ಚತುಷ್ಪಥ ಸಂಪರ್ಕ ರಸ್ತೆ, ಆರ್‌ಯುಬಿ: ಬೇಡಿಕೆ ಈಡೇರುವ ಹಂತಕ್ಕೆ


Team Udayavani, Mar 29, 2021, 6:00 AM IST

ಚತುಷ್ಪಥ ಸಂಪರ್ಕ ರಸ್ತೆ, ಆರ್‌ಯುಬಿ: ಬೇಡಿಕೆ ಈಡೇರುವ ಹಂತಕ್ಕೆ

ಮಹಾನಗರ: ಜೆಪ್ಪು ರಾಷ್ಟ್ರೀಯ ಹೆದ್ದಾರಿ-66ರಿಂದ ಮೊರ್ಗನ್ಸ್‌ ಗೇಟ್‌ ಜಂಕ್ಷನ್‌ವರೆಗೆ ಚತುಷ್ಪಥ ಸಂಪರ್ಕ ರಸ್ತೆ, ಮಹಾಕಾಳಿ ಪಡ್ಪುವಿನಲ್ಲಿ ಆರ್‌ಯುಬಿ ನಿರ್ಮಾಣ ಕಾರ್ಯ ನಡೆಯಲಿದ್ದು, ಇದರೊಂದಿಗೆ ಜೆಪ್ಪು ಮಹಾಕಾಳಿ ಪಡ್ಪು ಪ್ರದೇಶದ ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ ಈಡೇರುವ ಹಂತಕ್ಕೆ ಬಂದಿದೆ.

ಸದ್ಯ ಸಂಪರ್ಕ ರಸ್ತೆಯು 4.50 ಮೀ.ನಿಂದ 6 ಮೀ. ಆಗಲಇದ್ದು, ಈ ರಸ್ತೆ ಮೇಲ್ದರ್ಜೆಗೇರಲಿದೆ. ಇದೀಗ ನೂತನ ಯೋಜನೆಯ ಪ್ರಕಾರ 1078 ಮೀ. ಉದ್ದದ ರಸ್ತೆಯನ್ನು 18 ಮೀ. ಅಗಲಕ್ಕೆ ವಿಸ್ತರಿಸಿ 4 ಪಥದ ಕಾಂಕ್ರೀಟ್‌ ರಸ್ತೆ, ಮೀಡಿಯನ್‌, ದಾರಿದೀಪಗಳು, ಎರಡೂ ಭಾಗಗಳಲ್ಲಿ ಆರ್‌ಸಿಸಿ ಮಳೆ ನೀರು ಚರಂಡಿ, ತಗ್ಗು ಪ್ರದೇಶದ ಭಾಗದಲ್ಲಿ ಆರ್‌ಸಿಸಿ ತಡೆಗೋಡೆ, ಗ್ರಾನೈಟ್‌ ಕಲ್ಲು ಪಿಚ್ಚಿಂಗ್‌ ಒಳಗೊಂಡಿದೆ. ಸದ್ಯ ಪ್ರಸ್ತಾವಿಕ ರಸ್ತೆಯು ರಾ.ಹೆ. 66ರಿಂದ ಮಹಾಕಾಳಿ ಪಡ್ಪು ರೈಲ್ವೇ ಕೆಳಸೇತುವೆ ಮುಖಾಂತರ ಶೆಟ್ಟಿಬೆಟ್ಟು ಜಂಕ್ಷನ್‌, ಮೊರ್ಗನ್ಸ್‌ಗೇಟ್‌ ಜಂಕ್ಷನ್‌ವರೆಗೆ ಸದ್ಯ ಇರುವ ಕಿರಿದಾದ ಕಾಲುದಾರಿ ವಿಸ್ತರಿಸಿ ಚತುಷ್ಪತ ರಸ್ತೆಯಾಗಿ ಅಭಿವೃದ್ಧಿಗೊಳ್ಳಲಿದೆ.

ಕೇರಳ-ಮಂಗಳೂರು ಮಧ್ಯೆ ಪ್ರತಿನಿತ್ಯ ಹತ್ತಾರು ರೈಲುಗಳು ಸಂಚರಿಸುತ್ತದೆ. ಈ ರೈಲು ಮಹಾಕಾಳಿಪಡ್ಪು ಮೂಲಕ ಸಾಗುವ ಕಾರಣದಿಂದ ವಾಹನ ಸಂಚಾರ ಸ್ಥಗಿತಗೊಳ್ಳುತ್ತದೆ. ಈ ಕಾರಣಕ್ಕಾಗಿ ರಸ್ತೆ ಬ್ಲಾಕ್‌ ಆಗಿ ತೊಕ್ಕೊಟ್ಟು-ಮಂಗಳೂರು ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ನಿಲ್ಲುವ ಪ್ರಮೇಯ ಇಲ್ಲಿ ನಿತ್ಯದ ಸಂಗತಿ. ಅಲ್ಲದೆ ಇಕ್ಕಟ್ಟಿನ ರಸ್ತೆಯಲ್ಲಿ ವಾಹನ ಸಂಚರಿಸಲೂ ಆಗದೆ ಸಂಕಷ್ಟವೇ ಎದುರಾಗುತ್ತಿದೆ. ಇದೇ ಕಾರಣಕ್ಕೆ ಇದೀಗ ಸ್ಮಾರ್ಟ್‌ಸಿಟಿ ಯೋಜನೆಯ ಸುಮಾರು 49.95 ಕೋಟಿ ರೂ. ವೆಚ್ಚದಲ್ಲಿ ಸಂಪರ್ಕ ರಸ್ತೆ ಮತ್ತು ಆರ್‌ಯುಬಿ ಕಾಮಗಾರಿಗೆ ಚಾಲನೆ ನೀಡಲಾಗಿದ್ದು, ಶೀಘ್ರ ಇಲ್ಲಿನ ಸಮಸ್ಯೆ ಪರಿಹಾರಗೊಳ್ಳಲಿದೆ.

ನಾಲ್ಕು ಆರ್‌ಯುಬಿ: ಹೊಸ ಪರಿಕಲ್ಪನೆ
ಅಧಿಕಾರಿಗಳು ಹೇಳುವಂತೆ ರಸ್ತೆಯಲ್ಲಿ ನಾಲ್ಕು ಆರ್‌ಯುಬಿ ಅಳವಡಿಸಲಾಗುತ್ತಿದ್ದು, ಇದು ರಾಜ್ಯದಲ್ಲಿ ಹೊಸ ಪ್ರಯೋಗ. ಪ್ರಸ್ತುತ ಒಂದು ರೈಲ್ವೇ ಹಳಿ ಭಾಗದಲ್ಲಿ ಆರ್‌ಯುಬಿ ಇದ್ದು, ಇನ್ನೊಂದು ರೈಲು ಹಳಿ ಭಾಗದಲ್ಲಿ ಲೆವೆಲ್‌ ಕ್ರಾಸಿಂಗ್‌ ನಿರ್ಮಾಣ ಮಾಡಲಾಗಿದೆ. ಸದ್ಯ ಇರುವಂತಹ ಲೆವೆಲ್‌ ಕ್ರಾಸಿಂಗ್‌ ಭಾಗದಲ್ಲಿ ರೈಲು ಸಂಚಾರಕ್ಕಾಗಿ ರೈಲ್ವೇ ಗೇಟ್‌ ಹಾಕಿದಾಗ ವಾಹನಗಳು ಸಾಲು ನಿಂತು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ಇದನ್ನು ತಪ್ಪಿಸಿ ಸುಗಮ ಸಂಚಾರ ಕಲ್ಪಿಸಲು 30.7 ಕೋಟಿ ರೂ.ಗಳನ್ನು ಮಂಗಳೂರು ಸ್ಮಾರ್ಟ್‌ಸಿಟಿ ವತಿಯಿಂದ ಠೇವಣಿ ವಂತಿಗೆ ಆಧಾರದಲ್ಲಿ ರೈಲ್ವೇ ಇಲಾಖೆಯು ನಿರ್ಮಾಣ ಕಾರ್ಯವಹಿಸಲಿದೆ.

ಸಮಗ್ರ ಅಭಿವೃದ್ಧಿ
ಜೆಪ್ಪು ಮಹಾಕಾಳಿಪಡು³ ಪ್ರದೇಶದ ಸಾರ್ವಜನಿಕರ ಹಲವು ವರ್ಷಗಳ ಬೇಡಿಕೆ ಈಡೇರುವ ಹಂತಕ್ಕೆ ಬಂದಿದೆ. 49.95 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯಲಿದೆ. ಸ್ಮಾರ್ಟ್‌ಸಿಟಿ, ರೈಲ್ವೇ ಇಲಾಖೆ ಸಹಕಾರದೊಂದಿಗೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇದಕ್ಕೆ ಸಾರ್ವಜನಿಕರ ಸಹಕಾರವೂ ಮುಖ್ಯ. ಮಂಗಳೂರು ನಗರದ ಸಮಗ್ರ ಅಭಿವೃದ್ಧಿಗೆ ಬದ್ಧ.
-ಡಿ. ವೇದವ್ಯಾಸ ಕಾಮತ್‌, ಶಾಸಕರು

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.