ಅಂಜನಾದ್ರಿ: ಹನುಮಜಯಂತಿ, ಮಾಲೆ ವಿಸರ್ಜನೆಗೆ ಸಕಲ ಸಿದ್ಧತೆ

ಮಾಲಾಧಾರಿಗಳು ಸೇರಿ 40 ಸಾವಿರ ಹನುಮ ಭಕ್ತರ ಆಗಮನ ನಿರೀಕ್ಷೆ

Team Udayavani, Apr 15, 2022, 4:42 PM IST

24anjanadri

ಗಂಗಾವತಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕಿಷ್ಕಿಂದಾ ಅಂಜನಾದ್ರಿಯಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಹನುಮಮಾಲಾಧಾರಿಗಳ ಮಾಲಾ ವಿಸರ್ಜನಾ ಕಾರ್ಯ ಏ.16 ರಂದು ಶನಿವಾರ ಜರುಗಲಿದೆ. ಮಾಲಾ ವಿಸರ್ಜನೆ ಮತ್ತು ಹನುಮ ಜಯಂತೋತ್ಸವಕ್ಕೆ ತಾಲೂಕು ಆಡಳಿತ ಸಕಲ ಸಿದ್ಧತೆಗಳನ್ನು ಕೈಗೊಂಡಿದೆ.

ರಾಜ್ಯದ ವಿವಿಧ ಸ್ಥಳಗಳಿಂದ ಹನುಮಮಾಲಾಧಾರಿಗಳು ಸೇರಿ 40 ಸಾವಿರ ಹನುಮ ಭಕ್ತರು ಅಂಜನಾದ್ರಿಗೆ ಆಗಮಿಸುವ ನಿರೀಕ್ಷೆ ಇದ್ದು, ವಾಹನಗಳ ಪಾರ್ಕಿಂಗ್ ಹಾಗೂ ಆಗಮಿಸುವವರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಹನುಮಮಾಲಾಧಾರಿಗಳು ಹನುಮನಹಳ್ಳಿ ಋಷಿಮುಖ ಪರ್ವತದ ಹತ್ತಿರ ತುಂಗಭದ್ರಾ ನದಿ ಮತ್ತು ವಿಜಯನಗರ ಕಾಲುವೆಯಲ್ಲಿ ಸ್ನಾನ ಮಾಡಲು ವ್ಯವಸ್ಥೆ ಮಾಡಲಾಗಿದ್ದು, ಅಲ್ಲಿಂದ ಅಂಜನಾದ್ರಿಗೆ ಬರಲು ಸ್ವಾಗತ ಕಮಾನು ನಿರ್ಮಿಸಲಾಗಿದೆ.

ಅಂಜನಾದ್ರಿಯಲ್ಲಿ ಏಕ ಮುಖ (ಒನ್ ವೇ) ಸಂಚಾರದ ವ್ಯವಸ್ಥೆ ಮಾಡಲಾಗಿದ್ದು, ಬಲ ಭಾಗದಿಂದ ಹತ್ತಿ ಎಡಭಾಗದಿಂದ ಇಳಿದು ಸಂಸ್ಕೃತ ಪಾಠ ಶಾಲೆಯ ಆವರಣದಲ್ಲಿ ಅನ್ನ ಪ್ರಸಾದ ಸ್ವೀಕಾರ ಮಾಡುವ ವ್ಯವಸ್ಥೆ ಮಾಡಲಾಗಿದೆ.

ಈಗಾಗಲೇ ಆನೆಗೊಂದಿ ಸರಕಾರಿ ಪ್ರೌಢಶಾಲೆ, ಉತ್ಸವ ಜಾಗ, ಚಿಕ್ಕರಾಂಪೂರದ ಕಟಾವಾಗಿರುವ ಭತ್ತದ ಗದ್ದೆಗಳು ಮತ್ತು ಹನುಮನಹಳ್ಳಿಯ ಸುತ್ತಲೂ ವಾಹನ ನಿಲುಗಡೆಗಾಗಿ ಪೊಲೀಸ್ ಇಲಾಖೆ ಸ್ಥಳ ನಿಗದಿ ಮಾಡಿದೆ. ಬೆಟ್ಟ ಹತ್ತುವ ಭಕ್ತರಿಗೆ ಶುದ್ಧ ಕುಡಿಯುವ ನೀರಿನ್ನು ಒದಗಿಸಲಾಗುತ್ತದೆ. ತಾತ್ಕಲಿಕ ಆಸ್ಪತ್ರೆಯನ್ನು ಬೆಟ್ಟದ ಎರಡು ಕಡೆ ನಿಗದಿ ಮಾಡಿ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ನಿಯೋಜನೆ ಮಾಡಲಾಗಿದೆ.

ಇದನ್ನೂ ಓದಿ:ಐತಿಹಾಸಿಕ ಸ್ಮಾರಕ ರಕ್ಷಣೆಯಲ್ಲಿ ಜಿಲ್ಲಾಡಳಿತ ನಿರ್ಲಕ್ಷ್ಯ ಆರೋಪ

ಏ.15 ಮತ್ತು 16 ರಂದು ದಿನದ 24 ಗಂಟೆ ವಿದ್ಯುತ್ ಸರಬರಾಜು ಮಾಡಲು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಕಂದಾಯ, ಪೊಲೀಸ್, ಅರಣ್ಯ, ಜೆಸ್ಕಾಂ, ಆರೋಗ್ಯ ಇಲಾಖೆ ಅಧಿಕಾರಿಗಳು ನಿರಂತರವಾಗಿ ಅಂಜನಾದ್ರಿಯಲ್ಲಿದ್ದು ಆಗಮಿಸುವ ಭಕ್ತರಿಗೆ ಸೇವೆ ನೀಡಲಿದ್ದಾರೆ.  ಏ.16 ರಂದು ಒಂದು ದಿನದ ಮಟ್ಟಿಗೆ ಗಂಗಾವತಿ-ಮುನಿರಾಬಾದ(ಹುಲಿಗಿ) ನಿರಂತರ ಬಸ್ ಮಾರ್ಗವನ್ನು ವಾಯ ಜಂಗ್ಲಿ(ರಂಗಾಪೂರ) ಸಾಣಾಪೂರ ಮೂಲಕ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

ಪೊಲೀಸ್ ಬಂದೋಬಸ್ತ್ ಗಾಗಿ ಇಬ್ಬರು ಡಿಎಸ್ಪಿ, 05 ಜನ ಸಿಪಿಐ, 9 ಜನ ಪಿಎಸೈ, 200ಕ್ಕೂ ಹೆಚ್ಚು ಹೋಂಗಾರ್ಡ್ ಪೊಲೀಸರು ಸೇರಿ ಕೆಎಸ್‌ಆರ್‌ಪಿ ಡಿಎಆರ್ ಪೊಲೀಸ್ ತುಕಡಿಯ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Parameshwar

Dr.G. Parameshwara ಅವರ ಜಾತಿ ನಿಂದನೆ; ಬೀದರ್ ವ್ಯಕ್ತಿ ವಿರುದ್ಧ ಕೇಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.