ವಿಧ್ವಂಸಕ ಚಟುವಟಿಕೆಗಳಿಗೆ ಹವಾಲಾ ಹಣ: ಜಮ್ಮು ಮಾಜಿ ಸಚಿವನ ಬಂಧನ!
ಜತೀಂದರ್ ಸಿಂಗ್ ಗೆ ಪಾಕಿಸ್ಥಾನ ಮತ್ತು ಸೌದಿ ಅರೇಬಿಯಾದಲ್ಲೂ ಲಿಂಕ್!
Team Udayavani, Apr 9, 2022, 2:36 PM IST
ಜಮ್ಮು: ವಿಧ್ವಂಸಕ ಚಟುವಟಿಕೆಗಳಿಗಾಗಿ ಬಳಸಿಕೊಳ್ಳಲಾಗುತ್ತಿದ್ದ ಹವಾಲಾ ಹಣವನ್ನು ವಶಪಡಿಸಿಕೊಂಡ ಪ್ರಕರಣದ ಪ್ರಮುಖ ಆರೋಪಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಚಿವ ಜತೀಂದರ್ ಸಿಂಗ್ ಅಲಿಯಾಸ್ ‘ಬಾಬು ಸಿಂಗ್’ನನ್ನು ಶನಿವಾರ ಕಥುವಾ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪೊಲೀಸರು ಹವಾಲಾ ದಂಧೆಯನ್ನು ಭೇದಿಸಿದ ನಂತರ ಮತ್ತು ಏಪ್ರಿಲ್ 6 ರಂದು ಲುಕೌಟ್ ನೋಟಿಸ್ ಜಾರಿಗೊಳಿಸಿದ ನಂತರ ಸಿಂಗ್ ಮಾರ್ಚ್ 31 ರಿಂದ ತಲೆಮರೆಸಿಕೊಂಡಿದ್ದ. ಮಾಜಿ ಸಚಿವನನ್ನ ಕಥುವಾ ಜಿಲ್ಲೆಯಿಂದ ಬಂಧಿಸಲಾಗಿದ್ದು, ವಿಚಾರಣೆಗಾಗಿ ಜಮ್ಮುವಿಗೆ ಕರೆತರಲಾಗುತ್ತಿದೆ” ಎಂದು ಜಮ್ಮುವಿನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಚಂದನ್ ಕೊಹ್ಲಿ ಪಿಟಿಐಗೆ ತಿಳಿಸಿದ್ದಾರೆ.
ಸಿಂಗ್ 2002-2005ರಲ್ಲಿ ಪಿಡಿಪಿ-ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ಸಚಿವನಾಗಿದ್ದ ಮತ್ತು ಈಗ ನೇಚರ್-ಮ್ಯಾನ್ಕೈಂಡ್ ಫ್ರೆಂಡ್ಲಿ ಗ್ಲೋಬಲ್ ಪಾರ್ಟಿ ಎಂಬ ಸಂಘಟನೆಯ ಅಧ್ಯಕ್ಷನಾಗಿದ್ದಾನೆ.
ದಕ್ಷಿಣ ಕಾಶ್ಮೀರದ ಕೋಕೆರ್ನಾಗ್ನ ನಿವಾಸಿ ಮಹಮ್ಮದ್ ಶರೀಫ್ ಷಾ ಎಂಬಾತನನ್ನು ಮಾರ್ಚ್ 31 ರಂದು ಜಮ್ಮುವಿನ ಗಾಂಧಿ ನಗರ ಪ್ರದೇಶದಲ್ಲಿ ಹವಾಲಾ ಹಣದೊಂದಿಗೆ ಬಂಧಿಸಲಾಗಿತ್ತು ಆತನ ವಿಚಾರಣೆಯಲ್ಲಿ ಶ್ರೀನಗರದಿಂದ ಹಣವನ್ನು ಸಂಗ್ರಹಿಸಲು ಕಥುವಾ ಜಿಲ್ಲೆಯ ನಿವಾಸಿ ಸಿಂಗ್ ಎಂಬಾತನಿಗೆ ವಹಿಸಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಥುವಾದ ಸಿದ್ದಾಂತ್ ಶರ್ಮಾ ಮತ್ತು ಜಮ್ಮುವಿನ ಎಸ್ ಗುರುದೇವ್ ಸಿಂಗ್ ಮತ್ತು ಮೊಹಮ್ಮದ್ ಶ್ರೀಫ್ ಸರ್ತಾಜ್ ಎಂಬ ಮೂವರನ್ನು ಸಹ ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕ್ ಆಕ್ರಮಿತ ಕಾಶ್ಮೀರದ ಜಾವೇದ್, ಫಾರೂಕ್ ಖಾನ್ ಮತ್ತು ಖತೀಬ್, ಕೆನಡಾದ ಟೊರೊಂಟೊ ಸೇರಿದಂತೆ ತನ್ನ ವಿದೇಶಿ ಸಹಚರರ ಹೆಸರುಗಳನ್ನೂ ಷಾ ಬಹಿರಂಗಪಡಿಸಿದ್ದಾನೆ. ಅವರೆಲ್ಲಾ ಪಾಕಿಸ್ಥಾನ ಮತ್ತು ಸೌದಿ ಅರೇಬಿಯಾದ ಸದಸ್ಯರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಗುಂಪನ್ನು ನಡೆಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ