ಮಾಜಿ ಶಾಸಕ ಸೈಲ್ ಮತ್ತು ಹಾಲಿ ಶಾಸಕಿ ರೂಪಾಲಿ ನಾಯ್ಕ ಮಧ್ಯೆ ಮಾತಿನ ಜಟಾಪಟಿ

ನಿಮ್ಮಪ್ಪ ನನಗೆ ಕುಡಿಯಲು ದುಡ್ಡು ಕೊಟ್ಟಿಲ್ಲ.... : ಠಾಣೆಯಲ್ಲಿ ಪ್ರಕರಣ ದಾಖಲು

Team Udayavani, Mar 3, 2023, 7:20 PM IST

1-adawwe

ಕಾರವಾರ: ಪಿಡಿಒ ವರ್ಗಾವಣೆ ಸಂಬಂಧ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಬಳಿ ಚರ್ಚಿಸಲು ಬಂದ ಮಾಜಿ ಶಾಸಕ ಸತೀಶ್ ಸೈಲ್, ಹಾಲಿ ಶಾಸಕಿ ರೂಪಾಲಿ ನಾಯ್ಕ ಜೊತೆ ಮಾತಿನ ವಾಗ್ವಾದ ನಡೆದ ಘಟನೆ ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ನಡೆದಿದೆ.

ಮಾಜಾಳಿ ಪಂಚಾಯತ್ ಪಿಡಿಒ ಸಾಧನ ಚೆಂಡೇಕರ್ ಅವರನ್ನು ವರ್ಗಾಯಿಸಿ ಅವರ ಸ್ಥಳಕ್ಕೆ ಪಿಡಿಒ ಅರುಣಾ ಎಂಬುವವರನ್ನು ಸಿಇಒ ಈಶ್ವರ ಕಾಂದೂ ಆದೇಶ ಹೊರಡಿಸಿದ್ದರು. ಅರುಣಾ ಅವರು ಕರ್ತವ್ಯಕ್ಕೆ ಹಾಜರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅವರಿಗೆ ಕೊಂಕಣಿ ಬರುವುದಿಲ್ಲ, ಸಾರ್ವಜನಿಕರಿಗೆ ತೊಂದರೆಯಾಗುತ್ತದೆ ಎಂಬ ಕಾರಣದಿಂದ ಈ ವರ್ಗಾವಣೆ ರದ್ದು ಮಾಡಿ, ಸಾಧನಾ ಅವರನ್ನೇ ಮರು ನೇಮಕಕ್ಕೆ ಒತ್ತಾಯಿಸಲು ಮಾಜಿ ಶಾಸಕ ಸೈಲ್ ಬಂದಿದ್ದರು.

ಈ ವೇಳೆ ಶಾಸಕಿ ರೂಪಾಲಿ ನಾಯ್ಕ ಉಸ್ತುವಾರಿ ಸಚಿವರ ಪ್ರಗತಿ ಪರಿಶೀಲಾ ಸಭೆಗಾಗಿ ಆಗಮಿಸಿ, ಸಿಇಒ ಬಳಿ ಚರ್ಚಿಸುತ್ತಿದ್ದರು. ಇದನ್ನು ಗಮನಿಸಿದ ಮಾಜಿ ಶಾಸಕ ಸತೀಶ್ ಸೈಲ್ ಅವರು ನಾನು ಮೊದಲು ಜಿಲ್ಲಾ ಪಂಚಾಯತ್‌ಗೆ ಬಂದಿದ್ದೇನೆ. ನನ್ನ ಅಹವಾಲು ಮೊದಲು ಕೇಳಬೇಕೆಂದು ಮುಖ್ಯಕಾರ್ಯನಿರ್ವಹಣಾಧಿಕಾರಿ ಬಳಿ ಮಾತಿಗೆ ಇಳಿದರು. ಪ್ರೋಟೋಕಾಲ್ ಪ್ರಕಾರ ಹಾಲಿ ಶಾಸಕರಿಗೆ ಮೊದಲ ಆದ್ಯತೆ, ಅವರೊಂದಿಗೆ ಚರ್ಚಿಸಿ ನಿಮ್ಮನ್ನು ಕರೆಯುವೆ ಎಂದರೂ, ಮಾತಿನ ಚಕಮಕಿ ಆರಂಭವಾಯಿತು. ಆಗ ಹಾಲಿ ಶಾಸಕರು ಮತ್ತು ಮಾಜಿ ಶಾಸಕರ ಮಧ್ಯೆ ಮಾತಿನ ಜಟಾಪಟಿ ಆರಂಭವಾಗಿದೆ.

ಶಾಸಕಿ ರೂಪಾಲಿ ನಾಯ್ಕ ಯಾಕ್ರಿ ಏಕವಚನದಲ್ಲಿ ಮಾತಾಡುವಿರಿ? ಕುಡಿದು ಬಂದಿದ್ದೀರಾ ? ಮಹಿಳೆ ಎಂಬ ಗೌರವ ಬೇಡವೇ ಎಂದಾಗ, ನಿಮ್ಮಪ್ಪ ನನಗೆ ಕುಡಿಯಲು ದುಡ್ಡು ಕೊಟ್ಟಿಲ್ಲ, ನೀ ನನ್ನ ಒಳಗೆ ಹಾಕಿಸುವೆಯಾ, ಪೇಪರ್ ವೇಟ್ ನಿಂದ ಹಲ್ಲೆ ಮಾಡಲು ಬರುವೆಯಾ ಎಂದು ರಂಪ ಮಾಡಿದ್ದಾರೆ. ಇದಕ್ಕೆ ಶಾಸಕಿ ರೂಪಾಲಿ ನಾಯ್ಕ ಸಹ ಸಭೆ ನಡೆಯುವಾಗ ಒಳಗೆ ನುಗ್ಗಿ ಗಲಾಟೆ ಮಾಡುವಿರಾ? ಏಕ ವಚನದಲ್ಲಿ ಶಾಸಕಿಯನ್ನು ಕರೆಯುವಿರಾ ಎಂದು ಕೂಗಾಡಿದ್ದಾರೆ. ಪ್ರಕರಣ ವಿಕೋಪಕ್ಕೆ ಹೋಗುವುದನ್ನು ಪೊಲೀಸರು ತಡೆದಿದ್ದಾರೆ. ಶಾಸಕಿಗೆ ನೀನು ನನ್ನ ಒಳಗೆ ಹಾಕಿಸುವೆಯಾ, ನಿಮ್ಮ ಅಪ್ಪ ನನಗೆ ಕುಡಿಯಲು ದುಡ್ಡು ಕೊಡ್ತಾನಾ ಎಂಬ ವಿಡಿಯೋ ತುಣುಕು ಹರಿದಾಡತೊಡಗಿದೆ.

ಪೊಲೀಸ್ ಠಾಣೆಯಲ್ಲಿ ದೂರು
ಪೊಲೀಸ್ ಠಾಣೆಗೆ ತೆರಳಿದ ಮಾಜಿ ಶಾಸಕ ಸೈಲ್ ನನ್ನ ಮೇಲೆ ಪೇಪರ್ ವೇಟ್ ನಿಂದ ಹಲ್ಲೆಗೆ ಯತ್ನಿಸಿದರು ಎಂದು ದೂರು ನೀಡಿದ್ದಾರೆ. ಅಲ್ಲದೆ ಅವಾಚ್ಯ ಶಬ್ದಗಳಿಂದ ಶಾಸಕಿ ನಿಂದಿಸಿದರು ಎಂದು ಹೇಳಿದ್ದಾರೆ. ಅಲ್ಲದೇ ಕಾರವಾರ ನಗರ ಠಾಣೆಯ ಬಾಗಿಲಲ್ಲಿ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಅವರ ಜೊತೆ ಮಾಜಿ ಶಾಸಕರು ಕುಳಿತು ವಿವಾದ ಕಿಡಿ ಎಬ್ಬಿಸಿದ್ದಾರೆ. ಎವಿಡೆನ್ಸ್ ಆಕ್ಟ್ ಎಸ್‌ಸಿ 76 ಅಡಿ ಸಿಸಿ ಕ್ಯಾಮರಾ ದೃಶ್ಯಗಳನ್ನು ನೀಡುವಂತೆ ಜಿಲ್ಲಾ ಪಂಚಾಯತ್‌ಗೆ ಕೋರಿದ್ದಾರೆ.

ಪ್ರತಿ ದೂರು ದಾಖಲು
ಇದಕ್ಕೆ ಪ್ರತಿಯಾಗಿ ಶಾಸಕಿ ರೂಪಾಲಿ ನಾಯ್ಕ ಹಾಗೂ ಬೆಂಬಲಿಗರು ಠಾಣೆಗೆ ಆಗಮಿಸಿ ಪ್ರತಿದೂರು ನೀಡಿದ್ದಾರೆ. ಮಹಿಳಾ ಶಾಸಕಿಗೆ ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆಂದು, ಅವರ ಮೇಲೆ ಜನಪ್ರತಿನಿಧಿ ಮೇಲೆ ಹಲ್ಲೆ ಯತ್ನದ ದೂರು ದಾಖಲಿಸಬೇಕೆಂದು ಡಿವೈಎಸ್ಪಿಗೆ ಲಿಖಿತ ದೂರು ನೀಡಿದ್ದಾರೆ. ಮಾಧ್ಯಮಗಳಿಗೆ ಕಾಂಗ್ರೆಸ್ ನೀಡಿದ ವಿಡಿಯೋ ತುಣಕಿನಲ್ಲಿ ಶಾಸಕ ಸೈಲ್ , ನನ್ನ ಒಳಗೆ ಹಾಕಿಸುವೆಯಾ, ನಿಮ್ಮಪ್ಪ ನನಗೆ ಕುಡಿಯಲು ದುಡ್ಡು ಕೊಡ್ತಾನಾ ಎಂಬ ಮಾತುಗಳು ಮಾತ್ರ ಕೇಳಿಸುತ್ತಿವೆ.

ಟಾಪ್ ನ್ಯೂಸ್

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

ಜಲಪ್ರಳಯದ ಮನಕಲಕುವ ಕಥಾಹಂದರದ “2018” ನಮ್ಮ ಬದುಕಿನ ಚಿತ್ರ!

tdy-13

Damadan Purva: ಈ ಗ್ರಾಮದ ಯುವತಿಯರನ್ನು ಮದುವೆಯಾದರೆ ಸಿಗುತ್ತೆ ಮನೆ, ಜಮೀನು, ಆಸ್ತಿ.!

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ

World Tourism Day: ಭೂಲೋಕದ ಸ್ವರ್ಗ…ಪಾಂಡವರು ಸ್ಥಾಪಿಸಿದ ಬೆಟ್ಟದ ಭೈರವೇಶ್ವರ ದೇವಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Tourist Place: ಪ್ರವಾಸೋದ್ಯಮ ಇಲಾಖೆಯ ಪ್ರೋತ್ಸಾಹವಿಲ್ಲದೆ ಸ್ವರಗುತ್ತಿರುವ ಪ್ರವಾಸಿ ತಾಣಗಳು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು

Mysore ದಸರಾ ಗಜಪಡೆಯ ತೂಕ ಪರೀಕ್ಷೆ… ತೂಕ ಹೆಚ್ಚಿಸಿಕೊಂಡ ಅಭಿಮನ್ಯು, ಭೀಮ

Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್

Karnataka Politics: ಜೆಡಿಎಸ್ ಕೊನೆಯ ಹಂತ ತಲುಪಿದೆ: ದಿನೇಶ್ ಗುಂಡೂರಾವ್

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Vijayapura: ಸ್ಮಾರಕ ವಿಕೃತಿಗೊಳಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಭೂಬಾಲನ್ ಎಚ್ಚರಿಕೆ

Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

Ramanagara: ಚುನಾವಣಾಧಿಕಾರಿಗಳ ಕಾರು ತಡೆದು ದಾಖಲೆಗಳನ್ನು ದೋಚಿದ ದುಷ್ಕರ್ಮಿಗಳು

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

Thirthahalli ಮೀನು ಹಿಡಿಯಲು ಹೋದ ಯುವಕ ತುಂಗಾ ನದಿಗೆ ಬಿದ್ದು ಸಾವು !

1-sdsad

Manipur ; ಇಡೀ ರಾಜ್ಯವನ್ನು ‘ಪ್ರಕ್ಷುಬ್ಧ ಪ್ರದೇಶ’ ಎಂದು ಘೋಷಿಸಿದ ಸರಕಾರ

tdy-17

Sandalwood: ‘ಟಿಆರ್‌ಪಿ ರಾಮ’ನಿಗಾಗಿ ಮತ್ತೇ ಬಂದ್ರು ಮಹಾಲಕ್ಷ್ಮೀ

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

World Tourism Day: ಚಾರಣದ ಹುಚ್ಚು ಆರೋಗ್ಯಕ್ಕೆ ಒಳ್ಳೆಯದೇ…ಆದರೆ ಮೈಮರೆಯಬೇಡಿ!

tdy-16

ಪೊಲೀಸ್‌ ವಿಜಯ: ‘ಮರೀಚಿʼ ಟೀಸರ್‌ ರಿಲೀಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.