ಕೋವಿಡ್ : ಆರ್ಥಿಕ ನಷ್ಟ ಅನುಭವಿಸಿದ ಕ್ಷೇತ್ರಗಳ ಪುನಶ್ಚೇತನಕ್ಕೆ 6.28 ಲಕ್ಷ ಕೋಟಿ ಪ್ಯಾಕೇಜ್
ಹೊಸಬರಿಗೆ ಸಾಲ ನೀಡುವ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
Team Udayavani, Jun 28, 2021, 7:12 PM IST
ನವದೆಹಲಿ: ಕೋವಿಡ್ 19 ಎರಡನೇ ಅಲೆಯ ಪರಿಣಾಮ ಆರ್ಥಿಕವಾಗಿ ನಷ್ಟ ಅನುಭವಿಸಿದ ಕ್ಷೇತ್ರಗಳ ಆರ್ಥಿಕ ಪುನಶ್ಚೇತನಕ್ಕಾಗಿ 1.1 ಲಕ್ಷ ಕೋಟಿಗಳ ಸಾಲ ನೀಡುವಿಕೆ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಸೋಮವಾರ(ಜೂನ್ 28)
ಘೋಷಿಸಿದ್ದಾರೆ.
ಇದನ್ನೂ ಓದಿ:ಜಮ್ಮು: ಹಲವು ದಾಳಿ, ಹತ್ಯೆ ಪ್ರಕರಣದಲ್ಲಿ ಶಾಮೀಲಾಗಿದ್ದ ಲಷ್ಕರ್ ಕಮಾಂಡರ್ ನದೀಮ್ ಬಂಧನ
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು, ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯಕ್ಕಾಗಿ 50,000 ಸಾವಿರ ಕೋಟಿ ರೂಪಾಯಿ ಹಣವನ್ನು ಮೀಸಲಿರಿಸಲಾಗಿದೆ ಎಂದು ಹೇಳಿದರು.
“ನಾವು ಇಂದು ಎಂಟು ಆರ್ಥಿಕ ಪರಿಹಾರ ಕ್ರಮಗಳನ್ನು ಘೋಷಿಸುತ್ತಿದ್ದೇವೆ, ಇದರಲ್ಲಿ ನಾಲ್ಕು ಸಂಪೂರ್ಣವಾಗಿ ನೂತನವಾಗಿದ್ದು ಮತ್ತು ಒಂದು ಆರೋಗ್ಯದ ಮೂಲ ಸೌಕರ್ಯಕ್ಕೆ ಸೇರಿದ್ದಾಗಿದೆ. ಈ ನಿಟ್ಟಿನಲ್ಲಿ ಕೋವಿಡ್ ನಿಂದ ಆರ್ಥಿಕ ನಷ್ಟ ಅನುಭವಿಸಿದ ಕ್ಷೇತ್ರಗಳ ಪುನಶ್ಚೇತನಕ್ಕಾಗಿ 1.1 ಲಕ್ಷ ಕೋಟಿ ಸಾಲಗಳ ಗ್ಯಾರಂಟಿ ಯೋಜನೆ ಇದಾಗಿದೆ” ಎಂದು ಸೀತಾರಾಮನ್ ವಿವರ ನೀಡಿದ್ದಾರೆ.
ಸಾಲ ಖಾತರಿ ಯೋಜನೆಯು 25 ಲಕ್ಷ ಜನರಿಗೆ ನೆರವು ಕಲ್ಪಿಸಲಿದೆ. ಅಷ್ಟೇ ಅಲ್ಲ ಸಣ್ಣ ಹಣಕಾಸು ಸಂಸ್ಥೆಗಳಿಂದ ಸಾಲಗಳನ್ನು ವಿತರಿಸಲಾಗುದು, ಇದರಲ್ಲಿ 1.25 ಲಕ್ಷ ರೂಪಾಯಿ ಸಾಲದ ರೂಪದಲ್ಲಿ ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್
ತಿಳಿಸಿದ್ದಾರೆ.
ಈ ಯೋಜನೆಯಡಿ ಬಡ್ಡಿದರ ಭಾರತೀಯ ರಿಸರ್ವ್ ಬ್ಯಾಂಕ್ ನಿಗದಿಪಡಿಸಿದಕ್ಕಿಂತ ಶೇ.2ರಷ್ಟು ಕಡಿಮೆ ಇರಲಿದೆ. ಸಾಲದ ಅವಧಿ ಮೂರು ವರ್ಷ. ಹಳೇ ಸಾಲದ ಮರು ಪಾವತಿಗಿಂತ, ಹೊಸಬರಿಗೆ ಸಾಲ ನೀಡುವ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!