ಸಿ.ಟಿ.ರವಿ ‘ಮುಂದಿನ ಮುಖ್ಯಮಂತ್ರಿ’ ಆಗಲೆಂದು ಅಭಿಮಾನಿಗಳ ಪಾದಯಾತ್ರೆ
ಗುರಿ ಮುಟ್ಟುವುದೇ ಸುಬ್ರಹ್ಮಣ್ಯ ಸ್ವಾಮಿಗೆ ಅರ್ಪಿಸಿದ ಬೆಳ್ಳಿಯ ಬಾಣ?
Team Udayavani, Mar 26, 2023, 3:44 PM IST
ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಟಿ.ರವಿ ಅವರು ಮುಂದಿನ ಮುಖ್ಯಮಂತ್ರಿ ಆಗಲೆಂದು ಅಭಿಮಾನಿಗಳು ಭಾನುವಾರ ಪಾದಯಾತ್ರೆ ನಡೆಸಿ ಗಮನ ಸೆಳೆದಿದ್ದಾರೆ.
300ಕ್ಕೂ ಅಧಿಕ ಅಭಿಮಾನಿಗಳು ಚಿಕ್ಕಮಗಳೂರು ನಗರದಿಂದ ಮಲ್ಲೇನಹಳ್ಳಿ ಸಮೀಪವಿರುವ ಇತಿಹಾಸ ಪ್ರಸಿದ್ಧ ಕುಮಾರಗಿರಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನಕ್ಕೆ ಪಾದಯಾತ್ರೆ ನಡೆಸಿದರು. ಪಾದಯಾತ್ರೆ ವೇಳೆ ಸಿ.ಟಿ.ರವಿ ಮುಂದಿನ ಸಿಎಂ ಎಂದು ಘೋಷಣೆ ಮೊಳಗಿಸಿದ್ದಾರೆ.
ಸುಬ್ರಹ್ಮಣ್ಯ ಸ್ವಾಮಿಗೆ ಬೆಳ್ಳಿಯ ಬಾಣ ನೀಡಿ ಸಿ.ಟಿ.ರವಿ ಅವರು ಭರ್ಜರಿ ಗೆಲುವು ಸಾಧಿಸಿ ಮುಂದಿನ ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಗಳು ಬೇಡಿಕೊಂಡಿದ್ದಾರೆ.
ಸಿ.ಟಿ.ರವಿ ಅವರ ಮನೆಗೆ ಬಂದು ಅಭಿಮಾನಿಗಳು ಬೆಳ್ಳಿಯ ಬಾಣ ತೆಗೆದುಕೊಂಡು ಹೋಗಿದ್ದಾರೆ ಎಂದು ವರದಿಯಾಗಿದೆ.
ಅವರು 2004 ರಿಂದ ನಿರಂತರವಾಗಿ ನಾಲ್ಕು ಬಾರಿ ಚಿಕ್ಕಮಗಳೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ