ಬೀದಿ ನಾಯಿಗಳ ಅನ್ನದಾತನಿಗೆ ಆರ್ಥಿಕ ಸಂಕಷ್ಟ


Team Udayavani, Jul 15, 2022, 2:28 PM IST

11dog

ಪುತ್ತೂರು: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿರುವ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ‌ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ನಾಯಿಗಳ ಸಂಕಷ್ಟ ತಾಳಲಾರದೆ ಅನ್ನ ನೀಡುವ ಕಾರ್ಯವನ್ನು ಆರಂಭಿಸಿರುವ ರಾಜೇಶ್ ಬನ್ನೂರು  ಆಹಾರ ನೀಡುವ ಕೆಲಸವನ್ನು ನಿಲ್ಲಿಸಲು ತೀರ್ಮಾನಿಸಿದ್ದಾರೆ.

ಸಾಕು ಪ್ರಾಣಿಗಳನ್ನು ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿಯವರ ಚಾರ್ಲಿ 777  ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಆದರೆ ಚಾರ್ಲಿ ಸಿನಿಮಾ ಬರುವ ಮೊದಲೇ ಅಂದರೆ ಸುಮಾರು 15 ವರ್ಷಗಳ ಹಿಂದೆಯೇ ಈ ಬೀದಿ ನಾಯಿಗಳನ್ನು ತಮ್ಮ ಮನೆಯ ಸದಸ್ಯರಂತೆ ಕಾಣುವ ಅಪರೂಪದ ಅನ್ನದಾತ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು.

ಪುತ್ತೂರು ಪುರಸಭೆ ಇರುವ ಸಮಯದಲ್ಲಿ ಹಲವು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದದ್ದಾರೆ. ಇವರು ತಿರುಗಾಡಿದ ಕಡೆಗಳಲ್ಲೆಲ್ಲಾ ನಾಯಿಗಳ ದಂಡು ಇವರನ್ನು ಸುತ್ತುವರಿಯುತ್ತೆ. ಈ ರೀತಿಯಾದ ಪರಿಚಯ ನಾಯಿಗಳಿಗೆ ಆಹಾರ, ಆರೈಕೆ ನೀಡುವ ತನಕ ಬೆಳೆದಿದೆ. ಸುಮಾರು 15 ವರ್ಷಗಳಿಂದ ಬೆಳೆದು ಬಂದ ಈ ಸ್ನೇಹಾಚಾರವನ್ನು ಬಿಟ್ಟು ಬರಲಾರದಂತಹ ಸಂಕಷ್ಟದಲ್ಲಿ ರಾಜೇಶ್ ಇದೀಗ ಸಿಲುಕಿದ್ದಾರೆ.

ಇದನ್ನೂ ಓದಿ:ಸರ್ಕಾರಿ ಕಚೇರಿಗಳಲ್ಲಿ ಇನ್ನು ಫೋಟೋ & ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ

ಪುತ್ತೂರು ಪೇಟೆಯಾದ್ಯಂತ ಸುಮಾರು 200 ಕ್ಕೂ ಮಿಕ್ಕಿದ ನಾಯಿಗಳ ಅನ್ನದಾತರಾಗಿರುವ ರಾಜೇಶ್ ಬನ್ನೂರು ಈ ನಾಯಿಗಳ ಆರೈಕೆ, ಆಹಾರಕ್ಕಾಗಿ ದಿನವೊಂದಕ್ಕೆ 1000 ದಿಂದ 1500 ರೂಪಾಯಿಗಳನ್ನು ವ್ಯಯಿಸುತ್ತಿದ್ದಾರೆ. ಕೆಲವು ಪರಿಚಯಸ್ಥರು ರಾಜೇಶ್ ಬನ್ನೂರರ ಈ ಸೇವೆಗೆ ತಮ್ಮ ಕೈಯಲ್ಲಾದ ಮಟ್ಟಿಗೆ ಸಹಕಾರ, ಸಹಾಯವನ್ನೂ ನೀಡುತ್ತಿದ್ದಾರೆ. ಆದರೆ‌ ಹೆಚ್ಚಿನ ಪಾಲನ್ನು ರಾಜೇಶ್ ಬನ್ನೂರು ಸ್ವತಃ ಹೊತ್ತುಕೊಳ್ಳುವುದರಿಂದ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನಾಯಿಗಳಿಗೆ ಅನ್ನ ನೀಡುವುದನ್ನು ನಿಲ್ಲಿಸಬೇಕೆಂದು ಹಲವು ಬಾರಿ ನಿರ್ಧರಿಸಿದ್ದರೂ, ನಿರ್ಧಾರ ಮಾತ್ರ ಮುಂದೂಡಿಕೊಂಡೇ ಹೋಗಿದೆ. ಆದರೆ ಈ ಬಾರಿ ಮಾತ್ರ ನಿರ್ವಹಿಸಲಾರದ ಹಂತಕ್ಕೆ ತಲುಪಿರುವ ಕಾರಣ ಅನಿವಾರ್ಯವಾಗಿ ಸಮಾಜದ ಸಹಾಯಕ್ಕೆ ಕೈಯೊಡ್ಡಿದ್ದಾರೆ. ಅದರಲ್ಲೂ ಸಮಾಜ ಸೇವಾ ಸಂಘಗಳು ಮುಂದೆ ಬಂದಲ್ಲಿ ಬೀದಿ ನಾಯಿಗಳನ್ನು ಯಾವುದೇ ತೊಂದರೆಯಿಲ್ಲದೆ ನೋಡಿಕೊಳ್ಳಬಹುದು ಎನ್ನುವುದು ಬನ್ನೂರರ‌ ಅಭಿಲಾಷೆ.

ಟಾಪ್ ನ್ಯೂಸ್

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.