ಹೊಸಕೋಟೆ: ಭೀಕರ ಅಪಘಾತದಲ್ಲಿ ನಾಲ್ವರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದುರ್ಮರಣ
ವಿದ್ಯಾರ್ಥಿನಿ ಸೇರಿ ನಾಲ್ವರ ದುರ್ಮರಣ ; ಇಬ್ಬರ ಸ್ಥಿತಿ ಚಿಂತಾಜನಕ
Team Udayavani, Feb 16, 2022, 1:49 PM IST
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬುಧವಾರ ಸಂಭವಿಸಿದ ರಸ್ತೆ ಭೀಕರ ಅಪಘಾತದಲ್ಲಿ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಕಾಲೇಜು ವಿದ್ಯಾರ್ಥಿಗಳು ದಾರುಣವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ತಮಿಳುನಾಡು ಮೂಲದ ವೈಷ್ಣವಿ, ಭರತ್, ಸಿರಿಲ್ ಮತ್ತು ವೆಂಕಟ್ ಎಂದು ಗುರುತಿಸಲಾಗಿದೆ.ಗಾಯಗೊಂಡವರು ಸಿರಿ ಕೃಷ್ಣ ಮತ್ತು ಅಂಕಿತಾ ರೆಡ್ಡಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಗಾರ್ಡನ್ ಸಿಟಿ ಕಾಲೇಜಿನ ವಿದ್ಯಾರ್ಥಿಗಳು ಕೋಲಾರದ ಕೆಫೆ ಕೇಂದ್ರದಿಂದ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಇನ್ನೊಂದು ಬದಿಗೆ ಹಾರಿ ಲಾರಿಗೆ ಸಿಲುಕಿ ನಜ್ಜುಗುಜ್ಜಾಗಿದೆ. ಅತಿಯಾದ ವೇಗದಿಂದ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಅಂದಾಜಿಸಿದ್ದಾರೆ. ನಜ್ಜುಗುಜ್ಜಾದ ಕಾರಿನಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಟ್ಟರು.
ಹೊಸಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ