ಸುಲೇಮಾನ್ ಸ್ಟೋನ್ ಹೆಸರಿನಲ್ಲಿ ವಂಚನೆ :ಬಾಗಲಕೋಟೆಯಲ್ಲಿ 5 ಲಕ್ಷ ಜಪ್ತಿ
Team Udayavani, Jan 21, 2022, 8:20 PM IST
ಬಾಗಲಕೋಟೆ : ಬದುಕಿನಲ್ಲಿ ಒಳ್ಳೆಯದಾಗಲು ಸುಲೇಮಾನ್ ಸ್ಟೋನ್ (ದೇವರ ಕಲ್ಲು) ಕೊಡುವುದಾಗಿ ಹೇಳಿ ಮೋಸದ ಮಾಡಿದ ಬಾಗಲಕೋಟೆಯ ಓರ್ವ ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ಆತನಿಂದ ೫ ಲಕ್ಷ ನಗದು ವಶಪಡಿಸಿಕೊಂಡಿದ್ದಾರೆ.
ಅಶೋಕ ರೇವಣಸಿದ್ದಪ್ಪ ಇಂಡಿ ಎಂಬುವವರಿಗೆ ಅಜಯ ಎಂಬ ಹೆಸರಿನ ವ್ಯಕ್ತಿ ಯೂಟೂಬ್ನಲ್ಲಿ ಸುಲೇಮಾನ್ ಸ್ಟೋನ್ ಎಂಬ ದೇವರ (ದೈವಿ) ಕಲ್ಲನ್ನು ಮಾರಾಟ ಮಾಡುವುದಾಗಿ ದೂರವಾಣಿ ಸಂಖ್ಯೆಯ ಸಮೇತ ವಿವರ ಹಾಕಿದ್ದ. ಈ ಕಲ್ಲನ್ನು ನಮ್ಮ ಬಳಿ ಇಟ್ಟುಕೊಂಡರೆ ಯಾವುದೇ ರೀತಿಯ ಅಪಘಾತವಾಗಲ್ಲ. ಯಾರೂ ನಮ್ಮ ಮೇಲೆ ದಾಳಿ ನಡೆಸಲ್ಲ. ಜೀವನದಲ್ಲಿ ತುಂಬಾ ಒಳ್ಳೆಯದಾಗುತ್ತದೆ. ಹಿಂದೆ ರಾಜ-ಮಹಾರಾಜರೆಲ್ಲ ಈ ದೈವಿ ಕಲ್ಲನ್ನು ಬಳಸುತ್ತಿದ್ದರು ಎಂದು ನಂಬಿಸಿ, 7 ಲಕ್ಷ ಮೊತ್ತಕ್ಕೆ ದೈವಿ ಕಲ್ಲನ್ನು ನೀಡುವುದಾಗಿ ಮೋಸತನದಿಂದ ಅಶೋಕ ಅವರನ್ನು ಬಾಗಲಕೋಟೆಗೆ ಕರೆಸಿ ಮೋಸ ಮಾಡಿದ್ದ. ಬಾಗಲಕೋಟೆಗೆ ಕರೆಸಿದ್ದಾಗ 5 ಲಕ್ಷ ನಗದು, ಒಂದು ಚಿನ್ನದ ಬ್ರೆಸಲೇಟ್ ನೀಡುವ ಜತೆಗೆ ಸುಲೇಮಾನ್ ಸ್ಟೋನ್ ಎಂದು ನಂಬಿಸಿ ಒಂದು ಕರಿ ಕಲ್ಲನ್ನು ನೀಡಿದ್ದ.
ಈ ಕುರಿತು ಅಶೋಕ ಅವರು ಬಾಗಲಕೋಟೆ ಶಹರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಬಾಗಲಕೋಟೆ ಉಪ ವಿಭಾಗದ ಡಿವೈಎಸ್ಪಿ ಚಂದ್ರಕಾಂತ ನಂದರಡ್ಡಿ ಮಾರ್ಗದರ್ಶನದಲ್ಲಿ ಶಹರ ಠಾಣೆಯ ಇನ್ಸಪೆಕ್ಟರ್ ವಿಜಯ ಮುರಗುಂಡಿ, ಎಎಸ್ಐ ವಿ.ಕೆ. ಕುಲಕರ್ಣಿ, ಸಿಬ್ಬಂದಿಗಳಾದ ಎಂಡಿ ಸೌದಿ, ವಿ.ಬಿ. ಹಾದಿಮನಿ, ಮುತ್ತು ಅಜಮನಿ, ನಾಸೀರ ಬೀಳಗಿ ಅವರು ತನಿಖೆ ಕೈಗೊಂಡು, ಆರೋಪಿ ನಗರದ ಕೆಂಪು ರಸ್ತೆಯ ಬಳಿಯ ನಿವಾಸಿ ಸಮೀರ (ಅಜಯ) ಜಾಫರ ಜಹಾಗೀರದಾರ ಎಂಬಾತನನ್ನು ಬಂಧಿಸಿದ್ದಾರೆ.
ಆರೋಪ ಸಮೀರನಿಂದ ಒಂದು ಬೈಕ್, 5 ಲಕ್ಷ ನಗದು, ಒಂದು ಚಿನ್ನದ ಬ್ರೆಸಲೇಟ್ ಕೂಡ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣ ಪತ್ತೆ ಮಾಡಿದ ಪೊಲೀಸ್ ಅಧಿಕಾರಿ-ಸಿಬ್ಬಂದಿಗೆ ಇಲಾಖೆ ಪ್ರಸಂಶಿಸಿದ್ದು, ನಗದು ಬಹುಮಾನ ನೀಡಲಾಗುವುದು ಎಂದು ಎಸ್ಪಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ