ಗತವೈಭವದತ್ತ ಮೊದಲ ಹೆಜ್ಜೆ… 2018ರ ಬಳಿಕ ಓಪನಿಂಗ್‌ ಸಡಗರ


Team Udayavani, Mar 30, 2023, 7:23 AM IST

ipl o[pening

ಅಹ್ಮದಾಬಾದ್‌: ಈ ಬಾರಿಯ ಐಪಿಎಲ್‌ ಪಂದ್ಯಾವಳಿ “ಗತವೈಭವದತ್ತ ಮೊದಲ ಹೆಜ್ಜೆ” ಎಂಬುದಾಗಿ ಬಣ್ಣಿಸಲ್ಪಟ್ಟಿದೆ. ಕಳೆದ 4 ವರ್ಷಗಳ ಕಾಲ ಪುಲ್ವಾಮಾ ದಾಳಿ ಹಾಗೂ ಕೊರೊನಾ ಉಪಟಳದಿಂದ ಐಪಿಎಲ್‌ನ ಜೋಶ್‌ ದೊಡ್ಡ ಮಟ್ಟದಲ್ಲಿ ಕಂಡುಬಂದಿರಲಿಲ್ಲ. ಈ ಬಾರಿ ಮತ್ತೆ ಹಿಂದಿನ ವೈಭವದ ಸ್ಪಷ್ಟ ಸೂಚನೆ ಲಭಿಸಿದೆ. ಇದಕ್ಕೆ ಕಾರಣ, ಉದ್ಘಾಟನ ಸಮಾರಂಭ. 2018ರ ಬಳಿಕ ಐಪಿಎಲ್‌ ಮೊದಲ ಬಾರಿಗೆ “ಐಪಿಎಲ್‌ ಓಪನಿಂಗ್‌ ಸೆರಮನಿ’ ನಡೆಯುತ್ತಿರುವುದು ವಿಶೇಷ.

2008ರ ಚೊಚ್ಚಲ ಕೂಟದಿಂದಲೂ ಐಪಿಎಲ್‌ ಭರ್ಜರಿ ಉದ್ಘಾಟನ ಸಮಾರಂಭಕ್ಕೆ ಸಾಕ್ಷಿಯಾಗುತ್ತ ಬಂದಿತ್ತು. ಸಲ್ಮಾನ್‌ ಖಾನ್‌, ಪಿಟ್‌ಬುಲ್‌, ಶಾರೂಖ್‌ ಖಾನ್‌, ಶ್ರೀಯಾ ಶರಣ್‌, ಕತ್ರಿನಾ ಕೈಫ್ ಮೊದಲಾದ ಸೆಲಿಬ್ರಿಟಿಗಳಿಂದ ರಂಗೇರಿಸಿಕೊಂಡಿತ್ತು. ಆದರೆ 2019ರಿಂದ 2022ರ ತನಕ ಐಪಿಎಲ್‌ ಉದ್ಘಾಟನ ಸಮಾರಂಭವನ್ನು ಕೈಬಿಡಲಾಯಿತು.
2019ರಂದು ಉದ್ಘಾಟನೆಯನ್ನು ಕೈಬಿಡಲು ಮುಖ್ಯ ಕಾರಣ ಪುಲ್ವಾಮ ದಾಳಿ. ಅಂದಿನ ಉದ್ಘಾಟನ ಸಮಾರಂಭದ ದೊಡ್ಡ ಮೊತ್ತವನ್ನು ಮೃತಪಟ್ಟ ಸಿಆರ್‌ಪಿಎಫ್ ಯೋಧರ ಕುಟುಂಬದವರಿಗೆ ನೀಡಲಾಯಿತು. ಬಳಿಕ ಕೊರೊನಾ ದಾಳಿ ನಡೆಸಿತು. ಐಪಿಎಲ್‌ ವೇಳಾಪಟ್ಟಿ, ಸ್ಥಳ, ಮಾದರಿ… ಎಲ್ಲವೂ ಅಸ್ತವ್ಯಸ್ತಗೊಂಡಿತು.

ಒಂದು ಗಂಟೆ ಶೋ
ಇದೀಗ 4 ವರ್ಷಗಳ ಬಳಿಕ ಐಪಿಎಲ್‌ ಅದ್ಧೂರಿಯ ಹಾಗೂ ರಂಗುರಂಗಿನ ಉದ್ಘಾಟನ ಸಮಾರಂಭವನ್ನು ಕಾಣಲಿದೆ. ಶುಕ್ರವಾರದ ಆರಂಭಿಕ ಪಂದ್ಯಕ್ಕೂ ಒಂದು ಗಂಟೆ ಮೊದಲು ಅಹ್ಮದಾಬಾದ್‌ನಲ್ಲಿ ಈ ಸಮಾರಂಭ ಕಳೆಗಟ್ಟಲಿದೆ. ಐಪಿಎಲ್‌ ತನ್ನ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದಂತೆ ಬಾಲಿವುಡ್‌ ನಟಿ ತಮನ್ನಾ ಭಾಟಿಯಾ ಮುಖ್ಯ ಆಕರ್ಷಣೆ ಆಗಲಿದ್ದಾರೆ. ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಹೆಸರು ಕೂಡ ಕೇಳಿಬರುತ್ತಿದೆ. ಆದರೆ ಬಿಸಿಸಿಐ ಮಾತ್ರ ಇನ್ನೂ ಗುಟ್ಟು ಬಿಟ್ಟುಕೊಟ್ಟಿಲ್ಲ.

ಎಲ್ಲ ನಾಯಕರಿಲ್ಲ
ಕೂಟದಲ್ಲಿ 10 ತಂಡಗಳು ಭಾಗವಹಿಸುತ್ತಿವೆಯಾದರೂ ಉದ್ಘಾಟನ ಸಮಾ ರಂಭದಲ್ಲಿ ಕೆಲವು ನಾಯಕರಿಗೆ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ.
ಈಗಿನ ಸ್ಥಿತಿಯಂತೆ ಪಂಜಾಬ್‌ ಕಿಂಗ್ಸ್‌, ಕೆಕೆಆರ್‌, ಲಕ್ನೋ ಮತ್ತು ಡೆಲ್ಲಿ ತಂಡಗಳ ನಾಯಕರು ಭಾಗವಹಿಸುವುದು ಅನುಮಾನ. ಇವರೆಲ್ಲ ಮರುದಿನ ಮೊಹಾಲಿ ಮತ್ತು ಲಕ್ನೋದಲ್ಲಿ ನಡೆಯುವ ಪಂದ್ಯದಲ್ಲಿ ಪಾಲ್ಗೊಳ್ಳಬೇಕಿದೆ.

ಟಾಪ್ ನ್ಯೂಸ್

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.