ಚಾರ್ಮಾಡಿ ಅರಣ್ಯದಲ್ಲಿ ಅಗ್ನಿ ಆಕಸ್ಮಿಕ: ನೂರಾರು ಎಕರೆ ಅರಣ್ಯ ಬೆಂಕಿಗಾಹುತಿ
Team Udayavani, Jan 26, 2022, 10:02 AM IST
ಚಿಕ್ಕಮಗಳೂರು: ಗುಡ್ಡಕ್ಕೆ ಬೆಂಕಿ ತಗುಲಿ ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿಗಾವುತಿಯಾಗಿರೋ ಘಟನೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಮಲಯಮಾರುತ ಗುಡ್ಡದಲ್ಲಿ ನಡೆದಿದೆ.
ಮಳೆಗಾಲದಲ್ಲಿ ಯತೇಚ್ಛವಾಗಿ ಮಳೆ ಸುರಿದ ಕೊಟ್ಟಿಗೆಹಾರ ಭಾಗದಲ್ಲಿ ಈಗ ಅಷ್ಟೆ ಪ್ರಮಾಣದಲ್ಲಿ ಬಿಸಿಲು ಸುಡುತ್ತಿದೆ. ಬಿರುಬಿಸಿಲಿಗೆ ಗುಡ್ಡಗಳೆಲ್ಲಾ ಒಣಗಿ ನಿಂತಿದೆ. ಮಲಯ ಮಾರುತ ಗುಡ್ಡ ವ್ಯೂ ಪಾಯಿಂಟ್ ಆಗಿರುವುದರಿಂದ ಪ್ರವಾಸಿಗರು ಯಾರೋ ಸಿಗರೇಟ್ ಸೇದಿ ಎಸೆದಿರುವುದರಿಂದ ಬೆಂಕಿ ತಗುಲಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಗುಡ್ಡಕ್ಕೆ ಬೆಂಕಿ ತಗುಲಿದೆ ಎಂದು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅರಣ್ಯ ಅಧಿಕಾರಿಗಳು ಬೆಂಕಿಯನ್ನ ನಂದಿಸಿದ್ದಾರೆ. ರಸ್ತೆಯಿಂದ ಸುಮಾರು ನಾಲ್ಕೈದು ಕಿ.ಮೀ. ದೂರದ ಎತ್ತರಕ್ಕೆ ಬೆಟ್ಟಕ್ಕೆ ದೌಡಾಯಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗುಡ್ಡಕ್ಕೆ ಬೆಂಕಿ ಬಿದ್ದ ಪರಿಣಾಮ ನೂರಾರು ಪ್ರಾಣಿ-ಪಕ್ಷಿಗಳು, ಕೀಟಗಳು ಬೆಂಕಿಯಲ್ಲಿ ಬೆಂದಿವೆ. ಅರಣ್ಯ ಇಲಾಖೆ ಅಧಿಕಾರಿಗಳ ಸಮಯಪ್ರಜ್ಞೆಯಿಂದ ಸಾವಿರಾರು ಎಕರೆ ಅರಣ್ಯ ಹಾಗೂ ಜೀವಸಂಕುಲ ಅಪಾಯದಿಂದ ಪಾರಾದಂತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ
Rain ಮಾ. 20 – 24 ಕೆಲವೆಡೆ ಸಾಮಾನ್ಯ ಮಳೆ ಸಾಧ್ಯತೆ
Arecanut Market ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ
Lok Sabha Election 2024: ಗಡಿ ಭಾಗಗಳಲ್ಲಿ ತಪಾಸಣೆ ಬಿರುಸು
ಜೆಡಿಎಸ್ನಲ್ಲಿದ್ದು ಬಿಜೆಪಿಗೆ ಬೆಂಬಲ, ಸ್ವತಂತ್ರ ಸ್ಪರ್ಧೆ ಶೀಘ್ರ ನಿರ್ಧಾರ: ಮೊದಿನ್ ಬಾವಾ
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು