ಭಾರತ ಬತ್ತಳಿಕೆಗೆ ವಿದೇಶಿ ಲಸಿಕೆ ಬಾಣ ; ಕ್ಲಿನಿಕಲ್‌ ಟ್ರಯಲ್‌ ಷರತ್ತಿನಿಂದ ವಿನಾಯಿತಿ


Team Udayavani, Apr 15, 2021, 7:10 AM IST

ಭಾರತ ಬತ್ತಳಿಕೆಗೆ ವಿದೇಶಿ ಲಸಿಕೆ ಬಾಣ ; ಕ್ಲಿನಿಕಲ್‌ ಟ್ರಯಲ್‌ ಷರತ್ತಿನಿಂದ ವಿನಾಯಿತಿ

ಹೊಸದಿಲ್ಲಿ: ದೇಶದಲ್ಲಿ ದಿನಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಮಂದಿಗೆ ಸೋಂಕು ದೃಢಪಡುತ್ತಿರುವ ನಡುವೆಯೇ ಕೇಂದ್ರ ಸರಕಾರ ಇನ್ನಷ್ಟು ಲಸಿಕೆಗಳ ನಿರ್ಬಂಧಿತ ಬಳಕೆಗೆ ಅನುಮತಿ ನೀಡುವ ನಿಟ್ಟಿನಲ್ಲಿ ಹೆಜ್ಜೆಹಾಕಿದೆ.

ಈಗಾಗಲೇ ಕೊವಿಶೀಲ್ಡ್‌, ಕೊವ್ಯಾಕ್ಸಿನ್‌ ಹಾಗೂ ಸ್ಪುಟ್ನಿಕ್‌-5 ಲಸಿಕೆಗಳ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಇನ್ನೂ ಹಲವು ಲಸಿಕೆಗಳಿಗೆ ತ್ವರಿತಗತಿಯಲ್ಲಿ ಒಪ್ಪಿಗೆ ನೀಡಲು ನಿರ್ಧರಿಸಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ. ಅದರಲ್ಲೂ, ಅಮೆರಿಕ, ಐರೋಪ್ಯ ಒಕ್ಕೂಟ, ಯುಕೆ ಹಾಗೂ ಜಪಾನ್‌ನಲ್ಲಿ ಒಪ್ಪಿಗೆ ಸಿಕ್ಕಿರುವ ಲಸಿಕೆಗಳಿಗೆ ಆದ್ಯತೆ ನೀಡಲಾಗುತ್ತಿದೆ. ಅಲ್ಲದೆ, ವಿಶ್ವ ಆರೋಗ್ಯ ಸಂಸ್ಥೆ ಪಟ್ಟಿ ಮಾಡಿರುವ ಲಸಿಕೆಗಳಿಗೂ ಅನುಮತಿ ಸಿಗಲಿದೆ. ದೇಶದ ವಿವಿಧ ಭಾಗಗಳಲ್ಲಿ ಲಸಿಕೆ ಕೊರತೆ ಉಂಟಾಗಿರುವ ನಡುವೆಯೇ ಈ ಬೆಳವಣಿಗೆ ನಡೆದಿದೆ.

ಭಾರತದಲ್ಲೇ ಲಸಿಕೆಯ 2 ಮತ್ತು 3ನೇ ಹಂತದ ಪ್ರಯೋಗ ನಡೆಯಬೇಕು ಎಂಬ ಷರತ್ತನ್ನೂ ಕೇಂದ್ರ ಸರಕಾರ ಸಡಿಲಿಸಿದೆ. ಇದರಿಂದಾಗಿ ವಿದೇಶಿ ಲಸಿಕೆಗಳು ಕ್ಷಿಪ್ರವಾಗಿ ಭಾರತದಲ್ಲಿ ಲಭ್ಯವಾಗಲಿದೆ. ಫೈಜರ್‌, ಮಾಡೆರ್ನಾ, ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಸೇರಿದಂತೆ ಕೆಲವು ಲಸಿಕೆ ತಯಾರಕ ಕಂಪನಿಗಳಿಗೆ ನಾವು ಆಹ್ವಾನ ನೀಡಲಿದ್ದೇವೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್‌ ತಿಳಿಸಿದ್ದಾರೆ.

ಇನ್ನು, ಡಾ| ರೆಡ್ಡೀಸ್‌ ಲ್ಯಾಬೊರೆಟರೀಸ್‌ ಎಪ್ರಿಲ್‌ -ಜೂನ್‌ ವೇಳೆಗೆ ಸ್ಪುಟ್ನಿಕ್‌ 5 ಆಮದು ಮಾಡಿಕೊಳ್ಳಲಿದ್ದು, ಅದರ ದರದ ಬಗ್ಗೆ ಸರಕಾರದ ಜತೆಗೆ ಮಾತುಕತೆ ನಡೆಯುತ್ತಿದೆ ಎನ್ನಲಾಗಿದೆ.

ಯೋಗಿ, ಅಖೀಲೇಶ್‌ಗೆ ಕೊರೊನಾ: ಉ.ಪ್ರ.ಸಿಎಂ ಯೋಗಿ ಆದಿತ್ಯನಾಥ್‌ ಹಾಗೂ ಮಾಜಿ ಸಿಎಂ ಅಖೀಲೇಶ್‌ ಯಾದವ್‌ಗೆ ಬುಧವಾರ ಸೋಂಕು ದೃಢಪಟ್ಟಿದೆ. ಇಬ್ಬರೂ ತಮ್ಮ ತಮ್ಮ ಮನೆಗಳಲ್ಲೇ ಐಸೋಲೇಷನ್‌ ನಲ್ಲಿ ಇರುವುದಾಗಿ ಮಾಹಿತಿ ನೀಡಿದ್ದಾರೆ. ಈ ನಡುವೆ, ಉತ್ತರಪ್ರದೇಶದಲ್ಲಿ 4 ಮತ್ತು 5ನೇ ವರ್ಷದ ಎಂಬಿಬಿಎಸ್‌ ವಿದ್ಯಾರ್ಥಿಗಳನ್ನು ಕೊರೊನಾ ಕರ್ತವ್ಯಕ್ಕೆ ನಿಯೋಜಿಸಲು ಸರಕಾರ ನಿರ್ಧರಿಸಿದೆ. ಎಂಬಿಬಿಎಸ್‌ ಪರೀಕ್ಷೆ ರದ್ದು ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಸರಕಾರ ಈ ತೀರ್ಮಾನ ಕೈಗೊಂಡಿದೆ.

ಕುಂಭ ಮೇಳ- 1086 ಮಂದಿಗೆ ಸೋಂಕು: ಹರಿದ್ವಾರದಲ್ಲಿನ ಕುಂಭ ಮೇಳದಲ್ಲಿ ಕೇವಲ 3 ದಿನಗಳ ಅವಧಿಯಲ್ಲಿ 1086 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಮವಾರ ನಡೆದಿದ್ದ 2ನೇ ಶಾಹಿ ಸ್ನಾನದ ವೇಳೆ ಲಕ್ಷಾಂತರ ಭಕ್ತರು ಪಾಲ್ಗೊಂಡು ಪುಣ್ಯ ಸ್ನಾನ ಮಾಡಿದ್ದರು. ಎ.10ರಿಂದ 13ರ ಸಂಜೆ 4ರ ವರೆಗೆ 1086 ಮಂದಿಗೆ ಪಾಸಿಟಿವ್‌ ಬಂದಿದೆೆ. ಈ ಹಿನ್ನೆಲೆಯಲ್ಲಿ ಕುಂಭ ಮೇಳಕ್ಕೆ ಅವಧಿಗೆ ಮುನ್ನವೇ ತೆರೆ ಎಳೆಯುವ ಸಾಧ್ಯತೆಯಿದೆ.

ರಾಜಸ್ಥಾನದಲ್ಲಿ ಕೊರೊನಾ ಕರ್ಫ್ಯೂ: ಶುಕ್ರವಾರದಿಂದ ಮಾಸಾಂತ್ಯದವರೆಗೆ ದಿನಕ್ಕೆ 12 ಗಂಟೆಗಳ ಕೊರೊನಾ ಕರ್ಫ್ಯೂ ಜಾರಿ ಮಾಡಿ ರಾಜಸ್ಥಾನ ಸರಕಾರ ಬುಧವಾರ ಆದೇಶ ಹೊರಡಿಸಿದೆ. ರಾಜ್ಯದ ಎಲ್ಲ ನಗರಗಳಲ್ಲೂ ಸಂಜೆ 6ರಿಂದ ಬೆ.6ರವರೆಗೆ ನಿರ್ಬಂಧ ಜಾರಿಯಲ್ಲಿರಲಿದೆ.

ಈ ನಡುವೆ ಇದೇ ತಿಂಗಳ ಅಂತ್ಯಕ್ಕೆ ಯುಕೆ ಪ್ರಧಾನಿ ಬೋರಿಸ್‌ ಜಾನ್ಸನ್‌ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಕೊರೊನಾ ಹಿನ್ನೆಲೆಯಲ್ಲಿ ಪ್ರವಾಸದ ಅವಧಿಯನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅವಳಿ ರೂಪಾಂತರಿ: ಮಹಾರಾಷ್ಟ್ರದಲ್ಲಿ ಜನವರಿಯಿಂದ ಮಾರ್ಚ್‌ವರೆಗೆ ಪರೀಕ್ಷೆಗೆ ಒಳಪಡಿಸಿದ 361 ಸ್ಯಾಂಪಲ್‌ ಗಳ ಪೈಕಿ ಶೇ.61ರಲ್ಲಿ ಸೋಂಕಿನ ಅವಳಿ ರೂಪಾಂತರ(ಡಬಲ್‌ ಮ್ಯುಟೇಷನ್‌) ಪತ್ತೆಯಾಗಿದೆ ಎಂದು ತಜ್ಞರು ಹೇಳಿದ್ದಾರೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.