ನಾಲ್ವರು ಜೆಎಂಬಿ ಉಗ್ರರಿಗೆ 7 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ
Team Udayavani, Jan 15, 2023, 6:38 AM IST
ಬೆಂಗಳೂರು: ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಸಂಚು, ಉಗ್ರ ಚಟುವಟಿಕೆಗಳಿಗಾಗಿ ನಗರ-ಗ್ರಾಮೀಣ ಭಾಗದಲ್ಲಿ ಡಕಾಯಿತಿ ನಡೆಸುತ್ತಿದ್ದ ನಾಲ್ವರು ಜೆಎಂಬಿ ಉಗ್ರರಿಗೆ ರಾಷ್ಟ್ರೀಯ ತನಿಖಾ ದಳದ (ಎನ್ಐಎ) ವಿಶೇಷ ನ್ಯಾಯಾಲಯ 7 ವರ್ಷಗಳ ಕಠಿನ ಜೈಲು ಶಿಕ್ಷೆ ವಿಧಿಸಿದೆ.
ಪಶ್ಚಿಮ ಬಂಗಾಲದ ಕಡೋರ್ ಖಾಜಿ, ಮುಸ್ತಾಫಿರ್ ರೆಹಮಾನ್, ಆದಿಲ್ ಶೇಕ್, ಅಬ್ದುಲ್ ಕರೀಂ ಶಿಕ್ಷೆಗೊಳಗಾದವರು. 2019ರಲ್ಲಿ ಇವರು ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಬೆಂಗಳೂರು ನಗರ-ಗ್ರಾಮೀಣ ಭಾಗದಲ್ಲಿ ಡಕಾಯಿತಿ ಮಾಡುತ್ತಿದ್ದರು. ಕೆ.ಆರ್. ಪುರಂ, ಕೊತ್ತನೂರು, ಅತ್ತಿಬೆಲೆ ಯಲ್ಲೂ ಪ್ರಕರಣಗಳಿದ್ದವು. ಎನ್ಐಎ ಅಧಿ ಕಾರಿಗಳು ರಾಮನಗರ ಹಾಗೂ ಇತರೆಡೆ ಅಡಗಿದ್ದ 11 ಮಂದಿಯನ್ನು ಬಂಧಿಸಿ ಸುಧಾರಿತ ಸ್ಫೋಟಕ ತಯಾರಿಕೆಗೆ ಎಲೆಕ್ಟ್ರಾನಿಕ್ ವಸ್ತುಗಳು, ಉಪಕರಣ ಸೇರಿದಂತೆ ಕೆಲವು ವಸ್ತುಗಳನ್ನು ಜಪ್ತಿ ಮಾಡಿದ್ದರು.
ವಿಚಾರಣೆ ವೇಳೆ ಉಗ್ರ ಚಟುವಟಿಕೆ, ಸ್ಫೋಟಕಗಳನ್ನು ಸಂಗ್ರಹಿಸಿಟ್ಟ ಹಾಗೂ ವಿಧ್ವಂಸಕ ಕೃತ್ಯಕ್ಕೆ ಕೃಷ್ಣಗಿರಿ ಬೆಟ್ಟದಲ್ಲಿ ರಾಕೆಟ್ ಲಾಂಚರ್ಗಳ ಪ್ರಾಯೋಗಿಕ ಪರೀಕ್ಷೆಯನ್ನೂ ನಡೆಸಿದ್ದರು ಎನ್ನಲಾಗಿತ್ತು. ಡಕಾಯಿತಿ ಮಾಡಿದ ಹಣವನ್ನು ಜೆಎಂಬಿ ಸಂಘಟನೆಯ ಖಾತೆಗೆ ಜಮೆ ಮಾಡುತ್ತಿದ್ದರು. ಎಲ್ಲ 11 ಶಂಕಿತರ ವಿರುದ್ಧ ತನಿಖೆ ನಡೆಸಿ ಎನ್ಐಎ ಆರೋಪಪಟ್ಟಿ ಸಲ್ಲಿಸಿತ್ತು. ಕೋರ್ಟ್ ನಾಲ್ವರಿಗೆ 7 ವರ್ಷ ಕಠಿನ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ. ಈ ಹಿಂದೆ ಮೂವರು ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ