ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಐವರು ಆತ್ಮಹತ್ಯೆ ! ಕಾರಣ ನಿಗೂಢ
Team Udayavani, Aug 23, 2020, 4:40 PM IST
ಮಧ್ಯಪ್ರದೇಶ : ನಾಲ್ಕು ವರ್ಷದ ಮಗು ಸೇರಿ ಒಂದೇ ಕುಟುಂಬದ ಐದು ಮಂದಿಯ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮಧ್ಯಪ್ರದೇಶದ ತಿಕಮ್ ಘರ್ ಜಿಲ್ಲೆಯ ಖರ್ಗಾಪುರದಲ್ಲಿ ರವಿವಾರ ಮುಂಜಾನೆ ಬೆಳಕಿಗೆ ಬಂದಿದೆ.
ಮೃತರಲ್ಲಿ ತಿಕಮ್ ಘರ್ ಜಿಲ್ಲೆಯ ಖರ್ಗಾಪುರದ ನಿವಾಸಿಗಳಾದ ಧರ್ಮದಾಸ್ ಸೋನಿ (62) ಪತ್ನಿ ಪೂನಿ ಸೋನಿ(55) ಮಗ ಮನೋಹರ್ ಸೋನಿ (27) ಸೊಸೆ ಸೋನಂ ಸೋನಿ (25) ಹಾಗೂ ಮೊಮ್ಮಗ ಸಾನಿಧ್ಯ (4) ಎಂದು ತಿಳಿದುಬಂದಿದೆ.
ಧರ್ಮದಾಸ್ ಸೋನಿಯವರು ನಿವೃತ್ತ ಸರಕಾರಿ ನೌಕರರಾಗಿದ್ದರು ಎಂದು ತಿಳಿದುಬಂದಿದ್ದು ಘಟನೆ ಕುರಿತಂತೆ ಇಂದು ಬೆಳಿಗ್ಗೆ ಮನೆಗೆ ಹಾಲು ಹಾಕಲು ಹೋದ ವ್ಯಕ್ತಿ ಬಾಗಿಲು ಬಾಕಿದಾಗ ಬಾಗಿಲು ತೆರೆಯದ ಸಂದರ್ಭ ವ್ಯಕ್ತಿ ಮನೆಯನ್ನು ಪರಿಶೀಲಿಸಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹಗಳು ಕಂಡು ಬಂದಿವೆ ಕೊಡಲೇ ಆ ವ್ಯಕ್ತಿ ತಿಕಮ್ ಘರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು ಸ್ಥಳಕ್ಕೆ ಆಗಮಿಸಿದ ಪೊಲೀಸ್ ಅಧಿಕಾರಿಗಳು ಮನೆಯ ಬಾಗಿಲು ಒಡೆದು ಒಳಪ್ರವೇಶಿಸಿ ಪರಿಶೀಲಿಸಿದಾಗ ಮನೆಯ ಐದು ಮಂದಿಯ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಆದರೆ ಸಂಬಂಧಿಕರ ಹೇಳಿಕೆಯ ಪ್ರಕಾರ ಅಸ್ತಿ ವಿವಾದಕ್ಕೆ ಸಂಬಂಧಿಸಿ ಸಂಬಂಧಿಕರಲ್ಲಿ ಗಲಾಟೆಗಳು ನಡೆಯುತ್ತಿದ್ದವು ಎಂದು ತಿಳಿದುಬಂದಿದೆ ಪೊಲೀಸರು ಕೇಸು ದಾಖಲಿಸಿಕೊಂಡು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದು, ತನಿಖೆಯನ್ನು ಮುಂದುವರೆಸಿದ್ದಾರೆ.
ಆತ್ಮಹತ್ಯೆಯೋ ಅಥವಾ ಆಸ್ತಿ ವಿವಾದಕ್ಕೆ ಸಂಬಂಧಿಸಿ ನಡೆದ ಕೊಲೆಯೋ ಎಂಬುದು ಪೋಲೀಸರ ತನಿಖೆಯ ಬಳಿಕ ತಿಳಿಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ