ಮದರಸಾಗಳನ್ನು ಮುಚ್ಚಬೇಕೆನ್ನುವ ಅಸ್ಸಾಂ ಸಿಎಂ ಹೇಳಿಕೆ ಖಂಡಿಸಿದ ಗಾಲಿ ರೆಡ್ಡಿ

ಹಗಲಿನಲ್ಲಿ ನಿದ್ದೆ ಮಾಡಿ ರಾತ್ರಿ ಮೀಟಿಂಗ್ ಮಾಡುವ ಚಾಳಿ ನನ್ನದಲ್ಲ

Team Udayavani, Mar 20, 2023, 6:46 PM IST

1-sada-das-d

ಗಂಗಾವತಿ: ಕರ್ನಾಟಕದಲ್ಲಿರುವ ಮದರಸಾಗಳನ್ನು ಮುಸ್ಲಿಮರು ಮುಚ್ಚುವಂತೆ ಹೇಳಿಕೆ ನೀಡಿದ ಅಸ್ಸಾಂ ಮುಖ್ಯಮಂತ್ರಿಗಳ ವರ್ತನೆ ಖಂಡನೀಯವಾಗಿದೆ. ರಾಷ್ಟ್ರಕವಿ ಕುವೆಂಪು ಅವರೇ ನಾಡಗೀತೆ ಜಯ ಭಾರತ ಜನನಿಯ ತನುಜಾತೆಯಲ್ಲಿ ಹೇಳಿರುವಂತೆ ಕರ್ನಾಟಕ ಹಿಂದೂ, ಕ್ರೈಸ್ತ,ಇಸ್ಲಾಂ ಸಕಲ ಧರ್ಮಗಳ ಶಾಂತಿಯ ತೋಟವಾಗಿದೆ. ಸಹೋದರರಂತಿರುವ ಹಿಂದೂ-ಮುಸ್ಲಿಂ ಬಾಂಧವರ ಮಧ್ಯೆ ಜಗಳ ಹಚ್ಚು ಕಾರ್ಯ ಸಲ್ಲದು ಎಂದು ಕಲ್ಯಾಣ ರಾಜ್ಯ ಪ್ರಗತಿ ಪಾರ್ಟಿ ಸಂಸ್ಥಾಪಕ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿ ಹೇಳಿದರು.

ಅವರು ನಗರ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಕೆಆರ್‌ಪಿ ಪಕ್ಷ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿ, ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಅಸ್ಸಾಂ ಮುಖ್ಯಮಂತ್ರಿ ಕರ್ನಾಟಕದಲ್ಲಿರುವ ಮುಸ್ಲಿಂ ಧರ್ಮದ ಎಲ್ಲಾ ಮದರಸಾ ಗಳನ್ನು ಮುಚ್ಚಿಸಬೇಕೇಂದು ಹೇಳಿಕೆ ನೀಡಿರುವುದು ಧರ್ಮ ಧರ್ಮಗಳ ಮಧ್ಯೆ ಜಗಳ ಹಚ್ಚುವ ಕೆಲಸವಾಗಿದೆ. ನಾಡಗೀತೆಯಲ್ಲಿ ಕುವೆಂಪು ರವರು ಹೇಳಿದಂತೆ ಕನ್ನಡ ನಾಡು ಸರ್ವ ಧರ್ಮದವರನ್ನು ಹೊಂದಿರುವುದು ಹೆಮ್ಮೆಯ ಸಂಗತಿ. ಹಿಂದೂ-ಮುಸ್ಲಿಂ ಬಾಂಧವರ ನಡುವೆ ಯಾರಾದರೂ ತಾರತಮ್ಯವನ್ನು ಉಂಟುಮಾಡುವ ಪ್ರಯತ್ನ ಮಾಡಿದರೆ ಅಂತಹ ವ್ಯಕ್ತಿಗಳಿಗೆ ಜನರು ಸರಿಯಾದ ಬುದ್ಧಿ ಕಲಿಸಲಿದ್ದಾರೆ. ಹಿಂದೂ-ಮುಸ್ಲಿಂ ಸಹೋದರಾಗಿದ್ದಾರೆ. ಭಾರತ ಮಾತೆ ನನ್ನ ತಾಯಿ ಎನ್ನುವ ಭಾವನೆ ಅಧಿಕಾರ ನಡೆಸುವವರಿಗಿರಬೇಕು ಎಂದರು.

ಗಂಗಾವತಿಯಲ್ಲಿ ಹಗಲು ಸಮಯದಲ್ಲಿ ನಿದ್ದೆ ಮಾಡಿ ರಾತ್ರಿ ಸಮಯದಲ್ಲಿ ಕೆಲಸ ಮಾಡುವ ವ್ಯಕ್ತಿ ನಾನಲ್ಲ. ಮುಂಜಾನೆ 5 ರಿಂದ ರಾತ್ರಿ 10 ಗಂಟೆಯವರೆಗೆ ನಿಮ್ಮ ಸೇವೆಗೆ ಸಿಗುವ ಸಾಮಾನ್ಯ ಶಾಸಕನಾಗಿ ಕರ್ತವ್ಯ ನಿರ್ವಹಿಸುತ್ತೇನೆ ಎಂದರು.

ನಗರದ ಪ್ರಮುಖ ಮುಖ್ಯ ರಸ್ತೆಗಳೊಂದಿಗೆ ಭಾರಿ ಗಾತ್ರದ ವಾಹನಗಳು ತಿರುಗಾಡಲು ಬೈಪಾಸ್ ರಸ್ತೆ ನಿರ್ಮಿಸುವುದಾಗಿ, ಹಾಗೂ ನಗರದಲ್ಲಿ ಉತ್ತಮ ಗುಣಮಟ್ಟದ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆ ನಿರ್ಮಾಣ, ಐತಿಹಾಸಿಕ ಆನೆಗುಂದಿಯ ಅಂಜನಾದ್ರಿಗೆ ಐದು ವರ್ಷದ ಅವಧಿಯಲ್ಲಿ ಒಟ್ಟಿಗೆ 5000 ಕೋಟಿ ರೂಗಳ ಮೀಸಲಿಟ್ಟು ಅಭಿವೃದ್ಧಿ ಮಾಡುವುದು ಹಾಗೂ ರಾಷ್ಟ್ರದಲ್ಲಿಯೇ ಅತಿ ಎತ್ತರದ ಹನುಮನ ಮೂರ್ತಿ ನಿರ್ಮಾಣ ಮಾಡುವುದಾಗಿ, ಜೊತೆಗೆ ನಗರದ ಬೀದಿ ಬದಿ ವ್ಯಾಪಾರಗಳಿಗೆ ಅನುಕೂಲ ವಾಗುವಂತೆ ಸುಂದರವಾದ ಕಾಂಪ್ಲೆಕ್ಸ್ ನಿರ್ಮಿಸಲಾಗುತ್ತದೆ. ಮುಂದಿನ ಚುನಾವಣೆಯಲ್ಲಿ ಗೆದ್ದ ನಂತರ ಬಳ್ಳಾರಿ ಗೆ ಹೋಗುತ್ತೇನೆ ಅನ್ನುವ ವ್ಯಕ್ತಿಗಳಿಗೆ ನಾನು ಕೇಳುವ ಪ್ರಶ್ನೆ ಎನೆಂದರೇ ಬಳ್ಳಾರಿ ಎನು ಇಟಲಿಯಲ್ಲಿ ಇಲ್ಲ. ಕೇವಲ 1 ಗಂಟೆ ಪ್ರಯಾಣ ದ 60 ಕಿಮಿ ದೂರದಲ್ಲಿದೆ. ನಾನು ಗಂಗಾವತಿ ಗೆ ರಾಜಕೀಯ ಮಾಡಲು ಬಂದಿಲ್ಲ ಅಭಿವೃದ್ಧಿ ಗೆ ನಾನು ರಾಜಕೀಯಕ್ಕೆ ಬಂದಿದ್ದು, ಯಾರ ಮಾತಿಗೂ ಕಿವಿಗೊಡಬೇಡಿ. ನಾನು ರಾಜಕಾರಣ ದಲ್ಲಿ ಇರುವವರೆಗೂ ಗಂಗಾವತಿಯೇ ನನ್ನ ಕರ್ಮ ಭೂಮಿ ಎಂದರು.

ಈ ಸಂದರ್ಭದಲ್ಲಿ ಕೆಆರ್‌ಪಿ ಪಕ್ಷದ ಜಿಲ್ಲಾಧ್ಯಕ್ಷ ಎ.ಮನೋಹರಗೌಡ, ಒಬಿಸಿ ಅಧ್ಯಕ್ಷ ಅಮರಜ್ಯೋತಿ ನರಸಪ್ಪ, ಈ.ರಾಮಕೃಷ್ಣ, ಆಗೋಲಿ ದುರುಗಪ್ಪ ಸೇರಿ ಹಲವು ನಾಯಕರಿದ್ದರು.

ಟಾಪ್ ನ್ಯೂಸ್

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌

ಪ್ರವಾಹ ಮುನ್ಸೂಚನೆ ನೀಡುವ ಗೂಗಲ್‌ನ ಫ್ಲಡ್‌ ಹಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ

ಪಡಿತರ ಧಾನ್ಯ ತರಲು ಹರಸಾಹಸ; ಉಪಕೇಂದ್ರ ಮಾಡಲು ಗ್ರಾಮಸ್ಥರ ಒತ್ತಾಯ

1-sadas

Gangavathi ಕೋತಿ ಕಡಿದು ಐವರಿಗೆ ತೀವ್ರ ಗಾಯ

ದೋಟಿಹಾಳ: ಚೆಕ್‌ ಡ್ಯಾಂನಲ್ಲಿ ಕಸ- ಕುಸಿಯುತ್ತಿದೆ ರಸ್ತೆ

ದೋಟಿಹಾಳ: ಚೆಕ್‌ ಡ್ಯಾಂನಲ್ಲಿ ಕಸ- ಕುಸಿಯುತ್ತಿದೆ ರಸ್ತೆ

Koppala

ಕೊಪ್ಪಳ: ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಬದ್ಧ- ರಾಘವೇಂದ್ರ ಹಿಟ್ನಾಳ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

KRIDL ಇಂಜಿನೀಯರ್ ಮನೆ ಮೇಲೆ ದಾಳಿ ಲೋಕಾಯುಕ್ತ ದಾಳಿ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

ಚಿಕ್ಕಮಗಳೂರು: ನ್ಯಾಯಕ್ಕಾಗಿ 4 ವರ್ಷದ ಮಗು ಜತೆ ರಾತ್ರಿ 1ಗಂಟೆವರೆಗೂ ಠಾಣೆಯಲ್ಲಿ ಕೂತ ಮಹಿಳೆ!

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

Mohan Bhagwat; ಪ್ರತಿಯೊಬ್ಬರೂ ಭಾರತದ ಏಕತೆ-ಸಮಗ್ರತೆಯನ್ನು ಕಾಪಾಡಿಕೊಳ್ಳಲು ಶ್ರಮಿಸಬೇಕು

anಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

ಯಾವ ಯಾವ ರಾಜ್ಯಗಳಲ್ಲಿ ಸೌಲಭ್ಯ- ಕೊಡುಗೆಗಳ ಮಹಾಪೂರ ಜಾರಿಯಲ್ಲಿವೆ? ಇಲ್ಲಿದೆ ಮಾಹಿತಿ

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳೇ ದೂರು ದಾಖಲು

Mangaluru Airport bomb case; ಆದಿತ್ಯ ರಾವ್‌ ವಿರುದ್ಧ ಜೈಲು ಅಧಿಕಾರಿಗಳ ದೂರು