ಮಹಾರಾಷ್ಟ್ರದ ಐವರು ಸಚಿವರಿಗೆ ಕೋವಿಡ್ ದೃಢ..!
Team Udayavani, Feb 24, 2021, 2:04 PM IST
ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಎರಡನೇ ಅಲೆ ಹರಡುತ್ತಿರುವ ನಡುವೆ ಮಹಾರಾಷ್ಟ್ರದ ಐವರು ಸಚಿವರಿಗೆ ಸೋಂಕು ದೃಢವಾಗಿರುವುದು ಈಗ ವರದಿಯಾಗಿದೆ.
ಆಹಾರ ಹಾಗೂ ನಾಗರಿಕ ಸರಬರಾಜು ಸಚಿವ Chhagan Bhujbal ಈಗ ಕೋವಿಡ್ ಪಾಸಿಟಿವ್ ದೃಢಗೊಂಡಿರುವವರ ಪಟ್ಟಿಗೆ ಹೊಸದಾಗಿ ಸೇರ್ಪಡೆಗೊಂಡಿದ್ದಾರೆ.
ಓದಿ : ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ
“ನಾನು ಕೋವಿಡ್ ಸೋಂಕಿಗೆ ಒಳಗಾಗಿದ್ದೇನೆ. ಎರಡು ಮೂರು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.
माझी कोरोना टेस्ट पॉझिटिव्ह आली आहे. गेल्या दोन तीन दिवसात माझ्या संपर्कात अलेल्या सर्वांनी आपली कोरोना टेस्ट करून घ्यावी.माझी प्रकृती उत्तम असून काळजी करण्याचे कारण नाही.कोरोनाच्या पार्श्वभूमीवर सर्व नागरिकांनी योग्य ती काळजी घ्यावी.मास्क,सॅनिटायझर चा नियमित वापर करा.#COVID19
— Chhagan Bhujbal (@ChhaganCBhujbal) February 22, 2021
ಇತ್ತೀಚೆಗೆ, ಜಲ ಸಂಪನ್ಮೂಲ ಸಚಿವ ಜಯಂತ್ ಪಾಟೀಲ್, ಆಹಾರ ಮತ್ತು ಔಷಧೋತ್ಪನ್ನಗಳ ಸಚಿವ ಡಾ. ರಾಜೇಂದ್ರ ಶಿಂಗ್ನೆ, ಆರೋಗ್ಯ ಮಂತ್ರಿ ರಾಜೇಶ್ ಟೋಪೆ, ಶಿಕ್ಷಣ ಸಚಿವ ಓಂ ಪ್ರಕಾಶ್ ಕೋವಿಡ್ ಸೋಂಕಿಗೆ ಒಳಗಾಗಿದ್ದರು.
ಮಹಾರಾಷ್ಟ್ರದ 43 ಸಚಿವರುಗಳ ಪೈಕಿ 26 ಮಂದಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಂಡಿದ್ದು, ಸೋಂಕಿತರ ಪಟ್ಟಿಗೆ ಉಪ ಮುಖ್ಯ ಮಂತ್ರಿ ಅಜಿತ್ ಪವಾರ್, ಪಿ ಡಬ್ಲ್ಯೂ ಡಿ ಮಂತ್ರಿ ಅಶೋಕ್ ಚಾವನ್ ಕೂಡ ಸೇರಿದ್ದಾರೆ.
ಮಹಾರಾಷ್ಟ್ರದಲ್ಲಿ ಕೋವಿಡ್ ಆತಂಕ ಹೆಚ್ಚಾಗಿರುವ ಕಾರಣ ಅಲ್ಲಿನ ಸರ್ಕಾರ ಕೆಲವು ಪ್ರದೇಶಗಳಿಗೆ ನಿರ್ಬಂಧಗಳನ್ನು ಹೇರಿದೆ.
ಕೆಲವು ದಿನಗಳ ಹಿಂದೆ ಶಿವಸೇನೆಯ ಮುಖವಾಣಿ ಸಾಮ್ನಾ ತನ್ನ ಸಂಪಾದಕೀಯದಲ್ಲಿ ಮಹಾರಾಷ್ಟ್ರದಲ್ಲಿ ಜನರು ಎಚ್ಚೆತ್ತುಕೊಳ್ಳದಿದ್ದರೇ, ಲಾಕ್ಡೌನ್ ಹೇರುವ ಪರಿಸ್ಥಿತಿ ಬರಬಹುದು ಎಂದು ಪ್ರಕಟಿಸಿತ್ತು. ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕೂಡ ಇದೆ ಅಭಿಪ್ರಾಯವನ್ನು ವ್ಯಕ್ತ ಪಡಿಸಿದ್ದರು.
ಓದಿ : ಶ್ರೀದೇವಿ ಪುಣ್ಯಸ್ಮರಣೆ : ಬೊಗಸೆ ಕಂಗಳ ನಟಿ ಅಭಿಮಾನಿಗಳಿಗೆ ಆಘಾತ ನೀಡಿದ ದಿನವಿದು..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್