ಭಾರೀ ಸ್ಫೋಟದ ಸದ್ದಿಗೆ ಬೆಚ್ಚಿಬಿದ್ದ ಶಿವಮೊಗ್ಗ ಜನತೆ
Team Udayavani, Jan 21, 2021, 11:04 PM IST
ಶಿವಮೊಗ್ಗ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಭಾರೀ ಸ್ಫೋಟದ ಶಬ್ದ ಕೇಳಿ ಬಂದಿದ್ದು ಜನ ಭಯಬಿದ್ದು ರಸ್ತೆಗೆ ಇಳಿದ ಘಟನೆ ಗುರುವಾರ ರಾತ್ರಿ 10;20ರಿಂದ 10;40ರ ಸಮಯದಲ್ಲಿ ನಡೆದಿದೆ.
ಶಿವಮೊಗ್ಗ ನಗರ, ಭದ್ರಾವತಿ, ಹೊಳೆಹೊನ್ನೂರು, ಹೊಸನಗರ, ತೀರ್ಥಹಳ್ಳಿ, ಸಾಗರ, ಸೊರಬ ಪಕ್ಕದ ತರೀಕೆರೆ ತಾಲ್ಲೂಕಿನಲ್ಲೂ ಶಬ್ದ ಹಾಗೂ ಕಂಪನದ ಅನುಭವವಾಗಿದೆ.
ಹಲವರು ಆಕಾಶದಲ್ಲಿ ಮಿಂಚಿನಂತ ಪ್ರಖರ ಬೆಳಕು ಕಂಡಿರುವುದು ನಿಜ. ಭಾರೀ ಶಬ್ದಕ್ಕೆ ಕಿಟಿಕಿ ಬಾಗಿಲುಗಳು ಅಲುಗಾಡಿದ್ದು ನಿಗೂಢ ಶಬ್ದದ ಬಗ್ಗೆ ಹಲವು ಊಹಾಪೋಹಗಳು ಹರಿದಾಡಿವೆ. ಕೆಲವರಿಗೆ ಕಂಪನದ ಅನುಭವ ಕೂಡ ಆಗಿದೆ. ಮೊದಲು ಕಡಿಮೆ ಪ್ರಮಾಣದ ಶಬ್ದ ಕೇಳಿದ್ದು ನಂತರ ದೊಡ್ಡ ಶಬ್ದ ಮೂಡಿಬಂತು.
ಇದನ್ನೂ ಓದಿ:ಸಿಸಿಬಿ ಪೊಲೀಸರ ಕಾರ್ಯಾಚರಣೆ : 38 ಕೆ.ಜಿ ಗಾಂಜಾ ಸಹಿತ ನಾಲ್ವರು ಆರೋಪಿಗಳ ಬಂಧನ
ಕೆಲ ತಿಂಗಳ ಹಿಂದೆ ಬೆಂಗಳೂರಿನಲ್ಲಿ ಸೂಪರ್ ಸಾನಿಕ್ ವಿಮಾನದಿಂದ ಹೊರಬಂದ ಶಬ್ದವೂ ತಲ್ಲಣ ಉಂಟು ಮಾಡಿತ್ತು. ಖಗೋಳ ವಿಜ್ಞಾನಿಗಳು ಉಲ್ಕೆಗಳ ಸ್ಫೋಟವಾಗಿರಬಹುದು ಎಂದು ಅಂದಾಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ