷಕರು ನವಜಾತ ಶಿಶುವನ್ನು ಹಿಡಿದುಕೊಂಡು ದೂರ ಸಂಚರಿಸುವುದು ಅಪಾಯ ಎನ್ನುವ ಆತಂಕದಲ್ಲಿ ಪರೀಕ್ಷೆಯನ್ನು ನಿರ್ಲಕ್ಷಿಸುತ್ತಾರೆ.

ಎಲ್ಲೆಡೆಯೂ ವ್ಯವಸ್ಥೆ ಆಗಲಿ
ಹೆರಿಗೆ ಬಳಿಕ ದೂರದ ಪ್ರದೇಶದಲ್ಲಿ ಜಿಲ್ಲಾಸ್ಪತ್ರೆಗಳಿಗೆ ತೆರಳಿ ನವಜಾತ ಶಿಶು ಶ್ರವಣ ಸಾಮರ್ಥ್ಯ ಪರೀಕ್ಷೆ ನಡೆಸುವುದು ಕಷ್ಟ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಹೆರಿಗೆ ಸೌಲಭ್ಯಗಳಿರುವ ಪ್ರತಿಯೊಂದು ಸರಕಾರಿ ಆರೋಗ್ಯ ಕೇಂದ್ರದಲ್ಲಿ ಒಎಇ ಯಂತ್ರವನ್ನು ಆಳವಡಿಸಿಕೊಳ್ಳಬೇಕು.

ನವಜಾತ ಶಿಶುಗಳಿಗೆ ಕಡ್ಡಾಯವಾಗಿ ಶ್ರವಣ ಸಾಮರ್ಥ್ಯ ಪರೀಕ್ಷೆ ಮಾಡಬೇಕಾಗಿದೆ. ಈ ಕುರಿತ ಸೌಲಭ್ಯಗಳು ಇಲ್ಲದ ತಾಲೂಕು ಹಾಗೂ ಪ್ರಾಥಮಿಕ ಕೇಂದ್ರದಲ್ಲಿ ಶೀಘ್ರ ಶ್ರವಣ ಸಾಮರ್ಥ್ಯ ಪತ್ತೆ ಯಂತ್ರ ಪೂರೈಸಲಾಗುವುದು. ಪರೀಕ್ಷೆ ಕಡ್ಡಾಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯಿಂದ ದೂರ ಉಳಿದ ನವಜಾತ ಶಿಶುವಿನ ಲಸಿಕಾ ಪ್ರಕ್ರಿಯೆ ಸಂದರ್ಭದಲ್ಲಿ ತಪಾಸಣೆ ಮಾಡಲಾಗುತ್ತದೆ.
-ಡಾ| ರಣದೀಪ್‌, ಆಯುಕ್ತರು, ಆರೋಗ್ಯ ಇಲಾಖೆ

ತೃಪ್ತಿ ತುಮ್ರಗೋಡು

ಟಾಪ್ ನ್ಯೂಸ್

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.