ಕಾಡುಪ್ರಾಣಿ ಉಪಟಳ ನಿಯಂತ್ರಿಸಲು ಅರಣ್ಯ ಇಲಾಖೆ ಸಂಪೂರ್ಣ ವಿಫಲ


Team Udayavani, Feb 16, 2021, 4:20 AM IST

ಕಾಡುಪ್ರಾಣಿ ಉಪಟಳ ನಿಯಂತ್ರಿಸಲು ಅರಣ್ಯ ಇಲಾಖೆ ಸಂಪೂರ್ಣ ವಿಫಲ

ಕಡಬ : ಕಾಡುಪ್ರಾಣಿಗಳು ಅರಣ್ಯದಿಂದ ಜನವಸತಿ ಪ್ರದೇಶಕ್ಕೆ ಬಂದು ಸಮಸ್ಯೆಗಳು ಎದುರಾಗಿರುವುದು ಇಂದು ನಿನ್ನೆಯ ವಿಚಾರವಲ್ಲ. ಕಡಬ, ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿಯ ಕೆಲವು ಪ್ರದೇಶದಲ್ಲಿ ಈ ಸಮಸ್ಯೆ ಮಿತಿ ಮೀರಿದೆ. ಮುಖ್ಯವಾಗಿ ಆನೆಗಳ ಉಪಟಳದಿಂದಾಗಿ ಅರಣ್ಯಕ್ಕೆ ಹೊಂದಿಕೊಂಡಿರುವ ಪ್ರದೇಶಗಳ ಜನರು ಆತಂಕದಿಂದಲೇ ಬದುಕುವಂತಾಗಿದೆ. ಆದರೆ ಆನೆಗಳನ್ನು ಹಿಮ್ಮೆಟ್ಟಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವಲ್ಲಿ ಅರಣ್ಯ ಇಲಾಖೆ ವಿಫಲವಾಗಿರುವುದು ಮಾತ್ರ ವಿಷಾದದ ಸಂಗತಿಯಾಗಿದೆ.

ಆನೆಗಳನ್ನು ತಡೆಯುವ ತಂತ್ರಗಳು ವಿಫಲ
ಆನೆಗಳು ಮತ್ತು ಮಾನವರ ನಡುವಿನ ಸಂಘರ್ಷವನ್ನು ತಪ್ಪಿಸಲು ದೇಶದ ವಿವಿಧ ಭಾಗಗಳಲ್ಲಿ ಹಲವಾರು ತಂತ್ರಗಳನ್ನು ಅರಣ್ಯ ಇಲಾಖೆ ಕಾರ್ಯರೂಪಕ್ಕೆ ತಂದಿದ್ದರೂ ಅವೆಲ್ಲವೂ ನಿರೀಕ್ಷಿತ ಫಲ ನೀಡದೆ ವಿಫಲವಾಗಿದೆ ಎಂದೇ ಹೇಳಬಹುದು. ಆನೆ ನಿರೋಧಕ ಕಂದಕ, ಕಾಂಕ್ರೀಟ್‌ ಅಡೆತಡೆಗಳು, ಕಲ್ಲುಮಣ್ಣು ಗೋಡೆಗಳು, ಬಳಸಿದ ರೈಲು ಹಳಿಗಳನ್ನು ಉಪಯೋಗಿಸಿ ನಿರ್ಮಿಸುವ ರೈಲು ಬೇಲಿ, ಮೆಣಸಿನಕಾಯಿ ಬೇಲಿಗಳು, ಸೌರಶಕ್ತಿ ಚಾಲಿತ ಉನ್ನತ ವಿದ್ಯುತ್‌ ಬೇಲಿಗಳು, ಜೇನುಗೂಡಿನ ಬೇಲಿ, ಮುಳ್ಳಿನ ಸಸ್ಯಗಳನ್ನು ಉಪಯೋಗಿಸಿ ಜೈವಿಕ ಬೇಲಿ ಇತ್ಯಾದಿಗಳನ್ನು ಈಗಾಗಲೇ ಆನೆಗಳು ನಾಡಿಗೆ ಬಾರದಂತೆ ತಡೆಯಲು ಬಳಸಲಾಗಿದೆ. ಆದರೆ ಈ ತಂತ್ರಗಳಿಂದ ಹೆಚ್ಚಿನ ಪ್ರಯೋಜನವಾಗದೇ ಇರುವುದರಿಂದ ಆನೆಗಳನ್ನು ಹಿಮ್ಮೆಟ್ಟಿಸಲು ಸರಕಾರವು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಗಂಭೀರ ಚಿಂತನೆ ನಡೆಸಬೇಕಿದೆ ಎನ್ನುವುದು ಆನೆ ಹಾವಳಿಯಿಂದ ತೊಂದರೆ ಅನುಭವಿಸುತ್ತಿರುವ ಜನರ ಆಗ್ರಹವಾಗಿದೆ.

ಆನೆ ಕಂದಕಗಳೂ ವಿಫಲ
ಅರಣ್ಯ ಇಲಾಖೆಯು ಆನೆಗಳು ಅರಣ್ಯದಿಂದ ಜನವಸತಿ ಪ್ರದೇಶಗಳಿಗೆ ಬಾರದಂತೆ ಕಾಡಂಚಿನಲ್ಲಿ ಆನೆ ಕಂದಕ (ಎಲಿಫೆಂಟ್‌ ಪ್ರೂಫ್‌ ಟ್ರೆಂಚಸ್‌)ಗಳನ್ನು ನಿರ್ಮಿಸುತ್ತಿದೆ. ಈ ಆನೆ ಕಂದಕಗಳೂ ಆನೆಗಳನ್ನು ತಡೆಯುಲ್ಲಿ ವಿಫಲವಾಗಿದೆ. ಕಂದಕಗಳಲ್ಲಿ ಒಂದೇ ವರ್ಷದಲ್ಲಿ ಹೂಳು ತುಂಬುವುದು ಅಥವಾ ಮೇಲಕ್ಕೆ ಅಗೆದು ಹಾಕಿದ ಮಣ್ಣು ಮತ್ತೆ ಕಂದಕಕ್ಕೆ ಬೀಳುವುದರಿಂದ ಆನೆಗಳು ಸುಲಭವಾಗಿ ಕಂದಕಗಳನ್ನು ದಾಟುತ್ತಿವೆ. ಮಾತ್ರವಲ್ಲದೆ ಕಾಡು ಹಂದಿಗಳು ಕಂದಕ ದಾಟಿ ಹೊಲ ಮತ್ತು ಹಳ್ಳಿಗಳನ್ನು ಪ್ರವೇಶಿಸಲು ಬಳಸುವ ದಾರಿಗಳನ್ನು ಕಂಡುಹಿಡಿದು ಆನೆಗಳೂ ಅದೇ ದಾರಿಗಳಲ್ಲಿ ನಾಡು ಪ್ರವೇಶಿಸುತ್ತಿವೆ. ಕೆಲವು ಕಡೆ ನಿಗದಿತ ಅಳತೆಯಲ್ಲಿ ಆನೆ ಕಂದಕ ನಿರ್ಮಿಸದಿರುವುದೂ ಸಮಸ್ಯೆಗೆ ಕಾರಣವಾಗಿದೆ.

ಕೆಲವು ಕಡೆ ಗ್ರಾಮಸ್ಥರು ತಮ್ಮ ಜಾನುವಾರುಗಳನ್ನು ಅರಣ್ಯ ಪ್ರದೇಶಗಳಲ್ಲಿ ಮೇಯಿಸಲು ಮತ್ತು ಅರಣ್ಯ ಪ್ರವೇಶಿಸಲು ಆನೆ ಕಂದಕಗಳಿಗೆ ಮಣ್ಣು ತುಂಬಿ ದಾರಿ ಮಾಡುತ್ತಿರುವುದು ಕಂಡುಬರುತ್ತಿದೆ.

ಆಧುನಿಕ ತಂತ್ರಜ್ಞಾನದ ಉಪಯೋಗ
ಕಾಡು ಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ಬಾರದಂತೆ ತಡೆಯುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಆಧುನಿಕ ತಂತ್ರಜ್ಞಾನವನ್ನು ಉಪಯೋಗಿಸುವುದರೊಂದಿಗೆ ಸರಕಾರದ ನೆರವಿನಿಂದ ಹಳೆಯ ತಂತ್ರಗಳನ್ನೇ ಮತ್ತಷ್ಟು ಅಭಿವೃದ್ಧಿಪಡಿಸಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಕ್ರಮ ಕೈಗೊಳ್ಳಲಾಗುವುದು.
-ಡಾ|ವಿ.ಕರಿಕಳನ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ, ಮಂಗಳೂರು.

– ನಾಗರಾಜ್‌ ಎನ್‌.ಕೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.