
ನಾಳೆ ಯುಪಿ ಮೊದಲ ಹಂತದ ವೋಟಿಂಗ್ : 9 ಸಚಿವರ ಭವಿಷ್ಯ ನಿರ್ಧಾರ
Team Udayavani, Feb 9, 2022, 7:45 PM IST

ಲಕ್ನೋ : ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರದ 9 ಸಚಿವರ ಚುನಾವಣಾ ಭವಿಷ್ಯವನ್ನು ಫೆಬ್ರವರಿ 10, ಗುರುವಾರ ಮತದಾರರು ನಿರ್ಧರಿಸಲಿದ್ದಾರೆ.
ಪಶ್ಚಿಮ ಉತ್ತರ ಪ್ರದೇಶದ 11 ಜಿಲ್ಲೆಗಳಲ್ಲಿ ಹರಡಿರುವ 58 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದ ಮತದಾನ ನಡೆಯಲಿದೆ. ಶಾಮ್ಲಿ, ಹಾಪುರ್, ಗೌತಮ್ ಬುದ್ಧ ನಗರ, ಮುಜಾಫರ್ನಗರ, ಮೀರತ್, ಬಾಗ್ಪತ್, ಗಾಜಿಯಾಬಾದ್, ಬುಲಂದ್ಶಹರ್, ಅಲಿಗಢ್, ಮಥುರಾ ಮತ್ತು ಆಗ್ರಾ ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.
ಛಾಟಾದಿಂದ ಲಕ್ಷ್ಮೀನಾರಾಯಣ ಚೌಧರಿ, ಶಿಕರ್ಪುರದಿಂದ ಅನಿಲ್ ಶರ್ಮಾ, ಆಗ್ರಾ ನಗರದಿಂದ ಜಿಎಸ್ ಧರ್ಮೇಶ್, ಹಸ್ತಿನಾಪುರದ ದಿನೇಶ್ ಖಟಿಕ್ ಅವರ ಭವಿಷ್ಯ ನಿರ್ಧಾರವಾಗಲಿದೆ.
ಕಣದಲ್ಲಿರುವ ಪ್ರಮುಖರೆಂದರೆ, ಮಥುರಾದಿಂದ ಶ್ರೀಕಾಂತ್ ಶರ್ಮಾ, ಗಾಜಿಯಾಬಾದ್ನಿಂದ ಅತುಲ್ ಗಾರ್ಗ್, ಥಾನಾ ಭವನದಿಂದ ಸುರೇಶ್ ರಾಣಾ, ಮುಜಾಫರ್ ನಗರದಿಂದ ಕಪಿಲ್ದೇವ್ ಅಗರ್ವಾಲ್ ಮತ್ತು ಅತ್ರೌಲಿಯಿಂದ ಸಂದೀಪ್ ಸಿಂಗ್.
ಇತರ ಪ್ರಮುಖ ಅಭ್ಯರ್ಥಿಗಳೆಂದರೆ ಆಗ್ರಾ ಗ್ರಾಮಾಂತರದಿಂದ ಉತ್ತರಾಖಂಡದ ಮಾಜಿ ಗವರ್ನರ್ ಬೇಬಿ ರಾಣಿ ಮೌರ್ಯ, ನೋಯ್ಡಾದಿಂದ ಉತ್ತರ ಪ್ರದೇಶ ಬಿಜೆಪಿ ಉಪಾಧ್ಯಕ್ಷ ಪಂಕಜ್ ಸಿಂಗ್ ಮತ್ತು ಕೈರಾನಾದಿಂದ ಮೃಗಾಂಕಾ ಸಿಂಗ್ ಅವರು ಕಣದಲ್ಲಿದ್ದಾರೆ.
ಮೊದಲ ಹಂತದಲ್ಲಿ 623 ಅಭ್ಯರ್ಥಿಗಳು ಕಣದಲ್ಲಿದ್ದು, ಸುಮಾರು 2.27 ಕೋಟಿ ಜನರು ಮತ ಚಲಾಯಿಸಲು ಅರ್ಹರಾಗಿದ್ದಾರೆ. 2017 ರಲ್ಲಿ 58 ಸ್ಥಾನಗಳ ಪೈಕಿ ಬಿಜೆಪಿ 53 ಸ್ಥಾನಗಳನ್ನು ಗಳಿಸಿತ್ತು, ಸಮಾಜವಾದಿ ಪಕ್ಷ ಮತ್ತು ಬಿಎಸ್ಪಿ ತಲಾ ಎರಡು ಸ್ಥಾನಗಳನ್ನು ಪಡೆದಿದ್ದರೆ ಒಂದು ಸ್ಥಾನ ರಾಷ್ಟ್ರೀಯ ಲೋಕದಳದ ಪಾಲಾಗಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್ಸಿಆರ್ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್