ಕೃಷಿ ನೀತಿಗೆ ವಿರೋಧ: ಬೃಹತ್ ಪ್ರತಿಭಟನೆ- ಆರು ರಾಜ್ಯಗಳ ರೈತರಿಗೆ ದೆಹಲಿ ಪ್ರವೇಶಿಸಲು ಅನುಮತಿ
ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ದೆಹಲಿ ಪೊಲೀಸ್ ಕಮಿಷನರ್ ಮನವಿ ಮಾಡಿಕೊಂಡಿದ್ದಾರೆ.
Team Udayavani, Nov 27, 2020, 3:07 PM IST
ನವದೆಹಲಿ: ಕೇಂದ್ರದ ಕೃಷಿ ನೀತಿ ವಿರೋಧಿಸಿ ಪಂಜಾಬ್ ಸೇರಿದಂತೆ ಆರು ರಾಜ್ಯಗಳ ಸಾವಿರಾರು ರೈತರ ದೆಹಲಿ ಚಲೋ ಪ್ರತಿಭಟನೆಯನ್ನು ತಡೆಯುವ ನಿಟ್ಟಿನಲ್ಲಿ ಹರಸಾಹಸ ಪಡುತ್ತಿದ್ದು, ಏತನ್ಮಧ್ಯೆ ಪಂಜಾಬ್-ಹರ್ಯಾಣ ಗಡಿಭಾಗದಲ್ಲಿ ಘರ್ಷಣೆ ನಡೆದಿತ್ತು. ಇದೀಗ ಶುಕ್ರವಾರ ವಿವಿಧ ಭಾಗದಿಂದ ಆಗಮಿಸುತ್ತಿರುವ ಪ್ರತಿಭಟನಾ ನಿರತ ರೈತರಿಗೆ ದೆಹಲಿ ಪ್ರವೇಶಿಸಲು ಅನುಮತಿ ನೀಡಲಾಗಿದೆ ಎಂದು ವರದಿ ತಿಳಿಸಿದೆ.
ಕೇಂದ್ರದ ಕೃಷಿ ನೀತಿ ವಿರೋಧಿಸಿ ಉತ್ತರಪ್ರದೇಶ, ಹರ್ಯಾಣ, ಉತ್ತರಾಖಂಡ್, ರಾಜಸ್ಥಾನ್, ಕೇರಳ ಮತ್ತು ಪಂಜಾಬ್ ಸೇರಿದಂತೆ ಆರು ರಾಜ್ಯಗಳ ರೈತರು ಟ್ರ್ಯಾಕ್ಟರ್ ಮೂಲಕ ಹಲವು ದಿನಗಳಿಗೆ ಸಾಕಾಗುವಷ್ಟು ಆಹಾರ, ನೀರಿನ ಜತೆಗೆ ದೆಹಲಿ ಚಲೋ ಆರಂಭಿಸಿದ್ದರು. ಆರು ರಾಜ್ಯಗಳಿಂದ ಆಗಮಿಸುತ್ತಿರುವ ಸಾವಿರಾರು ರೈತರು ರಾಜಧಾನಿ ಕೇಂದ್ರಭಾಗವಾಗಿರುವ ರಾಮ್ ಲೀಲಾ ಮೈದಾನದಲ್ಲಿ ಧರಣಿ ನಡೆಸಲು ಉದ್ದೇಶಿಸಿರುವುದಾಗಿ ವರದಿ ತಿಳಿಸಿದೆ.
ರೈತರು ಆದೇಶವನ್ನು ಪಾಲಿಸುವ ಮೂಲಕ ಬುರಾರಿ ನಿರಾಂಕಾರಿ ಮೈದಾನದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಬೇಕೆಂದು ದೆಹಲಿ ಪೊಲೀಸ್ ಕಮಿಷನರ್ ಮನವಿ ಮಾಡಿಕೊಂಡಿದ್ದಾರೆ. ಪ್ರತಿಭಟನಾನಿರತ ರೈತರಿಗೆ ರಾಮ್ ಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನೀಡುವುದಾಗಿ ಈ ಮೊದಲು ಪೊಲೀಸ್ ಕಮಿಷನರ್ ತಿಳಿಸಿದ್ದರು. ಆದರೆ ಇದೀಗ ನಿರಾಂಕಾರಿ ಮೈದಾನದಲ್ಲಿ ರೈತರಿಗೆ ಪ್ರತಿಭಟನೆ ನಡೆಸಲು ಅವಕಾಶ ನೀಡಲಾಗಿದೆ ಎಮದು ತಿಳಿಸಿದ್ದಾರೆ.
ಇದನ್ನೂ ಓದಿ:ದ್ವೇಷದಿಂದ ಕಂಗನಾ ನಿವಾಸ ಭಾಗಶಃ ಧ್ವಂಸ, ಇದು ಕಾನೂನು ಸಮ್ಮತವಲ್ಲ: ಹೈಕೋರ್ಟ್
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮನಕಲಕುವ ಘಟನೆ: ಕಬಡ್ಡಿ … ಕಬಡ್ಡಿ… ಎನ್ನುತ್ತಲೇ ಪ್ರಾಣಬಿಟ್ಟ ಯುವಕ !
ಸೆರಮ್ ಇನ್ಸ್ ಟಿಟ್ಯೂಟ್ ಅಗ್ನಿ ಅವಘಡದಲ್ಲಿ ಐವರು ದುರ್ಮರಣ, ಘಟನೆ ಬಗ್ಗೆ ತನಿಖೆಗೆ ಆದೇಶ
ಸೀಶೆಲ್ಸ್, ಮಯಾನ್ಮಾರ್ ದೇಶಗಳಿಗೆ ಭಾರತದ ಕೋವಿಡ್ ಲಸಿಕೆ ರವಾನೆ
ಪುಣೆಯ ಕೋವಿಶೀಲ್ಡ್ ಉತ್ಪಾದನಾ ಸೀರಂ ಇನ್ಸ್ ಟಿಟ್ಯೂಟ್ ನಲ್ಲಿ ಭಾರೀ ಬೆಂಕಿ ಅನಾಹುತ
‘ಪರಾಕ್ರಂ ದಿವಸ್’ ಆಚರಣೆಗೆ ಮೋದಿ ಕೋಲ್ಕತ್ತಾಗೆ ಭೇಟಿ ಖಚಿತ : ಪಿಎಮ್ಒ