ಕಾಶ್ಮೀರಿ ಪಂಡಿತರ ವಲಸೆ; ಒಂದು ವೇಳೆ ನಾನೇ ತಪ್ಪಿತಸ್ಥನಾದರೆ ಗಲ್ಲಿಗೇರಿಸಿ: ಫಾರೂಖ್ ಸಂದರ್ಶನ
ಸಮಿತಿಯನ್ನು ನೇಮಕ ಮಾಡಿದರೆ ಆಗ ಯಾರು ಹೊಣೆಗಾರರು ಎಂಬ ಸತ್ಯ ಬೆಳಕಿಗೆ ಬರುತ್ತದೆ
Team Udayavani, Mar 22, 2022, 12:48 PM IST
ನವದೆಹಲಿ: ಬಾಲಿವುಡ್ ನ ದ ಕಾಶ್ಮೀರ್ ಫೈಲ್ಸ್ ಸಿನಿಮಾ ತೆರೆಕಂಡ ಬಳಿಕ ಜಮ್ಮು-ಕಾಶ್ಮೀರದಿಂದ ಕಾಶ್ಮೀರಿ ಪಂಡಿತರು ಸಾಮೂಹಿಕವಾಗಿ ವಲಸೆ ಹೋಗಿರುವ ವಿಚಾರ ಈಗ ರಾಜಕೀಯ ವಲಯದಲ್ಲಿ ಮತ್ತೆ ಮುನ್ನೆಲೆಗೆ ಬಂದಿದ್ದು, ಒಂದು ವೇಳೆ ಕಾಶ್ಮೀರಿ ಪಂಡಿತರ ವಲಸೆಗೆ ನಾನೇ ಹೊಣೆಗಾರ ಎಂದು ಸಾಬೀತಾದರೆ ನನ್ನ ಗಲ್ಲಿಗೇರಿಸಿ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ:ಬಡ ಯುವತಿಯ ಮದುವೆಗೆ ನೆರವಾದ ಮಂಗಳಮುಖಿಯರು
“ನೀವು ಪ್ರಾಮಾಣಿಕ ನ್ಯಾಯಾಧೀಶರೋ ಅಥವಾ ಸಮಿತಿಯನ್ನು ನೇಮಕ ಮಾಡಿದರೆ ಆಗ ಯಾರು ಹೊಣೆಗಾರರು ಎಂಬ ಸತ್ಯ ಬೆಳಕಿಗೆ ಬರುತ್ತದೆ. ಒಂದು ವೇಳೆ ಫಾರೂಖ್ ಅಬ್ದುಲ್ಲಾ ಹೊಣೆ ಎಂದಾದರೆ, ದೇಶದ ಯಾವುದೇ ಭಾಗದಲ್ಲೂ ನೇಣಿಗೇರಲು ಸಿದ್ದನಾಗಿದ್ದೇನೆ. ನಾನು ವಿಚಾರಣೆಯನ್ನು ಎದುರಿಸಲು ಸಿದ್ದನಿದ್ದೇನೆ. ಆದರೆ ಹೊಣೆಗಾರರಲ್ಲದ ಜನರನ್ನು ದೂಷಿಸಬೇಡಿ” ಎಂದು ಇಂಡಿಯಾ ಟುಡೇಗೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಕಾಶ್ಮೀರಿ ಪಂಡಿತರ ವಲಸೆಗೆ ನಾನು ಹೊಣೆಗಾರನಲ್ಲ ಎಂದು ಭಾವಿಸುತ್ತೇನೆ. ಒಂದು ವೇಳೆ ಈ ಕಹಿ ಸತ್ಯವನ್ನು ಜನರು ತಿಳಿದುಕೊಳ್ಳಬೇಕಾದರೆ ಅಂದಿನ ಗುಪ್ತಚರ ಇಲಾಖೆ ಮುಖ್ಯಸ್ಥರೊಂದಿಗೆ ಅಥವಾ ಅಂದು ಕೇಂದ್ರ ಸಚಿವರಾಗಿದ್ದ ಕೇರಳದ ರಾಜ್ಯಪಾಲ ಅರಿಫ್ ಮೊಹಮ್ಮದ್ ಖಾನ್ ಅವರ ಜೊತೆ ಮಾತನಾಡಬೇಕು ಎಂದು ಫಾರೂಖ್ ಸಂದರ್ಶನದಲ್ಲಿ ಹೇಳಿದ್ದಾರೆ.
1990ರ ದಶಕದಲ್ಲಿ ಕಾಶ್ಮೀರಿ ಪಂಡಿತರಿಗೆ ಮಾತ್ರವಲ್ಲ, ಸಿಖ್ ಮತ್ತು ಮುಸ್ಲಿಮ್ ಸಮುದಾಯಕ್ಕೆ ಏನಾಯಿತು ಎಂಬ ಸತ್ಯ ಹೊರಬರಲು ಆಯೋಗವನ್ನು ರಚಿಸಬೇಕು. ಅಂದು ನನ್ನ ಶಾಸಕರು, ಪಕ್ಷದ ಕಾರ್ಯಕರ್ತರು ಹಾಗೂ ನನ್ನ ಸಚಿವರುಗಳು ತಮ್ಮ ಆಹಾರವನ್ನು ಮರದ ಮೇಲಿನಿಂದ ತೆಗೆದುಕೊಳ್ಳಬೇಕಾದಂತಹ ಸ್ಥಿತಿ ನಿರ್ಮಾಣವಾಗಿತ್ತು ಎಂದು ತಿಳಿಸಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ದ ಕಾಶ್ಮೀರ್ ಫೈಲ್ಸ್ ಪ್ರಚಾರತಂತ್ರದ ಸಿನಿಮಾವಾಗಿದೆ ಎಂದು ಫಾರೂಖ್ ಅಬ್ದುಲ್ಲಾ ಆರೋಪಿಸಿದ್ದಾರೆ. ಅಂದು ಕಾಶ್ಮೀರದಲ್ಲಿ ನಡೆದ ಘಟನೆ ಬಗ್ಗೆ ಇಂದಿಗೂ ನನ್ನ ಹೃದಯ ಮಿಡಿಯುತ್ತಿದೆ ಎಂದು ಫಾರೂಖ್ ಅಬ್ದುಲ್ಲಾ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ