ಅಭಿಮಾನಿ ದೇವರುಗಳೇ, ಆತ್ಮಹತ್ಯೆ ಬೇಡ: ಕೈಮುಗಿದು ಬೇಡಿದ ರಾಘಣ್ಣ
Team Udayavani, Nov 4, 2021, 1:54 PM IST
ಬೆಂಗಳೂರು : ‘ಅಭಿಮಾನಿಗಳೇ ಆತ್ಮಹತ್ಯೆ ಮಾಡಿಕೊಂಡು ಪುನೀತ್ ಗೆ ಕೆಟ್ಟ ಹೆಸರು ತರಬೇಡಿ’ ಎಂದು ಗುರುವಾರ ನಟ, ನಿರ್ಮಾಪಕ ರಾಘವೇಂದ್ರ ರಾಜಕುಮಾರ್ ಕೈಮುಗಿದು ಬೇಡಿಕೊಂಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಾಘವೇಂದ್ರ ಅವರು, ‘ಅಭಿಮಾನಿಗಳೆ ದೇವರು ಅಂತ ಅಪ್ಪಾಜಿ ಹೇಳುತ್ತಿದ್ದರು. ದೇವರುಗಳಾದ ನೀವು ಆತ್ಮಹತ್ಯೆ ಮಾಡಿಕೊಳ್ಳಬೇಡಿ. ನಿಮ್ಮ ಪಾದಕ್ಕೆ ನಮಸ್ಕಾರ ಮಾಡಿ ಮನವಿ ಮಾಡಿಕೊಳ್ಳುತ್ತೇನೆ’ ಎಂದರು.
‘ನಾವು ಪುನೀತ್ ಅಗಲಿಕೆಯಿಂದ ನೋವಿನಲ್ಲಿದ್ದೇವೆ, ಪುನೀತ್ ಪತ್ನಿ ಮತ್ತು ಮಕ್ಕಳು ನೋಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡು ನಿಮ್ಮ ತಂದೆ-ತಾಯಿಗೆ ನೋವು ಕೊಡಬೇಡಿ. ಒಬ್ಬರ ಹಿಂದೆ ಒಬ್ಬರು ಹೋದರೆ ಭೂಮಿ ಮೇಲೆ ಯಾರು ಇರುವುದಿಲ್ಲ. ಸಣ್ಣ ಮಕ್ಕಳಿಗೆ ಇದನ್ನೇ ಹೇಳಿಕೋಡುತ್ತೀರಾ’ ಎಂದು ಪ್ರಶ್ನಿಸಿದರು.
‘ನಿಮ್ಮ ಪಾದಕ್ಕೆ ನಮಸ್ಕರಿಸುತ್ತೇನೆ ದುಡುಕಿನ ನಿರ್ಧಾರ ಮಾಡಬೇಡಿ’ ಎಂದು ಬೇಡಿಕೊಂಡರು.
‘ಪುನೀತ್ 11ನೇ ಪುಣ್ಯಾರಾಧನೆ ಕಾರ್ಯಕ್ರಮದ ಯೋಚನೆ ಮಾಡುತ್ತಿದ್ದೇವೆ. ಆ ಬಗ್ಗೆ ಬಗ್ಗೆ ನಂತರದ ದಿನಗಳಲ್ಲಿ ತಿಳಿಸುತ್ತೇವೆ.ನಾನು ಪ್ರತಿ ನಿತ್ಯ ಅಪ್ಪು ಸಮಾಧಿ ಬಳಿಗೆ ದಿನ ಹೋಗುತ್ತಿದ್ದೇನೆ. ನೂರಾರು ಅಭಿಮಾನಿಗಳು ನಿತ್ಯವೂ ಬರುತ್ತಿದ್ದಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು