ದುಷ್ಕರ್ಮಿಗಳಿಂದ ಮಾಜಿ ಸಿಎಂ ಧರಂಸಿಂಗ್‌ ಅವರ ದೂರದ ಸಂಬಂಧಿಯ ಅಪಹರಿಸಿ ಕೊಲೆ


Team Udayavani, Jan 31, 2021, 9:18 PM IST

ಮಾಜಿ ಸಿಎಂ ಧರಂಸಿಂಗ್‌ ಅವರ ಸಂಬಂಧಿಯನ್ನು ಅಪಹರಿಸಿ ಕೊಲೆಗೈದ ದುಷ್ಕರ್ಮಿಗಳು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ.ಧರಂಸಿಂಗ್‌ ಅವರ ದೂರದ ಸಂಬಂಧಿಯನ್ನು ದುಷ್ಕರ್ಮಿಗಳು ಅಪಹರಿಸಿ ಆಂಧ್ರಪ್ರದೇಶದ ನಲ್ಲೂರಿನಲ್ಲಿ ಕೊಲೆಗೈದಿರುವ ವಿಚಾರ ಬೆಳಕಿಗೆ ಬಂದಿದೆ.

ಸಿದ್ದಾರ್ಥ್ ದೇವೇಂದರ್‌ ಸಿಂಗ್‌ (28) ಕೊಲೆಯಾದವರು. ಈ ಸಂಬಂಧ ಅನುಮಾನದ ಮೇರೆಗೆ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸಿದ್ಧಾರ್ಥ್ ದೇವೇಂದರ್‌ ಸಿಂಗ್‌ ಮಾಜಿ ಸಿಎಂ ಧರಂಸಿಂಗ್‌ ಅವರ ದೂರದ ಸಂಬಂಧಿ ಎಂದು ಪೊಲೀಸರು ಹೇಳಿದರು.

ವಿಚಾರಣೆ ಸಂದರ್ಭದಲ್ಲಿ ಆರೋಪಿ ಕೊಟ್ಟ ಸುಳಿವಿನ ಮೇರೆಗೆ ಅಮೃತಹಳ್ಳಿಯ ಪೊಲೀಸರ ಒಂದು ತಂಡ ಆಂಧ್ರಪ್ರದೇಶದ ತಿರುಪತಿ ಸಮೀಪದಲ್ಲಿರುವ ನಲ್ಲೂರು ಅರಣ್ಯ ಪ್ರದೇಶಕ್ಕೆ ತೆರಳಿದೆ.

ಇದನ್ನೂ ಓದಿ:ಫೆಬ್ರವರಿ 1ರಿಂದ ಸಂಪೂರ್ಣವಾಗಿ ತೆರೆಯಲಿವೆ ಚಿತ್ರಮಂದಿರಗಳು

ಸಿ.ಆರ್‌.ದೇವೇಂದರ್‌ ಅವರ ಪುತ್ರ ಸಿದ್ದಾರ್ಥ್ ಸ್ವಂತ ಉದ್ಯಮ ನಡೆಸುತ್ತಿದ್ದು, ಅಮೃತಹಳ್ಳಿಯ ದಾಸರಹಳ್ಳಿಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಒಬ್ಬರೆ ವಾಸವಾಗಿದ್ದರು. ಜ.19ರಂದು ಬೆಳಗ್ಗೆ ಐದು ಗಂಟೆ ಸುಮಾರಿಗೆ ತನ್ನ ತಂದೆಗೆ ವಾಟ್ಸ್‌ ಆ್ಯಪ್‌ ಮೂಲಕ “ಸ್ನೇಹಿತರನ್ನು ಭೇಟಿಯಾಗಲು ಅಮೆರಿಕಾಕ್ಕೆ ಹೋಗುತ್ತಿರುವುದಾಗಿ’ ತಿಳಿಸಿದ್ದರು.

ಆದರೆ, ಅಮೆರಿಕಾಕ್ಕೂ ಹೋಗದೆ, ವಾಪಸ್‌ ಮನೆಗೂ ಬಂದಿಲ್ಲ. ಅದರಿಂದ ಅನುಮಾನಗೊಂಡು ಆತನಿಗೆ ಕರೆ ಮಾಡಿದಾಗ ಫೋನ್‌ ಸ್ವಿಚ್ಡ್ ಆಫ್ ಆಗಿತ್ತು. ಹೀಗಾಗಿ ಆತ ನಾಪತ್ತೆಯಾಗಿರುವುದಾಗಿ ದೇವೇಂದರ್‌ ಅಮೃತ್‌ಹಳ್ಳಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರು ಅಪಾರ್ಟ್‌ಮೆಂಟ್‌ನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಕೆಲವೊಂದು ಅನುಮಾನಗಳು ಹುಟ್ಟಿಕೊಂಡಿದ್ದವು. ಜತೆಗೆ ಆತನ ಮೊಬೈಲ್‌ಗೆ ಬಂದಿದ್ದ ಕರೆಗಳ ಸಿಡಿಆರ್‌ ಶೋಧಿಸಿದಾಗ ಆತ ಅಪಹರಣವಾಗಿದ್ದಾನೆ ಎಂಬುದು ಗೊತ್ತಾಗಿದೆ. ಕೂಡಲೇ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಅನುಮಾನದ ಮೇರೆಗೆ ಒಬ್ಬನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಹತ್ಯೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ಆದರೆ, ಯಾವ ಕಾರಣಕ್ಕೆ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದರು.

ಕಾರಿನಲ್ಲಿ ಕೊಲೆ
ಮನೆ ಬಳಿಯೇ ಸಿದ್ಧಾರ್ಥ್ನನ್ನು ಅಪಹರಿಸಿದ ಆರೋಪಿಗಳು ಕಾರಿನಲ್ಲಿಯೇ ಹತ್ಯೆಗೈದು ಆಂಧ್ರಪ್ರದೇಶದ ತಿರುಪತಿ ಸಮೀಪದ ನಲ್ಲೂರಿನ ಅರಣ್ಯ ಪ್ರದೇಶದ ಬಳಿ ಶವವನ್ನು ಹೂತು ಹಾಕಿದ್ದಾರೆ. ಸದ್ಯ ಮೃತದೇಹ ಪತ್ತೆಯಾಗಿದ್ದು, ತಹಶೀಲ್ದಾರ್‌ ಸಮ್ಮುಖದಲ್ಲಿ ಮುಂದಿನ ಕಾನೂನು ಪ್ರಕ್ರಿಯೆ ನಡೆಸಬೇಕಿದೆ ಎಂದು ಪೊಲೀಸರು ಹೇಳಿದರು.

ಹಂತಕರಿಂದಲೇ ವಾಟ್ಸ್‌ ಆ್ಯಪ್‌?
ಸಿದ್ಧಾರ್ಥ್ನನ್ನು ಕೊಲೆಗೈದ ದುಷ್ಕರ್ಮಿಗಳೇ ಆತನ ಮೊಬೈಲ್‌ನಿಂದಲೇ ತಂದೆ ದೇವೇಂದರ್‌ಗೆ ವಾಟ್ಸ್‌ ಆ್ಯಪ್‌ ಮೂಲಕ ಅಮೆರಿಕಾಕ್ಕೆ ತೆರಳುತ್ತಿರುವುದಾಗಿ ಸಂದೇಶ ಕಳುಹಿಸಿರುವ ಸಾಧ್ಯವಿದೆ. ಪ್ರಮುಖ ಆರೋಪಿಗಳ ಬಂಧನ ಬಳಿಕ ಸತ್ಯಾಂಶ ಬೆಳಕಿಗೆ ಬರಲಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.