ಹೈಕಮಾಂಡ್ ಸೂಚನೆ: ಇನ್ನು ಬಿಜೆಪಿ ಕಚೇರಿಯಲ್ಲಿ ಪ್ರತಿ ದಿನ ಸಚಿವರ ಸುದ್ದಿಗೋಷ್ಠಿ
ಮತೀಯ ವಿಚಾರಗಳನ್ನು ಹಿನ್ನೆಲೆಗೆ ಸರಿಸಲು ಕ್ರಮ
Team Udayavani, Apr 9, 2022, 1:44 PM IST
ಬೆಂಗಳೂರು : ಸರಕಾರದ ಸಾಧನೆಗಳ ಬಗ್ಗೆ ಪ್ರತಿ ದಿನ ಸಚಿವರು ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುವಂತೆ ಹೈಕಮಾಂಡ್ ಸೂಚನೆ ನೀಡಿದ್ದು, ರಾಜ್ಯದಲ್ಲಿ ನಡೆಯುತ್ತಿರುವ ಮತೀಯ ವಿಚಾರಗಳನ್ನು ಹಿನ್ನೆಲೆಗೆ ಸರಿಸಲು ಮುಂದಾಗಿದೆ.
ವರಿಷ್ಠರ ಸೂಚನೆ ಮೇರೆಗೆ ಪತ್ರಿಕಾಗೋಷ್ಠಿ ನಡೆಸಲಾಗುತ್ತಿದೆ ಎಂದು ಸಚಿವ ಈಶ್ವರಪ್ಪ ಅವರು ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದು,ಕಾಂಗ್ರೆಸ್ ಬರೀ ಹಿಂದೂ ಮುಸ್ಲಿಂ ಗಲಾಟೆ ನಡೆಸುವ ಪ್ರಯತ್ನ ನಡೆಸುತ್ತಿದೆ. ಆಲ್ ಖೈದಾದವರ ಪರ ಇದ್ದಾರೆ.ನಾನು ಏನು ಸಾಧನೆ ಮಾಡಿದ್ದೇನೆ, ಅದನ್ನ ಜನರ ಮುಂದೆ ಇಡಲು ಸುದ್ದಿ ಗೋಷ್ಠಿ ಮಾಡಿದ್ದೇನೆ ಎಂದರು.
ನಾವು ಅಭಿವೃದ್ಧಿ ಕಾರ್ಯಗಳನ್ನ ಚುನಾವಣೆ ಹತ್ತಿರ ಬರುತ್ತಾ ಇದೆ ಎಂದೇ ಜನರ ಮುಂದೆ ಇಡುತ್ತಿದ್ದೇವೆ ಎಂದರು.
ಇದನ್ನೂ ಓದಿ : ಬಯಲಿನಲ್ಲಿ ಶೌಚಕ್ಕೆ ಹೋದರೇ ಅವರಿಗೆ ಖುಷಿ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ
ಪ್ರತಿ ಇಲಾಖೆಯ ಮಾಹಿತಿಯನ್ನ ನಿಮ್ಮ ಮುಂದೆ ಇಡುತ್ತಿದ್ದೇವೆ.ಕಾಂಗ್ರೆಸ್ ನವರು ಕೇವಲ ಹಿಜಾಬ್ ನಲ್ಲಿ ಇದ್ದಾರೆ ಅನ್ನುವ ಆರೋಪ ಮಾಡುತ್ತಾರೆ. ಅವರು ಪ್ರಶ್ನೆ ಮಾಡಿದರೂ ಸುಮ್ಮನೆ ಇರುವುದಕ್ಕೆ ನಾವೇನು ಮೌನಿ ಬಾಬಾಗಳಾ? ಎಂದು ಪ್ರಶ್ನಿಸಿದರು.
ಮನೆ ಮನೆಗೂ ಗಂಗೆ
ಪ್ರಧಾನಿ ನರೇಂದ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆ ಜಲ ಜೀವನ್ ಮಿಷನ್ ರಾಜ್ಯದಲ್ಲಿ ಮನೆ ಮನೆಗೂ ಗಂಗೆ ಹೆಸರಲ್ಲಿ ಅನುಷ್ಠಾನಗೊಳ್ಳುತ್ತಿದ್ದು, 20 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕೊಳಾಯಿ ನೀರು ಸರಬರಾಜು ಮಾಡಲಾಗಿದೆ ಎಂದು ಸಚಿವ ಈಶ್ವರಪ್ಪ ಹೇಳಿದರು.
ರಾಜ್ಯದಲ್ಲಿ 2020ರಲ್ಲಿ ಮನೆ ಮನೆಗೂ ಗಂಗೆ ಯೋಜನೆಯು ಆರಂಭಿಸಲಾಯಿತು. ಈಗಾಗಲೇ 3,000 ಗ್ರಾಮಗಳಿಗೆ ಶೇಕಡಾ 100ರಷ್ಟು ಮನೆಗಳಿಗೆ ಕೊಳಾಯಿ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. 50,000 ಹೆಚ್ಚಿನ ಗ್ರಾಮಗಳಲ್ಲಿ ಮನೆ ಮನೆಗೂ ಗಂಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದೆ ಎಂದು ವಿವರಿಸಿದರು.
ಕೇಂದ್ರ ಸರ್ಕಾರ ಈಗಾಗಲೇ ₹3,325 ಕೋಟಿ ಹಣವನ್ನು ಮತ್ತು ರಾಜ್ಯದ ಪಾಲಾದ ₹2,323 ಕೋಟಿ ಹಣವನ್ನು ಬಿಡುಗಡೆ ಮಾಡಲಾಗಿದೆ.ನೀರು ಪರೀಕ್ಷೆಗಾಗಿ 31 ಜಿಲ್ಲೆಗಳ 46 ತಾಲ್ಲೂಕಿನಲ್ಲಿ ಲ್ಯಾಬೋರೇಟರಿ ಸ್ಥಾಪಿಸಲಾಗಿದೆ. ಈಗಾಗಲೇ 18,600 ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಈ ಯೋಜನೆಯ ಆರಂಭಕ್ಕೆ ಮುನ್ನ ರಾಜ್ಯದಲ್ಲಿ ಶೇಕಡಾ 25ರಷ್ಟು ಮನೆಗಳಿಗೆ ನಲ್ಲಿಯ ನೀರಿನ ಸಂಪರ್ಕವಿತ್ತು. ಈ ಯೋಜನೆಯ ತರುವಾಯ 20,56,650 ಮನೆಗಳಿಗೆ ಹೊಸದಾಗಿ ನೀರು ಸಂಪರ್ಕ ನೀಡಲಾಗಿದೆ. ಈಗ ರಾಜ್ಯದಲ್ಲಿ ಶೇಕಡಾ 46ರಷ್ಟು ಮನೆಗಳಿಗೆ ಕೊಳಾಯಿ ನೀರು ಸಂಪರ್ಕ ಲಭ್ಯವಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ