ಕುಸಿದು ಬಿದ್ದ ನಾಲ್ಕು ಅಂತಸ್ತಿನ ಕಟ್ಟಡ : ಮೂವರ ರಕ್ಷಣೆ, ಇನ್ನೂ ಕೆಲವರು ಸಿಲುಕಿರುವ ಶಂಕೆ
Team Udayavani, Sep 13, 2021, 5:26 PM IST
ನವ ದೆಹಲಿ : 4 ಅಂತಸ್ತಿನ ಕಟ್ಟಡವೊಂದು ಕುಸಿದ ಪರಿಣಾಮ ಮಕ್ಕಳು ಸೇರಿದಂತೆ ಹಲವು ಜನರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ಉಂಟಾಗಿರುವ ಈ ದುರಂತದಲ್ಲಿ ಈಗಾಗಲೇ ಮೂವರನ್ನು ರಕ್ಷಣೆ ಮಾಡಲಾಗಿದ್ದು ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳದಲ್ಲಿ ಎನ್ಡಿಆರ್ಎಫ್ ಸಿಬ್ಬಂದಿ ಸೇರಿದಂತೆ ದೆಹಲಿ ಪೊಲೀಸರು, ಅಗ್ನಿಶಾಮಕ ದಳದವರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.
ಘಟನೆ ಸ್ಥಳಕ್ಕೆ 5 ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಇದುವರೆಗೆ ನಡೆದ ರಕ್ಷಣೆ ಕಾರ್ಯಾಚರಣೆಯಲ್ಲಿ ಓರ್ವ ವೃದ್ಧ, ಇಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಘಟನೆ ನಡೆದ ಸಂದರ್ಭ ಕಟ್ಟಡದಲ್ಲಿ 4ರಿಂದ 5 ಜನರು ಇದ್ದರು ಎನ್ನಲಾಗಿದೆ. ಅವರೆಲ್ಲರೂ ಕಟ್ಟಡದ ಅಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ :ಗುಜರಾತ್ ನೂತನ ಸಿಎಂ ಭೂಪೇಂದ್ರ ಪಟೇಲ್ ಗೆ ಶುಭ ಕೋರಿದ ಬಸವರಾಜ ಬೊಮ್ಮಾಯಿ
ಕಟ್ಟಡ ಕುಸಿಯುವ ವೇಳೆ ಕಟ್ಟಡದ ಬಳಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಕ್ಕಳು ಕೂಡ ಅವಶೇಷಗಳಡಿ ಸಿಲುಕಿದ್ದಾರೆ ಎನ್ನಲಾಗಿದೆ . ಅದಲ್ಲದೆ ಕಟ್ಟಡದ ಬಳಿ ನಿಲ್ಲಿಸಿದ ಕಾರುಗಳು ಅವಶೇಗಳ ಅಡಿಯಲ್ಲಿ ಸಿಲುಕಿದೆ.
ಘಟನೆ ಕುರಿತು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬೇಸರ ವ್ಯಕ್ತಪಡಿಸಿದ್ದಾರೆ,
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್
R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್
Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್