ರಾಜ್ಯ ಸಭೆಗೆ ದೇವೇಗೌಡರು ಸ್ಪರ್ಧಿಸಲಿ: ಹೊರಟ್ಟಿ ಅಭಿಮತ
Team Udayavani, Jun 4, 2020, 11:25 PM IST
ಬೆಂಗಳೂರು: ರಾಜ್ಯಸಭಾ ಸ್ಥಾನಗಳಿಗೆ ನಡೆಯುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ವರಿಷ್ಠ ಮಾಜೀ ಪ್ರಧಾನಿ ದೇವೇಗೌಡರು ಅಭ್ಯರ್ಥಿಯಾಗಲಿ ಎಂದು ಪಕ್ಷದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಮಗೆ ಒಂದು ಸ್ಥಾನಕ್ಕೆ ಮತಗಳು ಕಡಿಮೆ ಬೀಳುತ್ತವೆ, ದೇವೇಗೌಡರು ಮತ್ತು ಕುಮಾರಸ್ವಾಮಿಗೆ ಯಾವುದೇ ಗೊಂದಲ ಇಲ್ಲ. ಆದರೆ ಆರೋಗ್ಯ ಸರಿ ಇಲ್ಲವಾಗಿರುವ ಕಾರಣ ತನ್ನ ಅಭ್ಯರ್ಥಿತನ ಬೇಡ ಎಂದು ದೇವೆಗೌಡರು ಹೇಳುತ್ತಿರುವುದು ನಿಜ ಎಂದು ಹೊರಟ್ಟಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ದೇವೇಗೌಡರು ಸ್ಪರ್ಧಿಸದಿದ್ದರೆ ನಮ್ಮಲ್ಲಿ ಬೇರೆ ಯಾರಾದರೂ ಸ್ಪರ್ಧಿಸಬೇಕಾಗುತ್ತದೆ. ಮತ್ತು ಆ ಸಂದರ್ಭದಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿಯ ಬೆಂಬಲವನ್ನು ಪಡೆದುಕೊಳ್ಳುವ ಕುರಿತಾಗಿ ನಮ್ಮಲ್ಲಿ ಕೆಲವರು ಚರ್ಚೆ ನಡೆಸಿರುವುದು ನಿಜ ಎಂದು ಹೊರಟ್ಟಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು. ಮತ್ತು ಈ ಎಲ್ಲಾ ವಿಚಾರಗಳ ಕುರಿತಾಗಿ ನಾಳಿನ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಬಸವರಾಜ ಹೊರಟ್ಟಿ ಅವರು ತಿಳಿಸಿದರು.
ಶಾಲೆಗಳನ್ನು ತೆರೆಯುವ ವಿಚಾರ
ಈ ಸಂದರ್ಭದಲ್ಲಿ ಸರ್ಕಾರ ಶಾಲೆಗಳನ್ನು ಪ್ರಾರಂಭಿಸುವುದು ಶುದ್ದ ತಪ್ಪು. ಕೋವಿಡ್ ನಿಯಂತ್ರಣಕ್ಕೆ ಬರುವ ಮೊದಲೇ ರಾಜ್ಯದಲ್ಲಿ ಶಾಲೆಗಳನ್ನು ಪ್ರಾರಂಭಿಸಿದರೆ ಅನಾಹುತ ಆಗುವುದು ನಿಶ್ಚಿತ ಎಂದು ಮಾಜೀ ಶಿಕ್ಷಣ ಸಚಿವರೂ ಆಗಿರುವ ಹೊರಟ್ಟಿ ಅವರು ಅಭಿಪ್ರಾಯಪಟ್ಟರು.
ಸಣ್ಣ ಮಕ್ಕಳಿಗೆ ಮಾಸ್ಕ್, ಸ್ಯಾನಿಟೈಸರ್ ಹಾಕ್ತಾ ಇರಲು ಆಗುವುದಿಲ್ಲ. ದಸರಾ ರಜೆ, ಹಬ್ಬದ ರಜೆ ಕಟ್ ಮಾಡಬಹುದು, ಶನಿವಾರ ಪೂರ್ತಿ ದಿನ ತರಗತಿ ಮಾಡಬಹುದು. ಖಾಸಗಿ ಶಾಲೆಗಳ ಲಾಬಿಗೆ ಸುರೇಶ್ ಕುಮಾರ್ ಮಣಿದಿದ್ದಾರೆ ಅಂತಾ ನಾನು ಹೇಳುವುದಿಲ್ಲ ಬದಲಾಗಿ
ಮಕ್ಕಳ ಭವಿಷ್ಯ ಹಾಳಾಗುತ್ತದೆ ಎಂದು ಅಧಿಕಾರಿಗಳು ಹೇಳಿರಬಹುದು, ಆದರೆ ಮಂತ್ರಿಗಳಾದವರು ಅಧಿಕಾರಿಗಳ ಮಾತನ್ನು ಪೂರ್ತಿ ಕೇಳಬಾರದು ಎಷ್ಟು ಬೇಕೋ ಅಷ್ಟು ಕೇಳಿ ನಮ್ಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಹೊರಟ್ಟಿ ಅವರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
Lok Sabha Polls; ರಾಜ್ಯದ ಕಣ ಅಂತಿಮ: 474 ಅಭ್ಯರ್ಥಿಗಳು
MUST WATCH
ಹೊಸ ಸೇರ್ಪಡೆ
BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ