ಇಬ್ಬರು ಅನಾಥ ಮಕ್ಕಳನ್ನು ದತ್ತು ಪಡೆದ ಗಾಲಿ ಜನಾರ್ದನ ರೆಡ್ಡಿ ದಂಪತಿಗಳು

ಗೆದ್ದರೆ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಗಾರ್ಮೆಂಟ್ ಫ್ಯಾಕ್ಟರಿ

Team Udayavani, Mar 19, 2023, 7:12 PM IST

1-zcds-sdadsa

ಗಂಗಾವತಿ: ವಿರೂಪಾಪೂರ ತಾಂಡದ ಇಬ್ಬರು ಅನಾಥ ಮಕ್ಕಳಿಗೆ ಶಿಕ್ಷಣ ವಸತಿ ವ್ಯವಸ್ಥೆ ಕಲ್ಪಿಸಲು ದತ್ತು ಪಡೆದಿದ್ದು ಅವರ ಭವಿಷ್ಯ ರೂಪಿಸಲಾಗುತ್ತದೆ. ಇದುವರೆಗೂ ಗಂಗಾವತಿ ಮತ ಕ್ಷೇತ್ರದಲ್ಲಿ ಈಗಾಗಲೇ ಇಕ್ಬಾಲ್ ಅನ್ಸಾರಿ ಹಾಗೂ ಪರಣ್ಣ ಮುನವಳ್ಳಿಯವರಿಗೆ ಎರಡೆರಡು ಅವಕಾಶವನ್ನು ನೀಡಲಾಗಿದೆ. ತಮಗೂ ಒಂದು ಅವಕಾಶ ನೀಡಿದರೆ ಮಹಿಳಾ ಉದ್ಯೋಗಕ್ಕಾ ಗಾರ್ಮೆಂಟ್ ಫ್ಯಾಕ್ಟರಿ ಸ್ಥಾಪನೆ ಸೇರಿ ಗಂಗಾವತಿಯ ಚಿತ್ರಣವನ್ನು ಮುಂಬೈ ನಂತೆ ಮಾರ್ಪಾಡು ಮಾಡುವುದಾಗಿ ಕೆಆರ್‌ಪಿ ಪಾರ್ಟಿ ಸ್ಥಾಪಕ ಹಾಗೂ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು.

ನಗರದ ವಿರೂಪಾಪೂರ ತಾಂಡದಲ್ಲಿ ಕೆಆರ್‌ಪಿ ಪಾರ್ಟಿ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಗಂಗಾವತಿಯಲ್ಲಿ ಭತ್ತದ ಬೆಳೆಯು ವಿಪರೀತ ಹಾನಿಯಾಗುತ್ತಿದ್ದು ಮೊದಲಿನಂತೆ ರೈತರಿಗೆ ರೈಸ್ ಮಿಲ್ ಮಾಲೀಕರೂ ಸೇರಿ ಗಂಜ್ ವ್ಯಾಪಾರಿಗಳಿಗೆ ಸರಿಯಾದ ವ್ಯಾಪಾರ ವ್ಯವಹಾರವಿಲ್ಲ. ಗಂಗಾವತಿಯ ಭಾಗದಲ್ಲಿರುವ ಐತಿಹಾಸಿಕ ಪ್ರವಾಸಿ ತಾಣಗಳನ್ನು ಅಭಿವೃದ್ದಿಪಡಿಸಿ ಪ್ರವಾಸೋದ್ಯಮವನ್ನು ಬೆಳೆಸುವ ಮೂಲಕ ಪ್ರಗತಿ ಸಾಧಿಸಬಹುದಾಗಿದೆ. ಇದಕ್ಕಾಗಿ ಅಂಜನಾದ್ರಿ ಹಾಗೂ ಸುತ್ತಲಿನ ಪ್ರದೇಶವನ್ನು ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಅಭಿವೃದ್ಧಿಪಡಿಸಲು 5 ಸಾವಿರ ಕೋಟಿ ರೂ.ಗಳನ್ನು ಸರಕಾರದಿಂದ ಮಂಜೂರಿ ಮಾಡಿಸಲಾಗುತ್ತದೆ. ಹೊಸಪೇಟೆ ಗಂಗಾವತಿ ಪ್ರವಾಸೋದ್ಯಮ ಜೋಡಣೆಗೆ ವರ್ತೂಲ ರಸ್ತೆಗಳ ನಿರ್ಮಾಣ, ಪ್ರತಿ ವಾರ್ಡು ಮತ್ತು ಗ್ರಾಮಗಳಲ್ಲಿ ರೈತರಿಗೆ, ವಿದ್ಯಾರ್ಥಿಗಳಿಗೆ ಜನಸಾಮಾನ್ಯರಿಗೆ ಕೂಲಿಕಾರ್ಮಿಕರಿಗೆ ಅನುಕೂಲವಾಗುವಂತಹ ಯೋಜನೆ ರೂಪಿಸುವ ಕನಸು ಹೊಂದಿದ್ದು ಗಂಗಾವತಿ ಕ್ಷೇತ್ರದ ಜನರು ಒಂದು ಅವಕಾಶ ನೀಡುವಂತೆ ಮನವಿ ಮಾಡಿದರು.

ಇಬ್ಬರು ಮಕ್ಕಳ ದತ್ತು: ವಿರೂಪಾಪೂರ ತಾಂಡದಲ್ಲಿ ಅನಾರೋಗ್ಯದಿಂದ ಮೃತ ಲಂಬಾಣಿ ಮಹಿಳೆ ಶ್ರೀದೇವಿ ಅವರ ಮಕ್ಕಳಾದ ಸ್ವರೂಪ್ ಮತ್ತು ವೇಣು ಎನ್ನುವವರಿಗೆ ಶಿಕ್ಷಣ ಸೇರಿ ಅಗತ್ಯ ಸೌಕರ್ಯ ಕಲ್ಪಿಸಲು ಅವರ ಕುಟುಂಬದ ಹಿರಿಯರ ಜತೆ ಮಾತನಾಡಿ ದತ್ತು ಪಡೆದು ಆರ್ಥಿಕ ನೆರವು ನೀಡಲಾಗುವುದು. ಈಗಾಗಲೇ 6 ತಿಂಗಳ ಹಿಂದೆ ಮಕ್ಕಳಿಗೆ ನೆರವು ನೀಡುತ್ತಿದ್ದು ಎಲ್ಲಿಯೂ ಹೇಳದಂತೆ ಮನವಿ ಮಾಡಿದರೂ ಅವರ ಕುಟುಂಬದವರು ಬಹಿರಂಗ ಪಡಿಸುವಂತೆ ಕೋರಿದ್ದರಿಂದ ಇಂದು ನನ್ನ ಪತ್ನಿ ಅರುಣಾ ಲಕ್ಷ್ಮಿ ಲಂಬಾಣಿ ವೇಷದಲ್ಲಿ ಮಕ್ಕಳ ಜತೆ ಇದ್ದಾರೆಂದರು.

ಹಿರೇಜಂತಗಲ್, ನೀಲಕಂಠೇಶ್ವರ ಕ್ಯಾಂಪ್ ಸೇರಿ ವಿವಿಧ ವಾರ್ಡುಗಳಲ್ಲಿ ಸಮಾವೇಶ ಮಾಡುವ ಮೂಲಕ ವಿಧಾನಸಭಾ ಚುನಾವಣೆಯಲ್ಲಿ ಆಶೀರ್ವಾದ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಪತ್ನಿ ಅರುಣಾ ಲಕ್ಷ್ಮೀ , ಕೆಆರ್‌ಪಿ ಪಾರ್ಟಿಯ ಜಿಲ್ಲಾಧ್ಯಕ್ಷ ಎ.ಮನೋಹರಗೌಡ, ಒಬಿಸಿ ಘಟಕದ ಜಿಲ್ಲಾಧ್ಯಕ್ಷ ಅಮರಜ್ಯೋತಿ ನರಸಪ್ಪ, ಈ.ರಾಮಕೃಷ್ಣ, ಹೊಸಮಲಿ ರಮೇಶ ನಾಯಕ, ಯಮನೂರ ಚೌಡ್ಕಿ, ರಾಮನಾಯಕ್, ಐಲಿ ಚಂದ್ರಪ್ಪ,. ಐಲಿ ನಾರಾಯಣಪ್ಪ, ಪೊಲಕಾಲ್ ಗಾಳಿನಾಥ, ಐಲಿ ಶಂಕರ್, ಸತೀಶ ದಂಡಿನ್ ಸೇರಿ ಅನೇಕರಿದ್ದರು.

ಲಂಬಾಣಿ ಉಡುಗೆಯಲ್ಲಿಗಮನ ಸೆಳೆದ ಅರುಣಾ
ನಗರದ ವಿರೂಪಾಪೂರ ತಾಂಡದಲ್ಲಿ ಕೆಆರ್‌ಪಿ ಪಾರ್ಟಿ ಸಮಾವೇಶದಲ್ಲಿ ಗಾಲಿ ಜನಾರ್ದನರೆಡ್ಡಿ ಪತ್ನಿ ಅರುಣಾ ಲಕ್ಷ್ಮೀ ಯವರು ಲಂಬಾಣಿ ಸಂಪ್ರದಾಯ ವೇಷ ಧರಿಸುವ ಮೂಲಕ ಗಮನ ಸೆಳೆದರು. ಲಂಬಾಣಿ ತಾಂಡದ ಮಹಿಳೆಯರ ಜತೆ ಫೋಟೋ ತೆಗೆಸಿಕೊಂಡರು. ನಂತರ ಲಂಬಾಣಿ ಭಾಷೆಯಲ್ಲಿ ಮಾತನಾಡಿ, ನನ್ನ ಪತಿ ಗಾಲಿ ಜನಾರ್ದನರೆಡ್ಡಿಯವರು ಯಾವುದೇ ತಪ್ಪು ಮಾಡಿಲ್ಲ. ಷಡ್ಯಂತ್ರ ನಡೆಸಿ ಕೇಸ್‌ಗಳಲ್ಲಿ ಸಿಲುಕಿಸಿದ್ದಾರೆ. ದೇವರ ದಯೆಯಿಂದ ಜೀವಂತ ಇದ್ದಾರೆ. ಗಂಗಾವತಿಯ ತಂದೆ ತಾಯಿಂದಿರು ಅವರನ್ನು ಗೆಲ್ಲಿಸುವ ಮೂಲಕ ಆಶೀರ್ವಾದ ಮಾಡಿದರೆ ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ನಮ್ಮ ಇಡೀ ಕುಟುಂಬ ಶ್ರಮಿಸಲಿದೆ ಎಂದರು.

ಟಾಪ್ ನ್ಯೂಸ್

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

Vijay Mallya bought personal assets worth crores abroad before fleeing India: CBI

ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

TDY-21

ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ

indi-1

ಮದ್ಯದ ಅಮಲಿನಲ್ಲಿ ವಿಮಾನದಲ್ಲಿ ರಂಪಾಟ; ಇಬ್ಬರನ್ನು ಬಂಧಿಸಿದ ಮುಂಬೈ ಪೊಲೀಸರು

1-sdsadsd

‘ಮೋದಿ’ ಉಪನಾಮ ಮಾನನಷ್ಟ ಮೊಕದ್ದಮೆ ; ರಾಹುಲ್ ಗಾಂಧಿ ದೋಷಿ ಎಂದು ತೀರ್ಪು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wdd-sad-sad

ನನ್ನ ಸಾಮರ್ಥ್ಯ ಏನು ಎಂದು ತೋರಿಸುತ್ತೇನೆ: ಕೈ ಹಿಡಿದ ಬಾಬುರಾವ್ ಚಿಂಚನಸೂರು

ct rav

ಟಿಪ್ಪುವಿನ ಕಾಲದಲ್ಲಿ ಇದ್ದಿದ್ರೆ ನಾನೇ ಉರಿಗೌಡ…; ಕಾಂಗ್ರೆಸ್ ಗೆ ಸಿ.ಟಿ.ರವಿ ತಿರುಗೇಟು

1-saddasdasdad

ಬೊಮ್ಮಾಯಿ ನಾಯಕತ್ವದ ಮೇಲೆ ನಂಬಿಕೆ ಇಲ್ಲವಾಗಿದೆ ಎಂಬುದು ಸ್ಪಷ್ಟವಾಗಿದೆ : ಡಿಕೆಶಿ

1-wwewqewq

ಭಟ್ಕಳ: ಮುಸ್ಲಿಂ ಅಭ್ಯರ್ಥಿಗಳನ್ನು ಬೆಂಬಲಿಸದಿರಲು ಇಸ್ಲಾ-ವ-ತಂಝೀಮ್ ನಿರ್ಣಯ

congress

ಇಂದು ಬಿಡುಗಡೆಯಾಗುತ್ತಿಲ್ಲ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

TDY-22

ಸ್ಟಾರ್ಟ್‌ಅಪ್‌ ಕನಸು ಹೊತ್ತವರ ಚಿತ್ರ: ಮೇಡ್ ಇನ್ ಬೆಂಗಳೂರು

TDY-1

ಆನ್ಲೈನ್‌ ನಲ್ಲಿ ವಿದ್ಯುತ್‌ ಬಿಲ್‌ ಕಟ್ಟಲು ಹೋಗಿ 7 ಲಕ್ಷ ರೂ. ಕಳೆದುಕೊಂಡ ಮಹಿಳೆ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

ರಣದೀಪ್ ಸಿಂಗ್ ಸುರ್ಜೆವಾಲ ಇತಿಹಾಸವನ್ನು ಓದಿಕೊಳ್ಳಬೇಕು: ಸಿಎಂ ಬೊಮ್ಮಾಯಿ

Vijay Mallya bought personal assets worth crores abroad before fleeing India: CBI

ಬ್ಯಾಂಕ್ ಸಾಲ ತೀರಿಸಲು ಮಲ್ಯ ಬಳಿ ಸಾಕಷ್ಟು ಹಣವಿತ್ತು,ಆದರೂ.; ಚಾರ್ಜ್’ಶೀಟ್ ಸಲ್ಲಿಸಿದ ಸಿಬಿಐ

TDY-21

ಜಗತ್ತನ್ನು ಆಳುತ್ತಿದೆ ರಾಕ್ಷಸ ಚಕ್ರವರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.