ವರ್ಷಾಂತ್ಯಕ್ಕೆ ಗಗನಯಾನ : ಕೋವಿಡ್ ನಿಂದ ಯೋಜನೆ ಅನುಷ್ಠಾನ ವಿಳಂಬ : ಸಚಿವ ಜಿತೇಂದ್ರ ಸಿಂಗ್
Team Udayavani, Sep 15, 2021, 7:54 PM IST
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆಯ (ಇಸ್ರೋ) ಮಹತ್ವಾಕಾಂಕ್ಷಿ ಯೋಜನೆಯಾದ “ಮಾನವ ರಹಿತ ಬಾಹ್ಯಾಕಾಶ ಪ್ರಯಾಣ’ ಮಾದರಿಯ ಯೋಜನೆಯಾದ “ಗಗನಯಾನ’, 2020ರ ಅಂತ್ಯಕ್ಕೆ ಅಥವಾ 2023ರ ಆರಂಭದಲ್ಲಿ ಅನುಷ್ಠಾನಗೊಳ್ಳಲಿದೆ ಎಂದು ಬಾಹ್ಯಾಕಾಶ ಇಲಾಖೆಯ ಸಹಾಯಕ ಸಚಿವ ಜಿತೇಂದ್ರ ಸಿಂಗ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಆಯೋಜಿಸಲಾಗಿದ್ದ “ಫ್ಯೂಚರ್ ಆಫ್ ಇಂಡಿಯಾ-ಓಷಿಯಾನಾ ಸ್ಪೇಸ್ ಟೆಕ್ನಾಲಜಿ ಪಾರ್ಟ್ನರ್ಶಿಪ್’ ಎಂಬ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, “”ಭಾರತದ 75ನೇ ಸ್ವಾತಂತ್ರ್ಯೋತ್ಸವ ವರ್ಷಾಚರಣೆ ನಿಮಿತ್ತ ಈ ಯೋಜನೆಯನ್ನು 2022ರಲ್ಲೇ ಅನುಷ್ಠಾನಗೊಳಿಸಲು ತೀರ್ಮಾನಿಸಲಾಗಿತ್ತು. ಆದರೆ, ಕೊರೊನಾ ಸಾಂಕ್ರಾಮಿಕದಿಂದಾಗಿ ಯೋಜನೆಯು ವಿಳಂಬವಾಗಿದೆ. ಆದರೆ, ಮುಂದಿನ ವರ್ಷಾಂತ್ಯ ಅಥವಾ 2023ರ ಆರಂಭದಲ್ಲಿ ಈ ಯೋಜನೆ ಅನುಷ್ಠಾನಗೊಳ್ಳುವುದು ನಿಶ್ಚಿತ” ಎಂದಿದ್ದಾರೆ.
ಇದೇ ವೇಳೆ, ಬಾಹ್ಯಾಕಾಶ ತಂತ್ರಜ್ಞಾನದ ಅಭಿವೃದ್ಧಿಗಾಗಿ ಹಲವಾರು ಸ್ಟಾರ್ಟ್ಪ್ಗ್ಳನ್ನು ಹಾಗೂ ಈ ಕ್ಷೇತ್ರದ ಧುರೀಣ ದೇಶಗಳನ್ನು ಸಂಪರ್ಕಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಬಾಹ್ಯಾಕಾಶ ಕ್ಷೇತ್ರಕ್ಕೆ ಬೇಕಾಗುವ ತಂತ್ರಜ್ಞಾನಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಈಗಾಗಲೇ ನ್ಯೂಜಿಲೆಂಡ್, ಆಸ್ಟ್ರೇಲಿಯಾ ದೇಶಗಳು ಮುಂಚೂಣಿಯಲ್ಲಿವೆ. ಆ ಎಲ್ಲಾ ದೇಶಗಳು ಭಾರತದೊಂದಿಗೆ ಕೈ ಜೋಡಿಸಿ, ತಂತ್ರಜ್ಞಾನ ಅಭಿವೃದ್ಧಿಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲು ಉತ್ಸುಕವಾಗಿವೆ. ಆ ದೇಶಗಳೊಡನೆ ಭಾರತ, ಮುಂಬರುವ ದಿನಗಳಲ್ಲಿ ಬಾಹ್ಯಾಕಾಶ ವಿಜ್ಞಾನ ಕುರಿತ ತಂತ್ರಜ್ಞಾನಗಳನ್ನು ಜಂಟಿಯಾಗಿ ರೂಪಿಸಲು ಪ್ರಯತ್ನಿಸಲಾಗುತ್ತದೆ” ಎಂದು ಸಚಿವರು ತಿಳಿಸಿದ್ದಾರೆ.
ಇದನ್ನೂ ಓದಿ :ಕೋವಿಡ್: ಸೋಂಕಿನ ಪ್ರಮಾಣ ಹೆಚ್ಚಳ|ರಾಜ್ಯದಲ್ಲಿಂದು 1116 ಹೊಸ ಪ್ರಕರಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
MUST WATCH
ಹೊಸ ಸೇರ್ಪಡೆ
Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ
Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ
Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ
Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ
Lok Sabha Election: ಉಡುಪಿ- ಜಯಪ್ರಕಾಶ್ ಹೆಗ್ಡೆ ಬಿರುಸಿನ ಪ್ರಚಾರ, ದೇವಾಲಯಕ್ಕೆ ಭೇಟಿ