ಫ್ಲ್ಯಾಟ್ ಮಾರಾಟ ಹೆಸರಿನಲ್ಲಿ ವಂಚನೆ: ಎರಡು ಪ್ರತ್ಯೇಕ ಪ್ರಕರಣ ದಾಖಲು
Team Udayavani, Mar 24, 2023, 5:00 AM IST
ಮಂಗಳೂರು: ನೀರುಮಾರ್ಗದಲ್ಲಿ ನಿರ್ಮಾಣವಾಗುತ್ತಿರುವ ವಸತಿ ಸಮುಚ್ಚಯವೊಂದರಲ್ಲಿ ಫ್ಲ್ಯಾಟ್ ಕೊಡಿಸುವುದಾಗಿ ವಂಚಿಸಿರುವ ಕುರಿತಂತೆ ಎರಡು ಪ್ರತ್ಯೇಕ ಪ್ರಕರಣಗಳು ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿದೆ.
ಫ್ಲೋರಿನ್ ಪಿರೇರಾ ಮತ್ತು ಆಲ್ವಿನ್ ಜಾನ್ ಡಿ’ಸೋಜಾ ವಂಚನೆಗೆ ಒಳಗಾದವರು. ಮೊದಲನೇ ಆರೋಪಿ ಜಾಯ್ಸಿ ರೀನಾ ರಸ್ಕಿನ್ಹಾ ಅವರು ತಮಗೆ ವಂಚನೆ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಫ್ಲೋರಿನ್ ಅವರು 102 ನಂಬರಿನ ಫ್ಲ್ಯಾಟ್ ಖರೀದಿ ಮಾಡುವ ಬಗ್ಗೆ ಒಪ್ಪಂದ ಮಾಡಿಕೊಂಡು, 21.27 ಲಕ್ಷ ರೂ. ಪಾವತಿಸಿದ್ದು, ಆ ಬಳಿಕ ಅಲ್ಲಿ ವಾಸ್ತವ್ಯ ಹೂಡಿದ್ದಾರೆ. ಈ ವೇಳೆ ಎರಡನೇ ಆರೋಪಿಯಾಗಿರುವ ಮುರಳೀಧರ ಪೈ ಗೂಂಡಾಗಳೊಂದಿಗೆ ಫ್ಲ್ಯಾಟ್ಗೆ ಬಂದು ತಾನು ಈ ಮನೆಯನ್ನುಖರೀದಿಸಿರುವುದಾಗಿ ತಿಳಿಸಿದ್ದಾನೆ. ಮನೆ ಬಿಟ್ಟು ಕೊಡದಿದ್ದರೆ ನಿನ್ನನ್ನು ಮತ್ತು ಕುಟುಂಬದವರನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ಜಾಯ್ಸಿ , ತನಗಿಂತ ಮೊದಲೇ ಎರಡನೇ ಆರೋಪಿಗೆ ಮನೆ ಮಾರಾಟ ಮಾಡಿ ಮೋಸ ಮಾಡಿರುವುದಾಗಿ ಫ್ಲೋರಿನ್ ದೂರಿನಲ್ಲಿ ಆರೋಪಿಸಿದ್ದಾರೆ.
ಇದೇ ರೀತಿ ಆಲ್ವಿನ್ ಡಿ’ಸೋಜಾ ಅವರೂ, ಅದೇ ಆಪಾರ್ಟ್ಮೆಂಟ್ನ 103 ಮತ್ತು 104ನೇ ಫ್ಲ್ಯಾಟ್ ಖರೀದಿಸಿದ್ದು, ಹಂತ ಹಂತವಾಗಿ ತಲಾ 9.65 ಲಕ್ಷ ಮತ್ತು 15.77 ಲಕ್ಷ ರೂ. ಪಾವತಿಸಿದ್ದಾರೆ. ಬಳಿಕ 104ನೇ ಫ್ಲ್ಯಾಟ್ನಲ್ಲಿ ವಾಸಿಸಲು ಆರಂಭಿಸಿದ್ದಾರೆ. ಈ ವೇಳೆ ಅಲ್ಲಿಗೆ ತನ್ನ ಗೂಂಡಾಗಳೊಂದಿಗೆ ಬಂದ ಎರಡನೇ ಆರೋಪಿಯಾಗಿರುವ ಮುರಳೀಧರ ಪೈ ಅವರು, ಜೀವ ಬೆದರಿಕೆ ಹಾಕಿದ್ದಾರೆ. ಮೊದಲೇ ಮಾರಾಟ ಮಾಡಿ, ಜಾಯ್ಸಿ ಮೋಸ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್