ರೈತರ ಬೇಡಿಕೆ ಈಡೇರಿಕೆಗೆ ಕೇಂದ್ರ ಅಸ್ತು; 13 ತಿಂಗಳ ರೈತರ ಹೋರಾಟ ಕೊನೆಗೂ ಅಂತ್ಯ
ಕೇಂದ್ರ ಸರ್ಕಾರದ ನೂತನ ಕರಡು ಪ್ರಸ್ತಾಪ ನಮಗೆ ಲಭ್ಯವಾಗಿದ್ದು, ಈ ಬಗ್ಗೆ ಇಂದು ಸಂಯುಕ್ತ ಕಿಸಾಸ್ ಮೋರ್ಚಾ ಚರ್ಚೆ ನಡೆಸಿದೆ.
Team Udayavani, Dec 9, 2021, 2:56 PM IST
ನವದೆಹಲಿ:ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಕಳೆದ 13 ತಿಂಗಳಿನಿಂದ ಹೋರಾಟ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಂತ್ಯಗೊಳಿಸಿರುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾ ಗುರುವಾರ(ಡಿಸೆಂಬರ್ 09) ಘೋಷಿಸಿದೆ.
ಇದನ್ನೂ ಓದಿ:ಕೋವಿಡ್ ಕಾರಣದಿಂದ ಶಾಲೆ ಮುಚ್ಚುವುದಿಲ್ಲ: ಶಿಕ್ಷಣ ಸಚಿವರ ಸ್ಪಷ್ಟನೆ
ಕೇಂದ್ರ ಸರ್ಕಾರದ ನೂತನ ಕರಡು ಪ್ರಸ್ತಾಪ ನಮಗೆ ಲಭ್ಯವಾಗಿದ್ದು, ಈ ಬಗ್ಗೆ ಇಂದು ಸಂಯುಕ್ತ ಕಿಸಾಸ್ ಮೋರ್ಚಾ ಚರ್ಚೆ ನಡೆಸಿದೆ. ಅದರಂತೆ 13 ತಿಂಗಳಿನಿಂದ ದೀರ್ಘಕಾಲ ನಡೆಸುತ್ತಿದ್ದ ಹೋರಾಟವನ್ನು ಅಂತ್ಯಗೊಳಿಸುವ ನಿರ್ಧಾರವನ್ನು ಸಂಯುಕ್ತ ಕಿಸಾನ್ ಮೋರ್ಚಾ ತೆಗೆದುಕೊಂಡಿರುವುದಾಗಿ ಸಂಯುಕ್ತ ಕಿಸಾನ್ ಮೋರ್ಚಾದ ಐವರು ಸಮಿತಿ ಸದಸ್ಯರಲ್ಲಿ ಒಬ್ಬರಾದ ಅಶೋಕ್ ಧಾವ್ಲೆ ತಿಳಿಸಿದ್ದಾರೆ.
ಪ್ರತಿಭಟನೆಯನ್ನು ಅಂತ್ಯಗೊಳಿಸುವುದಾಗಿ ಘೋಷಿಸುವ ಮೊದಲೇ ದೆಹಲಿ-ಹರ್ಯಾಣದ ಗಡಿಭಾಗದ ಸಿಂಘುವಿನಲ್ಲಿ ಹಾಕಿದ್ದ ಟೆಂಟ್ ಗಳನ್ನು ರೈತರು ತೆರವುಗೊಳಿಸಲು ಆರಂಭಿಸಿದ್ದರು. ನಾವು ಪ್ರತಿಭಟನೆ ಕೈಬಿಟ್ಟು ಮನೆಗಳಿಗೆ ತೆರಳಲು ಸಿದ್ಧತೆ ನಡೆಸುತ್ತಿದ್ದೇವೆ ಎಂದು ರೈತರು ತಿಳಿಸಿದ್ದರು.
ಕೇಂದ್ರ ಸರ್ಕಾರ ಜಾರಿಗೊಳಿಸಿದ್ದ ಮೂರು ಕೃಷಿ ಕಾಯ್ದೆಯನ್ನು ರದ್ದುಗೊಳಿಸಬೇಕು ಹಾಗೂ ಬೆಂಬಲ ಬೆಲೆ ನಿಗದಿಪಡಿಸಬೇಕು ಎಂದು ಆಗ್ರಹಿಸಿ 2020ರ ನವೆಂಬರ್ 26ರಿಂದ ಸಂಯುಕ್ತ ಕಿಸಾನ್ ಮೋರ್ಚಾ ದೆಹಲಿಯ ಮೂರು ಗಡಿಭಾಗಗಳಾದ ಸಿಂಘು, ಗಾಜಿಪುರ್ ಹಾಗೂ ಟಿಕ್ರಿಯಲ್ಲಿ ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ದೀರ್ಘ ಒಂದು ವರ್ಷಗಳ ಕಾಲದಿಂದ ರೈತರು ಹೋರಾಟ ನಡೆಸುತ್ತಿದ್ದು, ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೂರು ಕಾಯ್ದೆಯನ್ನು ರದ್ದುಗೊಳಿಸುವುದಾಗಿ ಘೋಷಿಸಿದ್ದರು. ಅದರಂತೆ ಲೋಕಸಭೆಯಲ್ಲಿ ಕಾಯ್ದೆಯನ್ನು ರದ್ದುಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ