ರೈತರ ಮೇಲಿನ ಕಾಳಜಿಯಲ್ಲ, ಮುಂಬರುವ ಚುನಾವಣಾ ಭಯದಿಂದ ಕೃಷಿ ಕಾಯ್ದೆ ವಾಪಸ್: ಚಿದಂಬರಂ
ಚೀನಾ ಸೇನೆ ಭಾರತದ ಗಡಿಯೊಳಗೆ ನುಸುಳಿ, ನಮ್ಮ ಜಾಗವನ್ನು ಕಬಳಿಸಿರುವುದನ್ನು ಒಪ್ಪಿಕೊಳ್ಳಬೇಕು.
Team Udayavani, Nov 19, 2021, 2:44 PM IST
ನವದೆಹಲಿ: ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ರೈತರ ಮೇಲಿನ ಕಾಳಜಿಯಾಗಲಿ ಅಥವಾ ತಮ್ಮ ಧೋರಣೆಯನ್ನು ಬದಲಾಯಿಸಿ ತೆಗೆದುಕೊಂಡಿಲ್ಲ. ಮುಂಬರುವ ಚುನಾವಣೆಯ ಭಯದಲ್ಲಿ ಈ ಘೋಷಣೆ ಹೊರಡಿಸಿದೆ ಎಂದು ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಪಿ.ಚಿದಂಬರಂ ಟೀಕಿಸಿದ್ದಾರೆ.
ಇದನ್ನೂ ಓದಿ:ರಾತ್ರಿ ಬೆಳೆ ತಿಂದು ಜಮೀನಿನಲ್ಲೇ ಬೀಡು ಬಿಟ್ಟ ಕಾಡಾನೆಗಳು
ಪ್ರಜಾಪ್ರಭುತ್ವ ವ್ಯವಸ್ಥೆಯ ಪ್ರತಿಭಟನೆಯಿಂದ ಇದು ಸಾಧ್ಯವಾಗಿಲ್ಲ, ಬದಲಾಗಿ ಮುಂಬರುವ ಚುನಾವಣೆಯ ಭಯದಿಂದ ಸಾಧ್ಯವಾಗಿದೆ. ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಘೋಷಿಸಿರುವುದು ಹೃತ್ಪೂರ್ವಕವಾಗಿ ಅಲ್ಲ ಎಂದು ಚಿದಂಬರಂ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಏನೇ ಇರಲಿ, ಇದೊಂದು ರೈತರ ಬಹುದೊಡ್ಡ ವಿಜಯವಾಗಿದೆ. ಅಷ್ಟೇ ಅಲ್ಲ ಕಾಂಗ್ರೆಸ್ ಪಕ್ಷ ಕೂಡಾ ಕೃಷಿ ಕಾಯ್ದೆಯನ್ನು ತೀವ್ರವಾಗಿ ವಿರೋಧಿಸಿರುವುದಾಗಿ ಈ ಸಂದರ್ಭದಲ್ಲಿ ಉಲ್ಲೇಖಿಸಿದ್ದಾರೆ. ಒಂದು ವೇಳೆ ಮುಂಬರುವ ಚುನಾವಣೆಯಲ್ಲಿನ ಭಯದಿಂದ ಪ್ರಧಾನಿ ಈ ನಿರ್ಧಾರ ತೆಗೆದುಕೊಂಡಿದ್ದರೆ, ನೋಟು ರದ್ದತಿಯೂ ಹಿಮಾಲಯನ್ ಬ್ಲಂಡರ್ ನಂತೆ ಎಂಬುದನ್ನು ಒಪ್ಪಿಕೊಳ್ಳಬೇಕು. ಚೀನಾ ಸೇನೆ ಭಾರತದ ಗಡಿಯೊಳಗೆ ನುಸುಳಿ, ನಮ್ಮ ಜಾಗವನ್ನು ಕಬಳಿಸಿರುವುದನ್ನು ಒಪ್ಪಿಕೊಳ್ಳಬೇಕು. ಅದೇ ರೀತಿ ಸಿಎಎ ಕೂಡಾ ತಾರತಮ್ಯದ ಕಾಯ್ದೆ ಎಂಬುದನ್ನು ಒಪ್ಪಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಮಹತ್ವದ ಬೆಳವಣಿಗೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ(ನವೆಂಬರ್ 19) ಮೂರು ಕೃಷಿ ಕಾಯ್ದೆಗಳನ್ನು ಕೇಮದ್ರ ಸರ್ಕಾರ ವಾಪಸ್ ಪಡೆಯುವುದಾಗಿ ಘೋಷಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ