ಜಗದೀಪ್ ಧನ್ಕರ್; ಗವರ್ನರ್ ಟು ಉಪರಾಷ್ಟ್ರಪತಿ ಹುದ್ದೆ…ರೈತನ ಮಗನೊಬ್ಬನ ಯಶೋಗಾಥೆ
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು.
Team Udayavani, Jul 18, 2022, 3:53 PM IST
ನವದೆಹಲಿ: “ಒಬ್ಬ ರೈತನ ಮಗನಾಗಿ ಇಂತಹ ದೊಡ್ಡ ಜವಾಬ್ದಾರಿಯ ಹೊಣೆ ಹೊರಲಿದ್ದೇನೆ ಎಂಬ ವಿಷಯವನ್ನು ನಾನು ಕನಸಿನಲ್ಲೂ ಊಹಿಸಿರಲಿಲ್ಲ”…ಇದು ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಜಗದೀಪ್ ಧನ್ಕರ್ ಸೋಮವಾರ (ಜುಲೈ 18) ನಾಮಪತ್ರ ಸಲ್ಲಿಸಿದ ನಂತರ ನೀಡಿದ ಪ್ರತಿಕ್ರಿಯೆಯಾಗಿದೆ.
ಇದನ್ನೂ ಓದಿ:ಕುಡಿದ ಮತ್ತಿನಲ್ಲಿ ಮನೆಗೆ ಬಂದಿದ್ದ ಸಂಬಂಧಿಯನ್ನೇ ಚಾಕುವಿನಿಂದ ಇರಿದು ಕೊಲೆಗೈದ…
ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಧನ್ಕರ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಪ್ರತಿಷ್ಠಿತ ಹುದ್ದೆಗೆ ಆಯ್ಕೆಯಾಗುತ್ತಿರುವ ಕುರಿತು ನಿಮಗೆ ಏನು ಅನ್ನಿಸುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಧನ್ಕರ್, ನಾನು ನಮ್ರತೆಯ, ರೈತ ಕುಟುಂಬದಲ್ಲಿ ಜನಿಸಿದವನು. ಪ್ರಾಥಮಿಕ ಶಿಕ್ಷಣ ಪಡೆಯಲು ಹೆಣಗಾಡಿದ್ದು, ಪ್ರತಿದಿನ ಶಾಲೆಗೆ ಹೋಗಲು ಆರು ಕಿಲೋ ಮೀಟರ್ ದೂರದವರೆಗೆ ನಡೆದುಕೊಂಡು ಹೋಗುತ್ತಿದ್ದೆ ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ.
ನನ್ನಂತಹ ಸಾಮಾನ್ಯ ವ್ಯಕ್ತಿಗೂ ಇಂತಹ ದೊಡ್ಡ ಹುದ್ದೆ ದೊರೆಯಲು ಕಾರಣರಾದ ನಮ್ಮ ಸಂವಿಧಾನ ರಚಿಸಿದವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಧನ್ಕರ್ ಹೇಳಿದರು. ಪಶ್ಚಿಮಬಂಗಾಳದ ಮಾಜಿ ಗವರ್ನರ್ ಜಗದೀಪ್ ಧನ್ಕರ್ ಆಗಸ್ಟ್ 6ರಂದು ನಡೆಯಲಿರುವ ಉಪರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ವಿರುದ್ಧ ಸ್ಪರ್ಧಿಸಲಿದ್ದಾರೆ.
1951 ಮೇ 18ರಂದು ಜನಿಸಿದ್ದ ಜಗದೀಪ್ ಧನ್ಕರ್ ಅವರು ಪಶ್ಚಿಮಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸುವ ಮೊದಲು ಭಾರತೀಯ ಜನತಾ ಪಕ್ಷದ ಸದಸ್ಯರಾಗಿದ್ದರು. ಮಾಜಿ ಪ್ರಧಾನಿ ಚಂದ್ರಶೇಖರ್ ನೇತೃತ್ವದ ಸರ್ಕಾರದಲ್ಲಿ ಧನ್ಕರ್ ಸಂಸದೀಯ ವ್ಯವಹಾರಗಳ ರಾಜ್ಯ ಖಾತೆ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಬಿಎಸ್ಸಿ, ಎಲ್ ಎಲ್ ಬಿ ಪದವೀಧರರಾಗಿರುವ ಜಗದೀಪ್ ಧನ್ಕರ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣವನ್ನು ಸರ್ಕಾರಿ ಶಾಲೆಯಲ್ಲಿ ಪಡೆದಿದ್ದರು. ರಾಜಸ್ಥಾನದ ಹಿಂದೂ ಜಾಟ್ ಸಮುದಾಯದ ಧನ್ಕರ್ ಅವರು 1979ರಲ್ಲಿ ಸುದೇಶ್ ಧನ್ಕರ್ ಅವರನ್ನು ವಿವಾಹವಾಗಿದ್ದರು. ಈ ದಂಪತಿಗೆ (ಕಾಮ್ನಾ) ಪುತ್ರಿಯೊಬ್ಬಳಿದ್ದಾಳೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ