ಅಂಫಾನ್ ಆಯಿತು ಇನ್ನು ಈಶಾನ್ಯ ರಾಜ್ಯಗಳಲ್ಲಿ ಪ್ರವಾಹ ಭೀತಿ
Team Udayavani, May 26, 2020, 5:19 PM IST
ಅಸ್ಸಾಂ ರಾಜ್ಯದ ಗೌಲಾಪ್ರ ಜಿಲ್ಲೆಯ ಗ್ರಾಮವೊಂದರಲ್ಲಿ ಪ್ರವಾಹ ಪೀಡಿತ ನದಿಯನ್ನು ದೋಣಿ ಮೂಲಕ ದಾಟುತ್ತಿರುವ ಗ್ರಾಮಸ್ಥರು.
ನವದೆಹಲಿ: ದೇಶಕ್ಕೆ ದೇಶವೇ ಕೋವಿಡ್ ಮಹಾಮಾರಿಯ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ ಪ್ರಾಕೃತಿಕ ವಿಕೋಪಗಳ ಹೊಡೆತಗಳು ಕೋವಿಡ್ ಹೋರಾಟಕ್ಕೆ ಅಡ್ಡಿಯಾಗುವಂತಿದೆ.
ಮೊನ್ನೆ ತಾನೆ ಒಡಿಸ್ಸಾ ಹಾಗೂ ಪಶ್ಚಿಮ ಬಂಗಾಲ ರಾಜ್ಯಗಳಲ್ಲಿ ಕೋಲಾಹಲ ಸೃಷ್ಟಿಸಿದ ಅಂಫಾನ್ ಸೂಪರ್ ಚಂಡಮಾರುತದ ಬೆನ್ನಲ್ಲೇ ಇದೀಗ ದೇಶದ ಕೆಲವೊಂದು ರಾಜ್ಯಗಳಲ್ಲಿ ಪ್ರವಾಹ ಬೀತಿ ಎದುರಾಗಿದೆ.
ಅಂಫಾನ್ ಚಂಡಮಾರುತ ತನ್ನ ಪ್ರಭಾವವನ್ನು ಕ್ಷೀಣಿಸಿಕೊಂಡ ಬೆನ್ನಲ್ಲೇ ಭಾರತದ ಈಶಾನ್ಯ ರಾಜ್ಯಗಳಲ್ಲಿ ಕಳೆದ ಮೇ 20 ರಿಂದ ನಿರಂತರ ಮಳೆ ಸುರಿಯುತ್ತಿದೆ.
ಈ ಕಾರಣದಿಂದ ಬ್ರಹ್ಮಪುತ್ರಾ ನದಿಯಲ್ಲಿ ಪ್ರವಾಹ ಸ್ಥಿತಿ ಉಂಟಾಗಿರುವುದರಿಂದ ಅಸ್ಸಾಂ ಹಾಗೂ ಮೇಘಾಲಯ ರಾಜ್ಯಗಳಿಗೆ ಪ್ರವಾಹ ಸ್ಥಿತಿಯ ಕುರಿತಾಗಿ ಕೇಂದ್ರೀಯ ಜಲ ಆಯೋಗ (CWC) ಈ ರಾಜ್ಯಗಳಿಗೆ ಎಚ್ಚರಿಕೆಯನ್ನು ರವಾನಿಸಿದೆ.
ಜೋರ್ಹಾಟ್ ಪ್ರದೇಶದಲ್ಲಿ ಬ್ರಹ್ಮಪುತ್ರಾ ನದಿಯ ಅಪಾಯದ ಹರಿಯುವಿಕೆ ಮಟ್ಟ 87.37 ಮೀಟರ್ ಗಳಾಗಿದ್ದು ಇಲ್ಲಿ ಈಗಾಗಲೇ ಈ ನದಿಯು 85.78 ಮೀಟರ್ ಗಳ ಮಟ್ಟದಲ್ಲಿ ಹರಿಯುತ್ತಿದೆ. ಇನ್ನು ಜೈಭರಾಲಿ ಪ್ರದೇಶದಲ್ಲಿ ನದಿಯ ಅಪಾಯದ ಮಟ್ಟ 78.5 ಮೀಟರ್ ಗಲಾಗಿದ್ದು ಇಲ್ಲಿ ಬ್ರಹ್ಮಪುತ್ರಾ ನದಿಯು 77.36 ಮೀಟರ್ ಗಳ ಮಟ್ಟದಲ್ಲಿ ಹರಿಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ದೋಣಿಯಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ