ನೆಹರು, ವಾಜಪೇಯಿ ಮೂರ್ಖತನದಿಂದ ತೈವಾನ್ ಚೀನಾದ ಭಾಗ ಎಂದು ಒಪ್ಪಿದ್ದೇವೆ; ಸ್ವಾಮಿ
ಸಾಮ್ರಾಜ್ಯಶಾಹಿ ಚೀನಾ ಜಗತ್ತಿನ ಎಲ್ಲಾ ಕಡೆ ಭೂ ಪ್ರದೇಶಗಳನ್ನು ಕಬಳಿಸುತ್ತಿದೆ
Team Udayavani, Aug 3, 2022, 3:48 PM IST
ನವದೆಹಲಿ: ದೇಶದ ಮಾಜಿ ಪ್ರಧಾನಿಗಳಾದ ಜವಾಹರಲಾಲ್ ನೆಹರು ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಮೂರ್ಖತನದಿಂದಾಗಿ ಟಿಬೆಟ್ ಮತ್ತು ತೈವಾನ್ ಚೀನಾದ ಭಾಗಗಳೆಂದು ಒಪ್ಪಿಕೊಂಡಿದ್ದೇವೆ ಎಂಬುದಾಗಿ ಮಾಜಿ ಕೇಂದ್ರ ಸಚಿವ, ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಆರೋಪಿಸಿದ್ದಾರೆ.
ಇದನ್ನೂ ಓದಿ:ಸ್ವಾತಂತ್ರ್ಯದ ಅಮೃತೋತ್ಸವ : 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ : ಎನ್.ರವಿಕುಮಾರ್
ಗಡಿ ನಿಯಂತ್ರಣ ಪ್ರದೇಶದಲ್ಲಿಯೂ ಪರಸ್ಪರ ಮಾಡಿಕೊಂಡ ಒಪ್ಪಂದವನ್ನೂ ಚೀನಾ ಗೌರವಿಸುತ್ತಿಲ್ಲ. ಅಷ್ಟೇ ಅಲ್ಲ ಲಡಾಖ್ ನ ಕೆಲ ಭೂ ಭಾಗಗಳನ್ನು ಕಬಳಿಸುತ್ತಿದೆ ಎಂದು ದೂರಿದರು. ಲಡಾಖ್ ಪ್ರದೇಶದಲ್ಲಿ ಚೀನಾ ಭೂ ಕಬಳಿಸುತ್ತಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಗಡಿಯೊಳಗೆ ಯಾರೂ ಬಂದಿಲ್ಲ ಎಂದು ಹೇಳುತ್ತಿರುವುದಾಗಿ ಟೀಕಿಸಿದರು.
ನೆಹರು ಮತ್ತು ವಾಜಪೇಯಿ ಅವರ ಮೂರ್ಖತನದಿಂದಾಗಿ ನಾವು ಭಾರತೀಯರು ಟಿಬೆಟ್ ಮತ್ತು ತೈವಾನ್ ಚೀನಾದ ಭಾಗ ಎಂದು ತಿಳಿದುಕೊಂಡಿದ್ದೇವೆ. ಸಾಮ್ರಾಜ್ಯಶಾಹಿ ಚೀನಾ ಜಗತ್ತಿನ ಎಲ್ಲಾ ಕಡೆ ಭೂ ಪ್ರದೇಶಗಳನ್ನು ಕಬಳಿಸುತ್ತಿದೆ ಎಂದು ಸ್ವಾಮಿ ಹೇಳಿದರು.
ಅಮೆರಿಕ ಸಂಸತ್ ಸ್ಪೀಕರ್ ನ್ಯಾನ್ಸಿ ಪೆಲೋಸಿ ಚೀನಾದ ಪ್ರಬಲ ವಿರೋಧದ ನಡುವೆಯೂ ತೈವಾನ್ ಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಸುಬ್ರಹ್ಮಣಿಯನ್ ಸ್ವಾಮಿ ಈ ಹೇಳಿಕೆ ನೀಡಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ