ರಾಜಕೀಯ ವಿವಾದ; ಮೊಸರು ಪ್ಯಾಕೆಟ್ಗಳ ಮೇಲೆ ಪ್ರಾದೇಶಿಕ ಹೆಸರು!
ತಮಿಳುನಾಡಿನ ರಾಜಕೀಯ ವಿವಾದ...ಹಿಂದಿ ಹೇರಿಕೆ ಪ್ರಯತ್ನ ಎಂದಿದ್ದ ಸಿಎಂ ಎಂ.ಕೆ.ಸ್ಟಾಲಿನ್
Team Udayavani, Mar 30, 2023, 4:12 PM IST
ಚೆನ್ನೈ : ತಮಿಳುನಾಡಿನ ರಾಜಕೀಯ ವಿವಾದದ ನಡುವೆ ಆಹಾರ ಸುರಕ್ಷತೆ ನಿಯಂತ್ರಕ FSSAI ಗುರುವಾರ ತನ್ನ ಆದೇಶವನ್ನು ಪರಿಷ್ಕರಿಸಿ ಮೊಸರು ಪ್ಯಾಕೆಟ್ಗಳ ಮುದ್ರಿತ ಲೇಬಲ್ಗಳಲ್ಲಿ ಪ್ರಾದೇಶಿಕ ಹೆಸರುಗಳನ್ನು ಬಳಸಲು ಅನುಮತಿ ನೀಡಿದೆ.
ಆಹಾರ ವ್ಯಾಪಾರ ನಿರ್ವಾಹಕರು (FBOs) ಈಗ ಲೇಬಲ್ನಲ್ಲಿನ ಬ್ರಾಕೆಟ್ಗಳಲ್ಲಿ ಯಾವುದೇ ಇತರ ಪ್ರಚಲಿತ ಪ್ರಾದೇಶಿಕ ಸಾಮಾನ್ಯ ಹೆಸರಿನ ಜೊತೆಗೆ ‘ಮೊಸರು’ ಪದವನ್ನು ಬಳಸಲು ಅನುಮತಿಸಲಾಗಿದೆ. ಉದಾಹರಣೆಗೆ, ‘ಮೊಸರು (ದಹಿ)’ ಅಥವಾ ‘ಮೊಸರು (ಝಾಮುತ್ದೌಡ್)’, ‘ಮೊಸರು (ತೈರ್)’, ‘ಮೊಸರು (ಪೆರುಗು)’ ಅನ್ನು ಬಳಸಬಹುದು, ಭಾರತೀಯ ಆಹಾರ ಸುರಕ್ಷತಾ ಮಾನದಂಡಗಳ ಪ್ರಾಧಿಕಾರ (FSSAI) ಹೇಳಿಕೆಯಲ್ಲಿ ತಿಳಿಸಿದೆ.
ಹಾಲಿನ ಉತ್ಪನ್ನಗಳ ಗುಣಮಟ್ಟದಿಂದ ‘ಮೊಸರು’ ಪದವನ್ನು ಬಿಟ್ಟುಬಿಡಲಾಗಿದೆ ಮತ್ತು ‘ದಹಿ’ ಪದವನ್ನು ಮಾತ್ರ ಉಲ್ಲೇಖಿಸಲಾಗಿದೆ ಎಂದು ಇತ್ತೀಚೆಗೆ ಸ್ವೀಕರಿಸಿದ ವಿವಿಧ ಪ್ರಾತಿನಿಧ್ಯಗಳ ನಂತರ ಆದೇಶವನ್ನು ಪರಿಷ್ಕರಿಸಲಾಗಿದೆ. ತಮಿಳುನಾಡು ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ – ಆವಿನ್ ಬ್ರಾಂಡ್ನಲ್ಲಿ ಡೈರಿ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದು ಎಫ್ಎಸ್ಎಸ್ಎಐ ನಿರ್ದೇಶನದಂತೆ ತನ್ನ ಮುದ್ರಿತ ಪ್ಯಾಕೆಟ್ ಗಳಲ್ಲಿ ‘ದಹಿ’ ಹಿಂದಿ ಪದವನ್ನು ಬಳಸಲು ನಿರಾಕರಿಸಿತ್ತು ಅದು ಕೇವಲ ತಮಿಳು ತೈರ್ ಪದಕ್ಕೆ ಅಂಟಿಕೊಳ್ಳುತ್ತದೆ ಎಂದು ಹೇಳಿದ ನಂತರ ವಿವಾದ ಭುಗಿಲೆದ್ದಿತು.
ಬುಧವಾರ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಈ ಕ್ರಮವನ್ನು “ಹಿಂದಿ ಹೇರುವ” ಪ್ರಯತ್ನ ಎಂದು ಖಂಡಿಸಿದ್ದರು. ಆಗಸ್ಟ್ ತಿಂಗಳೊಳಗೆ ಈ ನಿರ್ದೇಶನವನ್ನು ಜಾರಿಗೊಳಿಸುವಂತೆ ಸರಕಾರಕ್ಕೆ ಪತ್ರ ಬಂದಿದೆ ಎಂದು ಹೈನುಗಾರಿಕೆ ಸಚಿವ ಎಸ್.ಎಂ.ನಾಸರ್ ತಿಳಿಸಿದ್ದಾರೆ.
“ಹಿಂದಿ ಹೇರಿಕೆಯ ಮುಜುಗರವಿಲ್ಲದ ಒತ್ತಾಯಗಳು ನಮ್ಮದೇ ರಾಜ್ಯಗಳಲ್ಲಿ ತಮಿಳು ಮತ್ತು ಕನ್ನಡವನ್ನು ಹಿಮ್ಮೆಟ್ಟಿಸುವ, ಮೊಸರು ಪ್ಯಾಕೆಟ್ಗೂ ಹಿಂದಿಯಲ್ಲಿ ಲೇಬಲ್ ಮಾಡುವಂತೆ ನಿರ್ದೇಶಿಸುವ ಮಟ್ಟಕ್ಕೆ ಬಂದಿವೆ. ನಮ್ಮ ಮಾತೃಭಾಷೆಯನ್ನು ನಿರ್ಲಕ್ಷಿಸಿದರೆ ಅದಕ್ಕೆ ಕಾರಣರಾದವರನ್ನು ದಕ್ಷಿಣದಿಂದ ಶಾಶ್ವತವಾಗಿ ಗಡಿಪಾರು ಮಾಡಲಾಗುವುದು ಎಂದು ಸ್ಟಾಲಿನ್ ಟ್ವೀಟ್ ಮಾಡಿದ್ದರು.
ಈ ಅಧಿಸೂಚನೆಯು ಪ್ರಾದೇಶಿಕ ಭಾಷೆಗಳನ್ನು ಉತ್ತೇಜಿಸುವ ಕೇಂದ್ರದ ನೀತಿಗೆ ಹೊಂದಿಕೆಯಾಗುವುದಿಲ್ಲ ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಕೆ.ಅಣ್ಣಾಮಲೈ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?