ಕೃಷ್ಣಾ ನದಿ ಪ್ರವಾಹ: ಕುಲಹಳ್ಳಿ ಗ್ರಾಮದ 100 ಕುಟುಂಬಗಳು ಸ್ಥಳಾಂತರ
ಹಿಪ್ಪರಗಿ-ಕುಲಹಳ್ಳಿ ತೋಟದ ರಸ್ತೆ ಜಲಾವೃತ
Team Udayavani, Jul 27, 2021, 6:38 PM IST
ಬನಹಟ್ಟಿ: ಕೃಷ್ಣಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ರಬಕವಿ ಬನಹಟ್ಟಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದ 100 ಕ್ಕೂ ಹೆಚ್ಚು ಕುಟುಂಬಗಳ ಅಂದಾಜು ೩೦೦ ಕ್ಕೂ ಹೆಚ್ಚು ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.
ಗ್ರಾಮದ ಮೋರೆ ಮತ್ತು ಗಸ್ತಿ ಪ್ರದೇಶದ ಜನರು ಪ್ರವಾಹದಿಂದ ತೊಂದರೆಗೆ ಒಳಗಾಗಿದ್ದಾರೆ. ಅದೇ ರೀತಿಯಾಗಿ ನದಿ ತೀರದ ತೋಟ ಹಾಗೂ ಹೊಲಗಳಲ್ಲಿ ವಾಸವಿದ್ದ ಜನರನ್ನು ಕೂಡಾ ಬೇರೆ ಕಡೆಗೆ ಸ್ಥಳಾಂತರಿಸಲಾಗಿದೆ.
ಮೋರೆ ಮತ್ತು ಗಸ್ತಿ ಪ್ರದೇಶದ ಜನರನ್ನು ಗ್ರಾಮದ ಸರ್ಕಾರಿ ಶಾಲೆಗಳಲ್ಲಿ ಹಾಗೂ ಶಾಲೆಯ ಆವರಣದಲ್ಲಿರುವ ಪತ್ರಾಸ ಶೆಡ್ಗಳಲ್ಲಿ ಸ್ಥಳಾಂತರಿಸಲಾಗಿದೆ. ಇಲ್ಲಿಯ ಜನರಿಗೆ ಬಿಸಿಯೂಟದ ವ್ಯವಸ್ಥೆಯನ್ನು ಮಾಡಿದ್ದು, ಗ್ರಾಮದ ಜನರು ಕೂಡಾ ಸಂತ್ರಸ್ತರಿಗೆ ಊಟದ ವ್ಯವಸ್ಥೆಯನ್ನು ಮಾಡುತ್ತಿದ್ದಾರೆ.
ಕೃಷ್ಣಾ ನದಿಯಲ್ಲಿಯ ಅಪಾರ ಪ್ರಮಾಣದ ನೀರಿನಿಂದಾಗಿ ಕುಲಹಳ್ಳಿ ಹಾಗೂ ಹಿಪ್ಪರಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಹಾಗೂ ಗೊಂಬಿಗುಡ್ಡ ಮೂಲಕ ಆಸಂಗಿಗೆ ಹೋಗುವ ತೋಟದ ರಸ್ತೆ ಕೂಡಾ ಜಲಾವೃತಗೊಂಡಿವೆ.
ಇದನ್ನೂ ಓದಿ :7 ರಾಜ್ಯಗಳ 22 ಜಿಲ್ಲೆಗಳಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳ: ಕಳವಳಕಾರಿ ಎಂದ ಕೇಂದ್ರ ಸರ್ಕಾರ
ಇಟ್ಟಂಗಿ ಭಟ್ಟಿಗಳು ನೀರಿನಲ್ಲಿ: ಕುಲಹಳ್ಳಿ ಗ್ರಾಮಕ್ಕೆ ಹೊಂದಿಕೊಂಡಿರುವ ಹತ್ತಾರು ಇಟ್ಟಂಗಿ ಭಟ್ಟಿಗಳು ಸಂಪೂರ್ಣವಾಗಿ ನೀರಿನಲ್ಲಿ ನಿಂತಿವೆ. ಮುಂದಿನ ದಿನಗಳಲ್ಲಿ ಲಕ್ಷಾಂತರ ಇಟ್ಟಂಗಿಗಳಿಗೆ ಇದರಿಂದ ಭಾರಿ ಹಾನಿಯಾಗಲಿದೆ.
ಸೋಮವಾರದಿಂದ ಕುಲಹಳ್ಳಿ ಗ್ರಾಮದಲ್ಲಿ ಕಾಳಜಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಜನರಿಗೆ ಊಟದ, ಜಾನುವಾರುಗಳಿಗೆ ಮೇವಿನ ಹಾಗೂ ಎಲ್ಲ ರೀತಿಯ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್