ಕರಾವಳಿ ಅಭಿವೃದ್ಧಿಗೆ ವಿಷನ್ ಗ್ರೂಪ್ ರಚನೆ
ಪ್ರವಾಸೋದ್ಯಮ, ಆರ್ಥಿಕ, ವಾಣಿಜ್ಯ ಚಟುವಟಿಕೆಗೆ ಪ್ರೋತ್ಸಾಹ
Team Udayavani, Mar 30, 2021, 7:30 AM IST
ಬೆಂಗಳೂರು: ರಾಜ್ಯದ ಕಡಲ ತೀರವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಜತೆಗೆ ಆರ್ಥಿಕ, ವಾಣಿಜ್ಯ ಚಟುವಟಿಕೆಗಳಿಗೂ ಪ್ರೋತ್ಸಾಹ ನೀಡುವ ಸಲುವಾಗಿ ಪ್ರತ್ಯೇಕ “ವಿಷನ್ ಗ್ರೂಪ್’ ರಚನೆ ಪ್ರಕ್ರಿಯೆ ಆರಂಭವಾಗಿದೆ.
ಈ ಸಂಬಂಧ ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಫಿಕ್ಕಿ) ಮಾಡಿರುವ ಮನವಿಗೆ ಸಚಿವ ಜಗದೀಶ ಶೆಟ್ಟರ್ ಸ್ಪಂದಿಸಿದ್ದು, ಅವರ ಸೂಚನೆಯಂತೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಸ್ತಾವ ಸಿದ್ಧಪಡಿಸುತ್ತಿದೆ. ಸರಕಾರದ ಒಪ್ಪಿಗೆ ದೊರೆತರೆ ಕರಾವಳಿ ಅಭಿವೃದ್ಧಿ ವಿಷನ್ ಗ್ರೂಪ್ ರಚನೆಯಾಗಲಿದ್ದು, ಕರಾವಳಿಯಲ್ಲಿ ಅಭಿವೃದ್ಧಿಯ ಗಾಳಿ ಬಲವಾಗಿ ಬೀಸುವ ಆಶಯ ಮೂಡಿದೆ.
ರಾಜ್ಯ ಸುಮಾರು 320 ಕಿ.ಮೀ. ಉದ್ದದ ಕಡಲ ಕಿನಾರೆ ಹೊಂದಿದೆ. ಈ ಪ್ರದೇಶವನ್ನು ಇನ್ನಷ್ಟು ಯೋಜಿತ ರೀತಿಯಲ್ಲಿ ಅಭಿವೃದ್ಧಿಪಡಿಸಲು, ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಪೂರಕವಾದ ಯೋಜನೆಗಳನ್ನು ರೂಪಿಸುವ ನಿಟ್ಟಿನಲ್ಲಿ ಪ್ರತ್ಯೇಕ “ವಿಷನ್ ಗ್ರೂಪ್’ ರಚನೆಗೆ ಸಿದ್ಧತೆ ನಡೆದಿದೆ.
ಫಿಕ್ಕಿಯು ಇತ್ತೀಚೆಗೆ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯ ಕ್ರಮದಲ್ಲಿ ಕರಾವಳಿ ಪ್ರದೇಶ ಅಭಿವೃದ್ಧಿ ಬಗ್ಗೆ ಚರ್ಚೆ ಯಾಗಿತ್ತು. ಆ ಬಳಿಕ “ಫಿಕ್ಕಿ’ ಕರ್ನಾಟಕ ಘಟಕವು ವಿಷನ್ ಗ್ರೂಪ್ ರಚಿಸುವಂತೆ ಕೋರಿ ಸಚಿವರಿಗೆ ಪತ್ರ ಬರೆದಿತ್ತು. ಈ ಗ್ರೂಪ್ಗೆ “ಫಿಕ್ಕಿ’ ರಾಜ್ಯ ಘಟಕದ ಅಧ್ಯಕ್ಷ ಉಲ್ಲಾಸ್ ಕಾಮತ್ ಒಳಗೊಂಡಂತೆ 16 ಮಂದಿಯ ಹೆಸರನ್ನು ಶಿಫಾರಸು ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ, ಕೈಗಾರಿಕೆ, ಮೀನುಗಾರಿಕೆ ಕಾಲೇಜು, ಸಣ್ಣ ಕೈಗಾರಿಕೆ, ಕರಾವಳಿ ಖಾದ್ಯ, ಮತ್ಸೋದ್ಯಮ, ಪ್ರವಾಸೋದ್ಯಮ- ಆತಿಥ್ಯ, ರಿಯಲ್ ಎಸ್ಟೇಟ್, ಎಫ್ಎಂಸಿಜಿ ಸಹಿತ ವಿವಿಧ ವಲಯಗಳ ಪ್ರಮುಖರು ಪಟ್ಟಿಯಲ್ಲಿದ್ದಾರೆ.
ವಿಷನ್ ಗ್ರೂಪ್ ಉದ್ದೇಶ ಏನು?
– ಪ್ರಧಾನವಾಗಿ ಮೀನುಗಾರಿಕೆ ಮತ್ತು ಪ್ರವಾಸೋದ್ಯಮ ಅಭಿ ವೃದ್ಧಿಗೆ ಆದ್ಯತೆ ನೀಡುವುದು.
– ಧಾರ್ಮಿಕ, ಅಕ್ವಾ ಟೂರಿಸಂ, ಕ್ರೂಸ್ ವ್ಯವಸ್ಥೆಗೆ ಉತ್ತೇಜನ ನೀಡುವುದು.
– ಬ್ಯಾಂಕಿಂಗ್, ಶಿಕ್ಷಣ ಕ್ಷೇತ್ರ ಗಳನ್ನು ಉತ್ತೇಜಿಸಲು ಪೂರಕ ಯೋಜನೆಗಳನ್ನು ರೂಪಿಸುವುದು.
ರಾಜ್ಯದ ಕರಾವಳಿ ಅಭಿವೃದ್ಧಿಗೆ ಸೀಮಿತವಾಗಿ ವಿಷನ್ ಗ್ರೂಪ್ ರಚಿಸಲು ನಿರ್ಧರಿಸಲಾಗಿದೆ. ಮಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಈ ಬಗ್ಗೆ ಪ್ರಸ್ತಾವವಾಗಿತ್ತು. ಕರಾವಳಿ ಪ್ರದೇಶದ ಅಭಿವೃದ್ಧಿಗೆ ಯಾವ ರೀತಿಯ ಯೋಜನೆ, ಕಾರ್ಯಕ್ರಮಗಳನ್ನು ರೂಪಿಸಬೇಕು ಎಂಬ ಬಗ್ಗೆ ಅಧ್ಯಯನ ನಡೆಸಲು ವಿಷನ್ ಗ್ರೂಪ್ ರಚನೆ ಪ್ರಕ್ರಿಯೆ ನಡೆದಿದೆ.
– ಜಗದೀಶ ಶೆಟ್ಟರ್, ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ