ಚಿತ್ರದುರ್ಗ ಮುರುಘಾ ಮಠಕ್ಕೆ ನೂತನ ಕಾರ್ಯಕಾರಿ ಸಮಿತಿ ರಚನೆ

-ನೂತನ ಸಮಿತಿ ಪಟ್ಟಿ ನ್ಯಾಯಾಲಯಕ್ಕೆ ಸಲ್ಲಿಸಲು ತೀರ್ಮಾನ

Team Udayavani, May 29, 2023, 7:23 AM IST

MURUGHA MUTT

ಚಿತ್ರದುರ್ಗ: ಇಲ್ಲಿನ ಐತಿಹಾಸಿಕ ಮುರುಘಾ ಮಠಕ್ಕೆ ಸರ್ಕಾರ ನೇಮಿಸಿದ್ದ ಆಡಳಿತಾ ಧಿಕಾರಿಯನ್ನು ಹೈಕೋರ್ಟ್‌ ವಜಾ ಮಾಡಿದ ಹಿನ್ನೆಲೆಯಲ್ಲಿ ಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ನೂತನ ಕಾರ್ಯಕಾರಿ ರಚಿಸಲು ಭಾನುವಾರ ಭಕ್ತರ ಸಭೆ ನಡೆಯಿತು.

ಆಡಳಿತಾಧಿಕಾರಿ ನೇಮಕ ಆದೇಶ ರದ್ದು ಮಾಡಿರುವ ಹೈಕೋರ್ಟ್‌, ಶಿವಮೂರ್ತಿ ಮುರುಘಾ ಶರಣರಿಂದ ಜಿಪಿಎ ಪಡೆದಿರುವ ಶ್ರೀ ಬಸವಪ್ರಭು ಸ್ವಾಮೀಜಿ ನೇತೃತ್ವದಲ್ಲಿ ಕಾರ್ಯಕಾರಿ ಸಮಿತಿ ರಚಿಸಿ ಮಠದ ಆಡಳಿತ ಮುಂದುವರಿಸಲು ಸೂಚಿಸಿದೆ. ಈ ನಿಟ್ಟಿನಲ್ಲಿ ಸಮಿತಿ ರಚನೆಯಾಗಿದ್ದು, ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವುದಾಗಿ ಬಸವಪ್ರಭು ಶ್ರೀಗಳು ತಿಳಿಸಿದರು.

ಸಭೆಯ ಆರಂಭದಲ್ಲಿ ಮಠದ ಸಲಹಾ ಸಮಿತಿ ಸದಸ್ಯ ಜಿತೇಂದ್ರ ಮಾತನಾಡಿ, ಬಸವಪ್ರಭು ಶ್ರೀಗಳ ನೇತೃತ್ವದಲ್ಲಿ ವಿದ್ಯಾಪೀಠ ಹಾಗೂ ಮಠದ ಪೂಜೆ ಮತ್ತು ಆಡಳಿತ ನಡೆಸಿಕೊಂಡು ಹೋಗಲು ಎಲ್ಲರ ಸಮ್ಮತಿ ಇದೆಯೇ ಎಂದು ಸಭೆಯನ್ನು ಕೇಳಿದರು. ಈ ವೇಳೆ ಒಬ್ಬರ ಅಪಸ್ವರ ಹೊರತುಪಡಿಸಿ, ಸರ್ವಾನುಮತದ ಒಪ್ಪಿಗೆ ದೊರೆಯಿತು.
ಈ ವೇಳೆ ಶ್ರೀ ಬಸವಪ್ರಭು ಸ್ವಾಮೀಜಿ ಮಾತನಾಡಿ, ಮಠದ ಆಡಳಿತದಲ್ಲಿ ಸರ್ಕಾರ ಹಸ್ತಕ್ಷೇಪ ಮಾಡಬಾರದು ಎಂದು ಹೈಕೋರ್ಟ್‌ ನೀಡಿರುವ ತೀರ್ಪು ದೇಶದ ಎಲ್ಲ ಮಠ, ಮಂದಿರಗಳಿಗೂ ರಕ್ಷಣೆಯಾಗಿದೆ. ನಾವು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ಮಾನ್ಯ ಮಾಡಿದೆ. ಶಿವಮೂರ್ತಿ ಮುರುಘಾ ಶರಣರು ನೀಡಿರುವ ಜಿಪಿಎ ಅನುಸಾರ ಎಲ್ಲ ಜವಾಬ್ದಾರಿಗಳನ್ನು ಕಾರ್ಯಕಾರಿ ಸಮಿತಿ ಹಾಗೂ ಭಕ್ತರ ಸಲಹೆ, ಸಹಕಾರ ಪಡೆದು ಉತ್ತಮವಾಗಿ ನಿಭಾಯಿಸಿಕೊಂಡು ಹೋಗಲಾಗುವುದು. ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ನೂತನ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ ಎಂದರು.

ಸಭೆಯಲ್ಲಿ ಹರಿಹರದ ಮಾಜಿ ಶಾಸಕ ಎಚ್‌.ಎಸ್‌. ಶಿವಶಂಕರ್‌, ನಗರಸಭೆ ಮಾಜಿ ಅಧ್ಯಕ್ಷ ಬಿ. ಕಾಂತರಾಜ್‌, ಮುಖಂಡರಾದ ಎಸ್‌.ಎಂ.ಎಲ್‌ ತಿಪ್ಪೇಸ್ವಾಮಿ, ಶ್ರೀರಾಮ್‌, ಆನಂದಪ್ಪ, ಮಲ್ಲಿಕಾರ್ಜುನ್‌, ಕೆ.ಎನ್‌. ವಿಶ್ವನಾಥಯ್ಯ, ಉಮೇಶ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.